ಭೂ ಒತ್ತುವರಿ ಖಂಡಿಸಿ 21 ರೈತರಿಂದ 'ಜಮೀನು ಸಮಾಧಿ ಸತ್ಯಾಗ್ರಹ'
ಜೈಪುರ, ಮಾರ್ಚ್ 2: ವಸತಿ ಯೋಜನೆಗಾಗಿ ಜೈಪುರ ಅಭಿವೃದ್ದಿ ಪ್ರಾಧಿಕಾರದ ಭೂ ಒತ್ತುವರಿ ಖಂಡಿಸಿ 21 ರೈತರು ಜಮೀನು ಸಮಾಧಿ ಸತ್ಯಾಗ್ರಹ ಮಾಡುತ್ತಿರುವ ಘಟನೆ ರಾಜಸ್ತಾನದ ನಿಂದರ್ ಗ್ರಾಮದಲ್ಲಿ ಕಂಡು ಬಂದಿದೆ.
ಜೈಪುರ ಅಭಿವೃದ್ದಿ ಪ್ರಾಧಿಕಾರ ಅಕ್ರಮವಾಗಿ ರೈತರ ಭೂಮಿ ವಶಪಡಿಸಿಕೊಂಡಿದೆ. ಭೂಸ್ವಾಧೀನ ತಿದ್ದುಪಡಿ ಕಾಯ್ದೆಯ ಪ್ರಕಾರ ತಮ್ಮ ಜಮೀನನ್ನು ವಶಪಡಿಸಿಕೊಂಡು, ಅದಕ್ಕೆ ತಕ್ಕಂತೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.
ಜಮೀನು ಸಮಾಧಿ ಸತ್ಯಾಗ್ರಹ ಅಂದ್ರೆ ಕುತ್ತಿಗೆವರೆಗೂ ಭೂಮಿಯಲ್ಲಿ ಹೂತುಕೊಂಡು ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. 21 ರೈತರ ಪೈಕಿ 5 ಮಹಿಳೆಯರು ಭಾಗಿಯಾಗಿದ್ದಾರೆ.

ಈ ಮೊದಲು ಜನವರಿ ತಿಂಗಳಲ್ಲಿ ರೈತರು ಜಮೀನು ಸಮಾಧಿ ಸತ್ಯಾಗ್ರಹ ಮಾಡಿದ್ದರು. ಆ ಸಂದರ್ಭದಲ್ಲಿ ರಾಜ್ಯ ಸರ್ಕಾರ 50 ದಿನದಲ್ಲಿ ತಮ್ಮ ಸಮಸ್ಯೆ ಬಗೆಹರಿಸಿಕೊಡುವುದಾಗಿ ಆಶ್ವಾಸನೆ ನೀಡಿತ್ತು. ನಾಲ್ಕು ದಿನದ ನಂತರ ಪ್ರತಿಭಟನೆ ಕೈಬಿಟ್ಟಿದ್ದರು.
'ಸದ್ಯಕ್ಕೆ 21 ರೈತರು ಜಮೀನು ಸಮಾಧಿ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದಾರೆ. ಸೋಮವಾರ 50 ಜನ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ತಮ್ಮ ಹಕ್ಕು ತಮಗೆ ಸಿಗುವವರೆಗೂ ಈ ಹೋರಾಟ ನಿಲ್ಲಿಸಲ್ಲ' ಎಂದು ಹೋರಾಟಗಾರ ನಾಗೇಂದ್ರ ಸಿಂಗ್ ತಿಳಿಸಿದ್ದಾರೆ.

ಇದಕ್ಕೂ ಮುಂಚೆ 2017ರಲ್ಲಿ ಜೈಪುರ ಅಭಿವೃದ್ದಿ ಪ್ರಾಧಿಕಾರದ ವಿರುದ್ಧ ರೈತರು ಪ್ರತಿಭಟನೆ ಮಾಡಿದ್ದರು. ಇದರಲ್ಲಿ ಹಲವರು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications