ಉಕ್ರೇನ್ಗೆ ಆರ್ಥಿಕ ನೆರವು ನೀಡಲು ಸಿದ್ಧವಿದ್ದೇವೆ ಎಂದ ವಿಶ್ವಬ್ಯಾಂಕ್
ವಾಷಿಂಗ್ಟನ್, ಫೆಬ್ರವರಿ 25: ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿರುವ ಕಾರಣ ಸಂಕಷ್ಟದಲ್ಲಿ ಸಿಲುಕಿದೆ. ಆರ್ಥಿಕ ನೆರವು ನೀಡಲು ಸಿದ್ಧವಿದ್ದೇವೆ ಎಂದು ವಿಶ್ವಬ್ಯಾಂಕ್ ಹೇಳಿದೆ.
ಉಕ್ರೇನ್ನಲ್ಲಿ ರಷ್ಯಾ ದಾಳಿಯಿಂದಾಗುತ್ತಿರುವ ಹಿಂಸಾಚಾರ ಮತ್ತು ಜೀವಹಾನಿಗೆ ವಿಶ್ವ ಬ್ಯಾಂಕ್ ಆತಂಕಗೊಂಡಿದೆ. ಉಕ್ರೇನ್, ವಿಶ್ವಬ್ಯಾಂಕ್ನ ದೀರ್ಘಕಾಲದ ಪಾಲುದಾರ ಸದಸ್ಯ ರಾಷ್ಟ್ರವಾಗಿದೆ. ಈ ನಿರ್ಣಾಯಕ ಸಮಯದಲ್ಲಿ ಆ ದೇಶದ ಬೆಂಬಲವಾಗಿ ನಿಲ್ಲಲಾಗುವುದು ಎಂದು ವಿಶ್ವ ಬ್ಯಾಂಕ್ ಗ್ರೂಪ್ನ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಹೇಳಿಕೆ ನೀಡಿದ್ದಾರೆ.
ಉಕ್ರೇನ್ನಲ್ಲಿನ ವಿನಾಶಕಾರಿ ಬೆಳವಣಿಗೆಗಳು ದೂರಗಾಮಿ ಆರ್ಥಿಕ ಮತ್ತು ಸಾಮಾಜಿಕ ದುಷ್ಪರಿಣಾಮಗಳನ್ನು ಸೃಷ್ಟಿಸುತ್ತವೆ. ಇದನ್ನು ಭರಿಸಲು ಅಂತಾರಾಷ್ಟ್ರೀಯ ಹಣಕಾಸು ನಿಧಿ(IMF)ಯೊಂದಿಗೆ ನಿಕಟ ಸಂಪರ್ಕ ಸಾಧಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ರಷ್ಯಾ ಯುದ್ಧ ಘೋಷಿಸುವ ಮುನ್ನ ಉಕ್ರೇನ್ ಅಧ್ಯಕ್ಷ ಜೆಲೆನ್ಸ್ಕಿ ವಿಶ್ವಬ್ಯಾಂಕ್ ಅಧ್ಯಕ್ಷ, ನಿರ್ದೇಶಕರನ್ನು ಭೇಟಿಯಾಗಿ ಒಂದು ವೇಳೆ ಯುದ್ಧ ನಡೆದಲ್ಲಿ ಆರ್ಥಿಕ ನೆರವು ನೀಡಬೇಕು ಎಂದು ಕೋರಿದ್ದರು.
ಉಕ್ರೇನ್ ಮತ್ತು ರಷ್ಯಾ ಬಿಕ್ಕಟ್ಟಿನ ಮಧ್ಯೆ ಯಾರೂ ತಲೆದೂರಿಸಕೂಡದು ಎಂಬ ರಷ್ಯಾದ ಬೆದರಿಕೆಯ ಮಧ್ಯೆಯೂ ವಿಶ್ವಬ್ಯಾಂಕ್ ದಾಳಿಯಿಂದ ತತ್ತರಿಸಿರುವ 'ಉಕ್ರೇನ್ಗೆ ತಕ್ಷಣಕ್ಕೆ ಹಣಕಾಸಿನ ನೆರವು ನೀಡಲು ಸಿದ್ದ' ಎಂದು ಘೋಷಿಸಿದೆ.
ಉಕ್ರೇನ್ಗೆ ತಕ್ಷಣದ ಆರ್ಥಿಕ ನೆರವು ಒದಗಿಸಲು ಸಿದ್ಧರಾಗಿದ್ದೇವೆ. ಅಭಿವೃದ್ಧಿ ಪಾಲುದಾರ ದೇಶಗಳಿಗೆ ವಿಶ್ವಬ್ಯಾಂಕ್ ಸಮೂಹವು ತ್ವರಿತವಾಗಿ ಹಣಕಾಸು ಸಹಾಯ ಮತ್ತು ರಾಜತಾಂತ್ರಿಕ ಬೆಂಬಲವನ್ನು ನೀಡಲು ಸಿದ್ಧ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ರಷ್ಯಾ ತನ್ನ ದೇಶದ ಮೇಲೆ ನಡೆಸಿದ ದಾಳಿಯಲ್ಲಿ ಇದುವರೆಗೆ 137 ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಹೇಳಿದ್ದಾರೆ.
ಇನ್ನು ತನ್ನ ದೇಶದ ಮೇಲೆ ದಾಳಿ ಮಾಡಿದ್ದ ರಷ್ಯಾ ವಿರುದ್ಧ ಏಕಾಂಗಿಯಾಗಿ ಹೋರಾಡಲಿದೆ ಎಂದು ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಹೇಳಿದ್ದಾರೆ. ಇತರೆ ರಾಷ್ಟ್ರಗಳು ರಷ್ಯಾ ಕ್ರಮವನ್ನು ಖಂಡಿಸಿದರೂ ನೇರವಾಗಿ ಯುದ್ಧದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ವೊಲೊಡಿಮಿರ್ ಜೆಲೆನ್ಸ್ಕಿ ತನ್ನ ಶತ್ರು ರಾಷ್ಟ್ರವನ್ನು ಒಂಟಿಯಾಗಿ ಎದುರಿಸಲಿದೆ ಎಂದಿದ್ದಾರೆ.
ಒಡೆಸಾ ಪ್ರದೇಶದ ಜ್ಮಿನಿ ದ್ವೀಪದಲ್ಲಿರುವ ಎಲ್ಲ ಭದ್ರತಾ ಪಡೆಯ ಸಿಬ್ಬಂದಿಯನ್ನು ರಷ್ಯಾ ಹೊಡೆದುರುಳಿಸಿದೆ. ಅಲ್ಲದೇ ಆ ಪ್ರದೇಶವನ್ನು ರಷ್ಯಾ ವಶಕ್ಕೆ ಪಡೆದಿದೆ. ಯುದ್ಧದಲ್ಲಿ ಮೃತಪಟ್ಟ ಸೈನಿಕರನ್ನು ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಹುತಾತ್ಮರು ಎಂದು ಕರೆದಿದ್ದಾರೆ.
ಈ ಬಗ್ಗೆ ಅವರು ಮಾತನಾಡಿರುವ ವಿಡಿಯೋದಲ್ಲಿ, ರಷ್ಯಾವು ಸೇನಾ ನೆಲೆಗಳ ಮೇಲೆ ಮಾತ್ರವಲ್ಲದೇ ಜನರ ಮೇಲೂ ದಾಳಿ ಮಾಡುತ್ತಿದೆ. ಪ್ರಮುಖ ನಗರಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಅಮಾಯಕರ ಬಲಿ ತೆಗೆದುಕೊಳ್ಳುತ್ತಿದೆ. ಈವರೆಗೆ ಸೈನಿಕರು ಸೇರಿದಂತೆ 137 ಜನರು ಹತರಾಗಿದ್ದು, ಇನ್ನೂ ನೂರಾರು ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
Recommended Video
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications