ಎಚ್ಚೆತ್ತುಕೊಳ್ಳದ ಜನ: ರಾಜಸ್ಥಾನದ ದರ್ಗಾ ಸಭೆಯಲ್ಲಿ ನೂರಾರು ಮಂದಿ ಭಾಗಿ
ಜೈಪುರ, ಏಪ್ರಿಲ್ 2: ತಬ್ಲಿಘ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ನೂರಾರು ಮಂದಿಗೆ ಕೊರೊನಾ ಹರಡಿರುವುದು ತಿಳಿದುಬಂದ ಬೆನ್ನಲ್ಲೇ ರಾಜಸ್ಥಾನದ ದರ್ಗಾ ಸಭೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿರುವುದು ಬೆಳಕಿಗೆ ಬಂದಿದೆ.
Recommended Video
ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ನೂರಾರು ಜನರಿಗೆ ಕೊರೊನಾ ಸೋಂಕು ತಗುಲಿರುವುದು ತಿಳಿದಿದ್ದರೂ ಜನರಲ್ಲಿ ಅರಿವು ಮೂಡಿದಂತೆ ಕಾಣುತ್ತಿಲ್ಲ.
ಏಕೆಂದರೆ ಈ ಘಟನೆಯ ಬೆನ್ನಲ್ಲೇ ರಾಜಸ್ಥಾನದ ಅಜ್ಮೇರ್ ಜಿಲ್ಲೆಯ ಸರವಾರ್ ಪಟ್ಟಣದ ದರ್ಗಾವೊಂದರಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಧಾರ್ಮಿಕ ಸಭೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದಾರೆ.

ಬಳಿಕ ಪೊಲೀಸರು ಬಂದು ಗುಂಪನ್ನು ಚೆದುರಿಸಿದ್ದು, ಲಾಕ್ಡೌನ್ ನಿಯಮ ಉಲ್ಲಂಘಿಸಿ ಸಭೆ ಆಯೋಜಿಸಿದ್ದ ಕಾರಣದಿಂದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಂಪ್ರದಾಯದಂತೆ ಪ್ರತಿವರ್ಷ ಸರವಾರ್ ದರ್ಗಾಕ್ಕೆ ಅಜ್ಮೇರ್ನ ಸೂಫಿ ಸಂತ ಮೊಹಿಮುದ್ದೀನ್ ಚಿಸ್ತಿ ದರ್ಗಾದ ಧಾರ್ಮಿಕ ಮುಖಂಡರು ಚಾದರ ಅರ್ಪಿಸುತ್ತಾರೆ.
ಆದರೆ , ಲಾಕ್ಡೌನ್ ಹಿನ್ನೆಲೆಯಲ್ಲಿ ಜನರ ಓಡಾಟಕ್ಕೆ ನಿರ್ಬಂಧ ವಿಧಿಸಿದ್ದರೂ ದರ್ಗಾದ ಧಾರ್ಮಿಕ ಸಭೆಯಲ್ಲಿ 100ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದಾರೆ.
ತಬ್ಲಿಘ್ನಲ್ಲಿ ಅಷ್ಟೊಂದು ದೊಡ್ಡ ಘಟನೆ ನಡೆದಿದ್ದು, ಇಡೀ ದೇಶವೇ ಭೀತಿಯಲ್ಲಿರುವಾಗ ಮತ್ತೆ ಅದೇ ರೀತಿಯ ಸಭೆಯನ್ನು ನಡೆಸಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.












Click it and Unblock the Notifications