ಭೂ ಒತ್ತುವರಿ ಖಂಡಿಸಿ 21 ರೈತರಿಂದ 'ಜಮೀನು ಸಮಾಧಿ ಸತ್ಯಾಗ್ರಹ'
ಜೈಪುರ, ಮಾರ್ಚ್ 2: ವಸತಿ ಯೋಜನೆಗಾಗಿ ಜೈಪುರ ಅಭಿವೃದ್ದಿ ಪ್ರಾಧಿಕಾರದ ಭೂ ಒತ್ತುವರಿ ಖಂಡಿಸಿ 21 ರೈತರು ಜಮೀನು ಸಮಾಧಿ ಸತ್ಯಾಗ್ರಹ ಮಾಡುತ್ತಿರುವ ಘಟನೆ ರಾಜಸ್ತಾನದ ನಿಂದರ್ ಗ್ರಾಮದಲ್ಲಿ ಕಂಡು ಬಂದಿದೆ.
ಜೈಪುರ ಅಭಿವೃದ್ದಿ ಪ್ರಾಧಿಕಾರ ಅಕ್ರಮವಾಗಿ ರೈತರ ಭೂಮಿ ವಶಪಡಿಸಿಕೊಂಡಿದೆ. ಭೂಸ್ವಾಧೀನ ತಿದ್ದುಪಡಿ ಕಾಯ್ದೆಯ ಪ್ರಕಾರ ತಮ್ಮ ಜಮೀನನ್ನು ವಶಪಡಿಸಿಕೊಂಡು, ಅದಕ್ಕೆ ತಕ್ಕಂತೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.
ಜಮೀನು ಸಮಾಧಿ ಸತ್ಯಾಗ್ರಹ ಅಂದ್ರೆ ಕುತ್ತಿಗೆವರೆಗೂ ಭೂಮಿಯಲ್ಲಿ ಹೂತುಕೊಂಡು ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. 21 ರೈತರ ಪೈಕಿ 5 ಮಹಿಳೆಯರು ಭಾಗಿಯಾಗಿದ್ದಾರೆ.

ಈ ಮೊದಲು ಜನವರಿ ತಿಂಗಳಲ್ಲಿ ರೈತರು ಜಮೀನು ಸಮಾಧಿ ಸತ್ಯಾಗ್ರಹ ಮಾಡಿದ್ದರು. ಆ ಸಂದರ್ಭದಲ್ಲಿ ರಾಜ್ಯ ಸರ್ಕಾರ 50 ದಿನದಲ್ಲಿ ತಮ್ಮ ಸಮಸ್ಯೆ ಬಗೆಹರಿಸಿಕೊಡುವುದಾಗಿ ಆಶ್ವಾಸನೆ ನೀಡಿತ್ತು. ನಾಲ್ಕು ದಿನದ ನಂತರ ಪ್ರತಿಭಟನೆ ಕೈಬಿಟ್ಟಿದ್ದರು.
'ಸದ್ಯಕ್ಕೆ 21 ರೈತರು ಜಮೀನು ಸಮಾಧಿ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದಾರೆ. ಸೋಮವಾರ 50 ಜನ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ತಮ್ಮ ಹಕ್ಕು ತಮಗೆ ಸಿಗುವವರೆಗೂ ಈ ಹೋರಾಟ ನಿಲ್ಲಿಸಲ್ಲ' ಎಂದು ಹೋರಾಟಗಾರ ನಾಗೇಂದ್ರ ಸಿಂಗ್ ತಿಳಿಸಿದ್ದಾರೆ.

ಇದಕ್ಕೂ ಮುಂಚೆ 2017ರಲ್ಲಿ ಜೈಪುರ ಅಭಿವೃದ್ದಿ ಪ್ರಾಧಿಕಾರದ ವಿರುದ್ಧ ರೈತರು ಪ್ರತಿಭಟನೆ ಮಾಡಿದ್ದರು. ಇದರಲ್ಲಿ ಹಲವರು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications