ಪಂಜಾಬ್ ಬಳಿಕ ರಾಜಸ್ತಾನದತ್ತ ಕಾಂಗ್ರೆಸ್ ಗಮನ: ರಾಹುಲ್, ಪ್ರಿಯಾಂಕ, ಸಚಿನ್ ಭೇಟಿ
ನವದೆಹಲಿ, ಸೆಪ್ಟೆಂಬರ್ 24: ಪಂಜಾಬ್ನ ಬಳಿಕ ಕಾಂಗ್ರೆಸ್ ಹೈಕಮಾಂಡ್ ಈಗ ರಾಜಸ್ತಾನದಲ್ಲಿ ತನ್ನ ಪಕ್ಷದೊಳಗಿನ ಬಿಕ್ಕಟ್ಟನ್ನು ಸರಿ ಮಾಡುವ ಯತ್ನದಲ್ಲಿ ತೊಡಗಿದೆ. ಮಾಜಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ, ವಯನಾಡು ಸಂಸದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿಯನ್ನು ರಾಜಸ್ತಾನ ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಇಂದು ಭೇಟಿಯಾಗಿದ್ದು, ಈ ವಾರದಲ್ಲಿ ನಡೆದ ಎರಡನೇ ಭೇಟಿ ಇದಾಗಿದೆ.
ಗುಜರಾತ್ ಕಾಂಗ್ರೆಸ್ನ ಮುಖಂಡತ್ವವನ್ನು ಸಚಿನ್ ಪೈಲಟ್ ವಹಿಸಿಕೊಳ್ಳಬೇಕು ಎಂದು ರಾಹುಲ್ ಗಾಂಧಿಯ ಅಭಿಪ್ರಾಯ ಎಂದು ಹೇಳಲಾಗಿದೆ. ಗುಜರಾತ್ನಲ್ಲಿ ಮುಂದೆ ಚುನಾವಣೆ ನಡೆಯಲಿರುವ ಹಿನ್ನೆಲೆ ಕಾಂಗ್ರೆಸ್ ನಾಯಕತ್ವವು ಸಚಿನ್ ಪೈಲಟ್ ಗುಜರಾತ್ನ ನಾಯಕತ್ವ ವಹಿಸಬೇಕು ಎಂದು ಅಭಿಪ್ರಾಯಿಸಿದೆ ಎಂದು ಹೇಳಲಾಗುದೆ.
ಆದರೆ ಈ ನಡುವೆ ಸಚಿನ್ ಪೈಲಟ್ ಮಾತ್ರ ರಾಜಸ್ತಾನದ ಮುಖ್ಯಮಂತ್ರಿಯಾಗಿ ಮಾಡುವ ಆಶ್ವಾಸನೆಯನ್ನೇ ಬೆನ್ನತ್ತಿದ್ದಾರೆ ಎಂದು ಹೇಳಲಾಗಿದೆ. ವಾರದಲ್ಲೇ ಎರಡು ಬಾರಿ ನಡೆದಿರುವ ಈ ಸಭೆಯು ರಾಜಸ್ತಾನ ರಾಜಕೀಯದಲ್ಲಿ ಬದಲಾವಣೆಯಾಗಲಿದೆಯೇ ಎಂಬ ಪ್ರಶ್ನೆಯನ್ನು ಹುಟ್ಟಿಸಿದೆ.

ಪಂಜಾಬ್ ಕಾಂಗ್ರೆಸ್ನಲ್ಲಿ ಉಂಟಾಗಿದ್ದ, ರಾಜಕೀಯ ಅಸಮಾಧಾನಗಳನ್ನು ಸರಿಪಡಿಸಿ ಪಂಜಾಬ್ನಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಿಸಿದ ನಂತರ ಈಗ ಕಾಂಗ್ರೆಸ್ ತನ್ನ ದೃಷ್ಟಿಯನ್ನು ರಾಜಸ್ತಾನದತ್ತ ನೆಟ್ಟಿದೆ. ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಜೊತೆಗೆ ಸಚಿನ್ ಪೈಲಟ್ ಸುಮಾರು 45 ನಿಮಿಷಗಳ ಕಾಲ ಮಾತನಾಡಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಮಾತುಕತೆಯಲ್ಲಿ ಸಚಿನ್ ಪೈಲಟ್ ಕಾಂಗ್ರೆಸ್ ಗುಜರಾತ್ನ ಜವಾಬ್ದಾರಿಯನ್ನು ಹೊತ್ತು ಕೊಳ್ಳಲು ಒಪ್ಪಿಕೊಂಡಿದ್ದಾರೆಯೇ ಎಂದು ತಿಳಿದು ಬಂದಿಲ್ಲ. ಆದರೆ 70 ವರ್ಷದ ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿ ಆಗಿರುವ ರಾಜಸ್ತಾನದಲ್ಲಿ ನಾಯಕತ್ವವನ್ನು ವಹಿಸಿಕೊಳ್ಳಲು ಸಿದ್ದರಾಗಿದ್ದಾರೆ ಎಂದು ಹೇಳಲಾಗಿದೆ.
ರಾಜಸ್ತಾನ ಸರ್ಕಾರದಲ್ಲಿ ಇರುವ ತನ್ನ ಪರವಾದ ಸಚಿವರುಗಳನ್ನು ಸಚಿನ್ ಪೈಲಟ್ ಹುಡುಕುತ್ತಿದ್ದಾರೆ. ಈ ಮೂಲಕ ನಾಯಕತ್ವ ಪಡೆಯುವ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ವರದಿಗಳು ಹೇಳಿದೆ. ಈ ವಿಚಾರವು ಕೂಡಾ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಜೊತೆಗಿನ ಮಾತುಕತೆಯ ಸಂದರ್ಭದಲ್ಲಿ ಚರ್ಚೆ ನಡೆದಿರಬಹುದು ಎಂದು ಹೇಳಲಾಗಿದೆ. ಸಚಿನ್ ಪೈಲಟ್ ಪರವಾಗಿ ಇರುವವರಿಗೆ ಸಚಿವ ಸ್ಥಾನವನ್ನು ನೀಡಬೇಕು ಎಂಬ ವಿಚಾರದಲ್ಲಿ ಹಿಂದೆ ಸಚಿವ ಸಂಪುಟ ವಿಸ್ತರಣೆ ಮಾಡಲು ಅಶೋಕ್ ಗೆಹ್ಲೋಟ್ ಮೇಲೆ ಒತ್ತಡ ಹೇರಲಾಗಿತ್ತು. ಆದರೆ ಸಚಿನ್ ಪೈಲಟ್ ಪರವಾಗಿ ಈ ವಿಸ್ತರಣೆಯನ್ನು ಮಾಡಲು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಾತ್ರ ಒಪ್ಪಿಗೆ ಸೂಚಿಸಿಲ್ಲ.
2018 ರ ವೇಳೆಗೆ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಅಶೋಕ್ ಗೆಹ್ಲೋಟ್, 2018 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ನಂತರ ಮುಖ್ಯಮಂತ್ರಿಯಾದರು. ಈ ಸಂದರ್ಭದಲ್ಲಿ ಕಾಂಗ್ರೆಸ್ಗೆ ನಿರ್ಧಾರ ಕೈಗೊಳ್ಳುವುದು ಭಾರೀ ಇಕ್ಕಟ್ಟಿನ ಸಂದರ್ಭವಾಗಿತ್ತು. ಇದೇ ಸಂದರ್ಭದಲ್ಲಿ ಸಚಿನ್ ಪೈಲಟ್ ಕೂಡಾ ಸರ್ಕಾರದ ಉನ್ನತ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಸಚಿನ್ ಪೈಲಟ್ಗೆ ಮಾತ್ರ ಕಾಂಗ್ರೆಸ್ ಪಕ್ಷವನ್ನು ಪುನರ್ ನಿರ್ಮಾಣ ಮಾಡಿದ ಹೆಗ್ಗಳಿಕೆ ಇದೆ. 2013 ರ ರಾಜ್ಯ ಚುನಾವಣೆಯಲ್ಲಿ ಪಕ್ಷ ಸೋತ ಬಳಿಕ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಸಚಿನ್ ಪೈಲಟ್ರನ್ನು ಮಾಡಲಾಯಿತು.
(ಒನ್ ಇಂಡಿಯಾ ಸುದ್ದಿ)
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications