ಕಸ ಗುಡಿಸುತ್ತಿದ್ದ ಮಹಿಳೆ ಈಗ ರಾಜಸ್ಥಾನದ ಜಿಲ್ಲಾಧಿಕಾರಿ!
ಜೈಪುರ, ಜುಲೈ 17: ಮನಸ್ಸಿದ್ದರೆ ಮಾರ್ಗ, ಜಗತ್ತಿನಲ್ಲಿ ಅಸಾಧ್ಯವಾದ್ದು ಏನೂ ಇಲ್ಲ ಎಂದು ತೋರಿಸಿಕೊಟ್ಟವರು ಆಶಾ.
ಜೋಧಪುರ ಮಹಾನಗರ ಪಾಲಿಕೆಯ ಪೌರಕಾರ್ಮಿಕೆಯಾಗಿದ್ದಾಕೆ ರಾಜಸ್ಥಾನ ಆಡಳಿತ ಸೇವಾ ಪರೀಕ್ಷೆಯನ್ನು ಉತ್ತೀರ್ಣಗೊಳಿಸಿದ್ದು, ಶೀಘ್ರದಲ್ಲೇ ಅವರು ಜಿಲ್ಲಾಧಿಕಾರಿ ಹುದ್ದೆ ಅಲಂಕರಿಸಿದ್ದಾರೆ.
ಆಶಾ ಕಂದ್ರ ಸಾಧನೆ ಮಾಡಿದ ಮಹಿಳೆ. ಈಕೆಗೆ ಇಬ್ಬರು ಮಕ್ಕಳಿದ್ದಾರೆ. ಇವರು ಜೋಧಪುರ ಮಹಾನಗರ ಪಾಲಿಕೆ ಅಡಿಯಲ್ಲಿ ಬೀದಿ ಸ್ವಚ್ಛಗೊಳಿಸುವ ಕಾರ್ಯ ಮಾಡುತ್ತಿದ್ದರು.

ಇದೀಗ ಪ್ರತಿಷ್ಟಿತ ರಾಜ್ಯ ನಾಗರೀಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಾವಿರಾರು ಮಂದಿಗೆ ಸ್ಪೂರ್ತಿಯಾಗಿದ್ದಾರೆ. ಎಂಟು ವರ್ಷಗಳ ಹಿಂದೆ ತನ್ನ ಗಂಡನಿಂದ ದೂರವಾದ ಆಶಾ, ಇಬ್ಬರು ಮಕ್ಕಳನ್ನು ಬೆಳೆಸುವ ಜವಾಬ್ದಾರಿಯ ಜೊತೆಯಲ್ಲೇ ಪದವಿ ಮುಗಿಸಿದರು. ನಂತರ ಎರಡು ವರ್ಷಗಳ ಹಿಂದೆ ರಾಜ್ಯ ನಾಗರೀಕ ಸೇವಾ ಪರೀಕ್ಷೆ ಎದುರಿಸಿದರು.
ಆದರೆ ಫಲಿತಾಂಶ ವಿಳಂಬವಾಯಿತು. ಆಗ ಆಶಾ ಪರೀಕ್ಷೆ ಬರೆದ ನಂತರ ಜೋಧಪುರ ಮುನ್ಸಿಪಾಲ್ ಕಾರ್ಪೋರೇಶನ್ನಲ್ಲಿ ಕಸ ಗುಡಿಸುವ ಕೆಲಸಕ್ಕೆ ಸೇರಿದರು. ಏಕೆಂದರೆ ಇಬ್ಬರು ಮಕ್ಕಳ ಆರೈಕೆಯ ಜವಾಬ್ದಾರಿ ಆಕೆಯ ಮೇಲಿತ್ತು.
ನನ್ನ ಸುತ್ತಮುತ್ತಲಿನ ಜನರ ಅವಮಾನದ ಮಾತುಗಳೇ ನನಗೆ ಸ್ಪೂರ್ತಿ. ಜಾತೀಯತೆ ಇಲ್ಲ ಎನ್ನುತ್ತಾರೆ. ಆದರೆ ಅದನ್ನು ಅನುಭವಿಸಿದವರಿಗಷ್ಟೆ ಗೊತ್ತಾಗುತ್ತದೆ ಎಂದು ಹೇಳುವ ಆಶಾ, ಜನರ ಟೀಕೆ, ವ್ಯಂಗ್ಯಗಳೇ ನಾನು ಮೇಲೇರಲು ಕಾರಣವಾಯಿತು. ಸಮಾಜಕ್ಕೆ ಉತ್ತಮ ಕೆಲಸ ಮಾಡಬೇಕೆಂಬುದೇ ನನ್ನ ಗುರಿ ಎಂದು ಹೇಳಿದರು.
ಇತ್ತೀಚೆಗೆ ಪರೀಕ್ಷೆಯ ಫಲಿತಾಂಶವೂ ಹೊರಬಿತ್ತು, ಆಶಾ ಅವರ ಕಷ್ಟದ ದಿನಗಳು ಮುಗಿದು, ಖುಷಿಯ ಬದುಕು ಆರಂಭವಾಗಿದೆ.
ತಾನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿಚಾರ ತಿಳಿದಾಗ ಆಕೆಯ ಸಂತೋಷಕ್ಕೆ ಪಾರವೇ ಇರಲಿಲ್ಲ. ಆಶಾ ಅವರನ್ನು ರಾಜ್ಯದಲ್ಲಿ ಉಪಸಂಗ್ರಹಕಾರ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಮನಸ್ಸಲ್ಲಿ ಸಾಧಿಸುವ ಛಲ, ಗುರಿ, ದೃಢ ನಿಶ್ಚಯವಿದ್ದರೆ, ಸೋಲು ಹತ್ತಿರವೂ ಸುಳಿಯುವುದಿಲ್ಲ. ನಾನು ಕಸ ಗುಡಿಸುವ ಕೆಲಸದಲ್ಲಿ ಹಲವರಿಂದ ಅವಮಾನ ಅನುಭವಿಸಿದೆ.
ನಿಮ್ಮ ತಂದೆ ಜಿಲ್ಲಾಧಿಕಾರಿಯಾ? ಇಲ್ಲಿ ಯಾಕೆ ನಿಂತುಕೊಂಡಿದ್ದೀಯಾ? ಇಲ್ಲೇನು ನಿನಗೆ ಕೆಲಸ. ಹೀಗೆ ನಾನಾ ರೀತಿಯಲ್ಲಿ ಅವಮಾನಿಸಿದರು. ಆದರೆ ನಾನು ಎಲ್ಲಾ ಅವಮಾನಗಳನ್ನು ಎದುರಿಸಿ ಜಿಲ್ಲಾಧಿಕಾರಿಯಾಗುತ್ತಿದ್ದೇನೆ ಎಂದು ಆಶಾ ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications