2023ಕ್ಕೆ ಜನಸಂಖ್ಯೆಯಲ್ಲಿ ಚೀನಾವನ್ನು ಮೀರಿಸಲಿದೆ ಭಾರತ
ನ್ಯೂಯಾರ್ಕ್ , ನ. 15: ಮಂಗಳವಾರ (ನವೆಂಬರ್ 15) ವಿಶ್ವ ಜನಸಂಖ್ಯೆಯು 800 ಕೋಟಿಗೆ ಮುಟ್ಟುತ್ತದೆ ಎಂದು ವಿಶ್ವಸಂಸ್ಥೆಯು ಅಂದಾಜಿಸಿದೆ. ವಿಶ್ವ ಜನಸಂಖ್ಯಾ ದಿನದಂದು ವರದಿ ಬಿಡುಗಡೆ ಮಾಡಲಾಗಿದೆ.
ಪ್ರಸ್ತುತ 7,999,959,816 ಜನಸಂಖ್ಯೆ ಇದ್ದು, ಮುಂದಿನ ವರ್ಷ ಅಂದರೆ 2023ಕ್ಕೆ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಭಾರತವಾಗಲಿದೆ. ಈ ಮೂಲಕ ಜನಸಂಖ್ಯೆಯಲ್ಲಿ ಭಾರತವು ಚೀನಾವನ್ನು ಮೀರಿಸುತ್ತದೆ ಎಂದು ವಿಶ್ವಸಂಸ್ಥೆ ಮುನ್ಸೂಚನೆ ನೀಡಿದೆ.
ವಿಶ್ವ ಜನಸಂಖ್ಯಾ ದಿನದಂದು ಬಿಡುಗಡೆಯಾಗಿರುವ ವರದಿಯಲ್ಲಿ ಜಾಗತಿಕ ಜನಸಂಖ್ಯೆಯು 2080ಕ್ಕೆ ಸುಮಾರು 10.4 ಶತಕೋಟಿಗೆ ಏರಲಿದೆ ಎಂದು ಅಂದಾಜಿಸಲಾಗಿದೆ.

ಜಾಗತಿಕ ಜನಸಂಖ್ಯೆಯು 700 ಕೋಟಿ 800 ಕೋಟಿಗೆ ತಲುಪಲು ಸುಮಾರು 12 ವರ್ಷಗಳನ್ನು ತೆಗೆದುಕೊಂಡಿದೆ. ಇದು 2037ರ ವೇಳಗೆ 900 ಕೋಟಿಗೆ ತಲುಪಲಿದೆ ಎಂದು ಅಂದಾಜಿಸಲಾಗಿದೆ.
2050 ರವರೆಗೆ ವಿಶ್ವದ ಜನಸಂಖ್ಯೆಯ ಶೇಕಡಾ 50% ಜನಸಂಖ್ಯೆಯು ಕೇವಲ ಎಂಟು ದೇಶಗಳಲ್ಲಿ ಇರಲಿದೆ. ಅವುಗಳೆಂದರೆ, ಕಾಂಗೋ, ಈಜಿಪ್ಟ್, ಇಥಿಯೋಪಿಯಾ, ಭಾರತ, ನೈಜೀರಿಯಾ, ಪಾಕಿಸ್ತಾನ, ಫಿಲಿಪೈನ್ಸ್ ಮತ್ತು ತಾಂಜಾನಿಯಾ ದೇಶಗಳಾಗಿವೆ.
2023ಕ್ಕೆ ಜನಸಂಖ್ಯೆಯಲ್ಲಿ ಚೀನಾವನ್ನು ಮೀರಿಸಲಿದೆ ಭಾರತ
ವಿಶ್ವಸಂಸ್ಥೆಯ ಪ್ರಕಾರ ಮುಂದಿನ ವರ್ಷಕ್ಕೆ ಜನಸಂಖ್ಯೆ ಹೆಚ್ಚಳದಲ್ಲಿ ಭಾರತವಯ ಚೀನಾವನ್ನು ಹಿಂದಿಕ್ಕಲಿದೆ. ಈ ಮೂಲಕ ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಭಾರತ ಹೊರಹೊಮ್ಮಲಿದೆ. ಸದ್ಯಕ್ಕೆ ಭಾರತದಲ್ಲಿ 141 ಕೋಟಿ ಜನಸಂಖ್ಯೆಯಿದೆ. ಚೀನಾದಲ್ಲಿ ಪ್ರಸ್ತುತ 145 ಕೋಟಿ ಜನಸಂಖ್ಯೆಯಿದೆ ಎಂದು ವಿಶ್ವಸಂಸ್ಥೆ ಮಾಹಿತಿ ನೀಡಿದೆ.
ಈ ವರ್ಷ ಜನರ ಆರೋಗ್ಯದಲ್ಲಿ ಚೇತರಿಕೆ ಕಂಡು ಜೀವಿತಾವಧಿ ಹೆಚ್ಚಳವಾಗಿದೆ. ತಾಯಿ ಮತ್ತು ಶಿಶು ಮರಣ ಪ್ರಮಾಣ ಭಾರೀ ಮಟ್ಟದಲ್ಲಿ ಇಳಿಕೆಯಾಗಿದೆ. ಪೋಷಕಾಂಶಯುಕ್ತ ಆಹಾರ ಸೇವನೆ ಹೆಚ್ಚಾಗಿದೆ ಎಂದು ವಿಶ್ವಸಂಸ್ಥೆಯ ವರದಿ ತಿಳಿಸಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications