37 ವರ್ಷಗಳ ಬಳಿಕ ಜಿಂಬಾಬ್ವೆಗೆ ಹೊಸ ಅಧ್ಯಕ್ಷರ ಆಯ್ಕೆ
ಹರಾರೆ, ಆಗಸ್ಟ್ 03: ರಾಬರ್ಟ್ ಮುಗಾಬೆ ಅವರ ಸತತ 37 ವರ್ಷಗಳ ಕಾಲದ ಅಧಿಕಾರ ಕಂಡಿದ್ದ ಜಿಂಬಾಬ್ವೆ ಈಗ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಿದೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಎಮ್ಮರ್ಸನ್ ನನ್ಗಾಗುವಾ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ.
ಸೋಮವಾರ ನಡೆದ ಮೊದಲ ಸಾರ್ವತ್ರಿಕ ಚುನಾವಣೆಯ ಫಲಿತಾಂಶವನ್ನು ಶುಕ್ರವಾರದಂದು ಜಿಂಬಾಬ್ವೆಯ ಚುನಾವಣೆ ಆಯೋಗ ಪ್ರಕಟಿಸಿದೆ. ಜಿಂಬಾಬ್ವೆ ಆಫ್ರಿಕನ್ ನ್ಯಾಶನಲ್ ಯೂನಿಯನ್-ಪೆಟ್ರಿಯಾಟಿಕ್ ಫ್ರಂಟ್ (ಜೆಎಎನ್ಯು-ಪಿಎಫ್) ಪಕ್ಷದ ಅಭ್ಯರ್ಥಿ ಎಮ್ಮರ್ಸನ್ ನನ್ಗಾಗುವಾ ಗೆಲುವು ಸಾಧಿಸಿದ್ದಾರೆ.

ಎಮ್ಮರ್ಸನ್ ಶೇ 50.8 ಮತ(2.46 ಮಿಲಿಯನ್ ಮತ) ಪಡೆದರೆ, ಪ್ರಮುಖ ವಿರೋಧ ಪಕ್ಷದ ಅಭ್ಯರ್ಥಿ ನೆಲ್ಸನ್ ಚಾಮಿಸ ಶೇ 44.3 (2.14 ಮಿಲಿಯನ್ ಮತಗಳು) ಪಡೆದಿದ್ದಾರೆ. ಚುನಾವಣೆ ಫಲಿತಾಂಶದ ಬಗ್ಗೆ ಚಾಮಿಸ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿ, ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ. ಶೇ 50ಕ್ಕಿಂತ ಹೆಚ್ಚಿನ ಮತಗಳ ಗಳಿಕೆ ಇದ್ದರೆ ಮಾತ್ರ ಫಲಿತಾಂಶ ಹೊರ ಹಾಕುವ ಸಾಧ್ಯತೆಯಿತ್ತು.
'ನಮ್ಮ ಪಕ್ಷ ಫಲಿತಾಂಶವನ್ನು ಎಮ್ಮರ್ಸನ್ ಅಧ್ಯಕ್ಷರನ್ನಾಗಿ ಘೋಷಿಸಿ, ಚುನಾವಣೆ ಆಯೋಗ ನೀಡುವ ಪತ್ರಗಳಿಗೆ ನಾವು ಸಹಿ ಹಾಕುವುದಿಲ್ಲ. ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ' ಎಂದು ಚಾಮಿಸಾ ಅವರ ವಕ್ತಾರರು ಹೇಳಿದ್ದಾರೆ.
ಬ್ರಿಟನ್ನಿಂದ 1980ರಲ್ಲಿ ಜಿಂಬಾಬ್ವೆ ಸ್ವಾತಂತ್ರ್ಯ ಪಡೆದುಕೊಂಡಿತ್ತು.ಸೇನಾ ಕ್ರಾಂತಿಗೂ ಮುನ್ನ 37 ವರ್ಷಗಳ ಸುದೀರ್ಘ ಅವಧಿಗೆ ಅಧ್ಯಕ್ಷರಾಗಿದ್ದರು ಮುಗಾಬೆ. ಸದ್ಯ ಅವರಿಗೀಗ 94 ವರ್ಷ ವಯಸ್ಸು. ಹಾಗೆ ನೋಡಿದರೆ ಮುಗಾಬೆ ಅವಧಿಯಲ್ಲಿ ಆಡಳಿತ ಹದಗೆಟ್ಟಿತ್ತು. ದೇಶದಲ್ಲಿ ಸಾಮೂಹಿಕ ವಲಸೆ, ಅಕ್ರಮ ಮತದಾನ, ಹಳ್ಳ ಹಿಡಿದ ಆರ್ಥಿಕತೆಗಳು ಪ್ರಮುಖ ಸಮಸ್ಯೆಗಳಾಗಿ ಗುರುತಿಸಿಕೊಂಡಿದ್ದವು.
Thank you Zimbabwe!
— President of Zimbabwe (@edmnangagwa) August 2, 2018
I am humbled to be elected President of the Second Republic of Zimbabwe.
Though we may have been divided at the polls, we are united in our dreams.
This is a new beginning. Let us join hands, in peace, unity & love, & together build a new Zimbabwe for all! pic.twitter.com/FbdrixAktR
ಮುಗಾಬೆ ಅವರ ಆರೋಗ್ಯ ಹದಗೆಟ್ಟಿತ್ತು. ಈ ಹಿನ್ನಲೆಯಲ್ಲಿ ತಮ್ಮ ಪತ್ನಿ 52 ವರ್ಷದ ಗ್ರೇಸ್ ಮುಗಾಬೆ ಅವರನ್ನು ಮುಂದಿನ ಅಧ್ಯಕ್ಷರನ್ನಾಗಿಸಲು ಪ್ರಯತ್ನ ನಡೆಸಿದ್ದರು. ಇದು ಸೇನೆಯ ಹಿರಿಯ ಅಧಿಕಾರಿಗಳಿಗೆ ಇಷ್ಟವಿರಲಿಲ್ಲ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications