ರಾಜಸ್ಥಾನದಲ್ಲಿ ಕುದುರೆ ವ್ಯಾಪಾರದ ಬೆಲೆ ಹೆಚ್ಚಾಯಿತು ಎಂದ ಸಿಎಂ!
ಜೈಪುರ್, ಜುಲೈ.30: ರಾಜಸ್ಥಾನದಲ್ಲಿ ವಿಧಾನಸಭಾ ಅಧಿವೇಶನಕ್ಕೆ ದಿನಾಂಕ ನಿಗದಿಯಾಗುತ್ತಿದ್ದಂತೆ ಕುದುರೆ ವ್ಯಾಪಾರದ ಬೆಲೆಯೂ ಕೂಡಾ ಏರಿಕೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವ್ಯಂಗ್ಯವಾಡಿದ್ದಾರೆ.
ಆಗಸ್ಟ್.14ರಂದು ರಾಜಸ್ಥಾನ ವಿಧಾನಸಭೆ ಅಧಿವೇಶನ ನಡೆಸುವುದಕ್ಕೆ ಈಗಾಗಲೇ ದಿನಾಂಕವನ್ನು ಘೋಷಿಸಲಾಗಿದೆ. ಈ ಹಿನ್ನೆಲೆ ಶಾಸಕರನ್ನು ಸೆಳೆಯಲು ನಡೆದಿರುವ ಕುದುರೆ ವ್ಯಾಪಾರಕ್ಕೆ ರೇಟ್ ಹೆಚ್ಚಾಗುತ್ತಿದೆ ಎಂದು ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ.
ಅಧಿವೇಶನ ದಿನಾಂಕ ನಿಗದಿಗೂ ಮೊದಲು ಒಂದೊಂದು ಕುದುರೆಗೆ ಮೊದಲ ಕಂತಿನಲ್ಲಿ 10 ಕೋಟಿ ಮತ್ತು ಎರಡನೇ ಕಂತಿನಲ್ಲಿ 15 ಕೋಟಿ ಹಣದ ಆಮಿಷವೊಡ್ಡಲಾಗಿತ್ತು. ಇದೀಗ ಈ ಬೆಲೆಯು ಮಿತಿಯೇ ಇಲ್ಲದಂತೆ ಏರಿಕೆಯಾಗುತ್ತಿದೆ ಮತ್ತು ಕುದುರೆ ವ್ಯಾಪಾರ ಮಾಡುತ್ತಿರುವುದು ಯಾರು ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ಆಜ್ಞೆಯಂತೆ ಮಾಯಾವತಿ ವರ್ತನೆ:
ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯವತಿಯವರು ಬಿಜೆಪಿಯ ಆಜ್ಞೆಯಂತೆ ವರ್ತಿಸುತ್ತಿದ್ದಾರೆ. ಆಕೆ ಮಾಡುತ್ತಿರುವ ದೂರುಗಳ್ಯಾವೂ ಸಮರ್ಥನೀಯವಾಗಿಲ್ಲ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಿಡಿ ಕಾರಿದ್ದಾರೆ. ರಾಜಸ್ಥಾನ ವಿಧಾನಸಭೆಯನ್ನು ಕರೆಸಿಕೊಳ್ಳಲು ಅಶೋಕ್ ಗೆಹ್ಲೋಟ್ ಕ್ಯಾಬಿನೆಟ್ ರಾಜ್ಯಪಾಲರಿಗೆ ನಾಲ್ಕನೇ ಪ್ರಸ್ತಾವನೆಯನ್ನು ಕಳುಹಿಸಿದ ಒಂದೆರಡು ಗಂಟೆಗಳ ನಂತರ ರಾಜ್ ಭವನ ಪ್ರಕಟಣೆ ಬಂದಿದ್ದು, ಆಗಸ್ಟ್ 14 ಅನ್ನು ಹೊಸ ದಿನಾಂಕವನ್ನು ನಿಗದಿಗೊಳಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications