3ನೇ ಮಹಾಯುದ್ಧ ಪರಮಾಣು ಮತ್ತು ವಿನಾಶಕಾರಿ ಆಗಿರಲಿದೆ ಎಂದ ರಷ್ಯಾ ಸಚಿವ
ಕೀವ್, ಮಾರ್ಚ್ 2: ಮೂರನೇ ಮಹಾಯುದ್ಧವು 'ಪರಮಾಣು ಮತ್ತು ವಿನಾಶಕಾರಿ' ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಹೇಳಿದ್ದು, ಯಾವುದೇ ಕಾರಣಕ್ಕೂ ಉಕ್ರೇನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆಯಲು ರಷ್ಯಾ ಅನುಮತಿಸುವುದಿಲ್ಲ ಎಂದಿದ್ದಾರೆ.
ರಷ್ಯಾ ಎಲ್ಲಾ ನಿರ್ಬಂಧಗಳಿಗೆ ಸಿದ್ಧವಾಗಿದೆ. ಆದರೆ ಪಶ್ಚಿಮ ಭಾಗವು ತನ್ನ ಕ್ರೀಡಾಪಟುಗಳು, ಪತ್ರಕರ್ತರು ಮತ್ತು ಸಾಂಸ್ಕೃತಿಕ ಕ್ಷೇತ್ರದ ಪ್ರತಿನಿಧಿಗಳನ್ನು ಗುರಿಯಾಗಿಸುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಲಾವ್ರೊವ್ ಹೇಳಿದ್ದಾರೆ.
ಉಕ್ರೇನ್ನ ವಿರುದ್ಧ ರಷ್ಯಾದ ನಡೆಸುತ್ತಿರುವ ಸಮರವು ಏಳನೇ ದಿನಕ್ಕೆ ಕಾಲಿಟ್ಟಿದೆ. ಕೀವ್ ಮತ್ತು ಇತರ ದೊಡ್ಡ ನಗರಗಳಲ್ಲಿ ರಷ್ಯಾದ ಆಕ್ರಮಣ ತೀವ್ರಗೊಂಡಿದೆ. ಉಕ್ರೇನ್ನ ಭದ್ರತಾ ಸೇವೆಯನ್ನು ಹೊಡೆದು ಹಾಕಲಾಗುತ್ತದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ.

ಖಾರ್ಕಿವ್ ನಗರದಲ್ಲಿ ಹೆಚ್ಚಿನ ದಾಳಿ:
ದೇಶದ ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್ ಅನ್ನು ರಾಕೆಟ್ಗಳು ಮತ್ತು ಭಾರೀ ಫಿರಂಗಿ ಗುಂಡಿನ ದಾಳಿಯ ಮೂಲಕ ಹೊಡೆದುರುಳಿಸಲಾಗುತ್ತಿದೆ. ಈ ಹಂತದಲ್ಲಿ ರಷ್ಯಾ ಪಡೆಗಳು ತಮ್ಮ ಸೇನಾ ಕಾರ್ಯಾಚರಣೆಗಳನ್ನು ಗಣನೀಯವಾಗಿ ಹೆಚ್ಚಿಸಿದವು. ಖಾರ್ಕಿವ್ನಲ್ಲಿ ನಡೆದ ಶೆಲ್ ದಾಳಿಯಲ್ಲಿ ನವೀನ್ ಎಂಬ ಭಾರತೀಯ ವಿದ್ಯಾರ್ಥಿಯೂ ಸಾವನ್ನಪ್ಪಿದ್ದರು.
ಶೆಲ್ ದಾಳಿಯನ್ನು "ಯುದ್ಧ ಅಪರಾಧ" ಎಂದ ಝೆಲೆನ್ಸ್ಕಿ:
ಖಾರ್ಕಿವ್ನಲ್ಲಿ ನಡೆದ ಶೆಲ್ ದಾಳಿಯನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ "ಯುದ್ಧ ಅಪರಾಧ" ಎಂದು ಕರೆದಿದ್ದಾರೆ. ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತನ್ನ ರಾಷ್ಟ್ರದ ಪರಮಾಣು ಪಡೆಗಳಿಗೆ ಪಶ್ಚಿಮದೊಂದಿಗಿನ ಉದ್ವಿಗ್ನತೆಯ ಬಗ್ಗೆ ಹೆಚ್ಚಿನ ಎಚ್ಚರಿಕೆಯನ್ನು ನೀಡುವಂತೆ ಆದೇಶಿಸಿದ್ದಾರೆ. ತದನಂತರ ರಷ್ಯಾ ಕೂಡ ಬ್ಯಾರೆಂಟ್ಸ್ ಸಮುದ್ರದಲ್ಲಿ ಅಭ್ಯಾಸವನ್ನು ನಡೆಸಿದೆ.
ಇದರ ಮಧ್ಯೆ ಯುಎಸ್ ಅಧ್ಯಕ್ಷ ಜೋ ಬೈಡನ್ ಉಕ್ರೇನ್ಗೆ ತಮ್ಮ ಬೆಂಬಲವನ್ನು ಬಲಪಡಿಸಿದ್ದಾರೆ. ಆದರೆ ರಷ್ಯಾ ವಿರುದ್ಧದ ಹೋರಾಟದಲ್ಲಿ ಯುಎಸ್ ಭಾಗಿಯಾಗುವುದಿಲ್ಲ ಎಂದು ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications