ವಿಶ್ವಾಸಮತ ಗೆದ್ದ ಅಶೋಕ್ ಗೆಹ್ಲೋಟ್ ಸರ್ಕಾರ; ಬಿಜೆಪಿಗೆ ಮುಖಭಂಗ
ಜೈಪುರ, ಆಗಸ್ಟ್ 14 : ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ವಿಶ್ವಾಸಮತ ಗೆದ್ದಿದೆ. ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡನೆ ಮಾಡಿತ್ತು.
ಶುಕ್ರವಾರ ರಾಜಸ್ಥಾನ ವಿಧಾನಸಭೆ ಕಲಾಪ ಆರಂಭವಾಗಿತ್ತು. ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಮೊದಲ ದಿನದ ಅಧಿವೇಶನದಲ್ಲಿಯೇ ಅವಿಶ್ವಾಸ ನಿರ್ಣಯವನ್ನು ಮಂಡನೆ ಮಾಡಿತ್ತು. ಆದರೆ, ಸರ್ಕಾರ ವಿಶ್ವಾಸಮತ ಗೆದ್ದಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್ ನಾಯಕ ಸಚಿನ್ ಪೈಲೆಟ್, "ಸರ್ಕಾರ ಬಹುಮತವನ್ನು ಗೆದ್ದಿದೆ. ಸರ್ಕಾರ ಬೀಳಿಸಲು ಪ್ರತಿಪಕ್ಷ ಮಾಡಿದ ಅನೇಕ ಪ್ರಯತ್ನಗಳು ವಿಫಲವಾಗಿವೆ. ಜನರೂ ಸಹ ಸರ್ಕಾರದ ಪರವಾಗಿದ್ದಾರೆ" ಎಂದರು.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಕಾಂಗ್ರೆಸ್ ನಾಯಕ ಸಚಿನ್ ಪೈಲೆಟ್ ಬಂಡಾಯದ ಬಾವುಟ ಹಾರಿಸಿದ್ದರು. 18 ಶಾಸಕರು ಸಚಿನ್ ಪೈಲೆಟ್ ಜೊತೆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಉಂಟಾಗಿದ್ದ ಕಾರಣ ಪ್ರತಿಪಕ್ಷ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಿತ್ತು.

125 ಶಾಸಕರ ಬೆಂಬಲ
ರಾಜಸ್ಥಾನ ವಿಧಾನಸಭೆಯ ಬಲ 200. ಸರ್ಕಾರ ಬಹುಮತ ಸಾಬೀತು ಮಾಡಲು ಅಗತ್ಯವಿದ್ದ ಮ್ಯಾಜಿಕ್ ನಂಬರ್ 101. ಅಶೋಕ್ ಗೆಹ್ಲೋಟ್ ಸರ್ಕಾರಕ್ಕೆ 125 ಶಾಸಕರು ಬೆಂಬಲ ಸೂಚಿಸಿದ್ದಾರೆ. ಅವಿಶ್ವಾಸ ನಿರ್ಣಮ ಮಂಡನೆ ಮಾಡಿದ್ದ ಪ್ರತಿಪಕ್ಷ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.

ಪ್ರತಿಪಕ್ಷ ಬಿಜೆಪಿಯಲ್ಲಿ 72 ಶಾಸಕರು
ರಾಜಸ್ಥಾನ ವಿಧಾನಸಭೆಯಲ್ಲಿ ಪ್ರತಿಪಕ್ಷ ಬಿಜೆಪಿ 72 ಶಾಸಕರ ಬಲ ಹೊಂದಿದೆ. ಮೈತ್ರಿಕೂಟದ ಇತರ ಮೂವರು ಶಾಸಕರು ಬಿಜೆಪಿ ಜೊತೆ ಇದ್ದರು. ಗುರುವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಣೆ ಮಾಡುವ ಕುರಿತು ತೀರ್ಮಾನ ಕೈಗೊಳ್ಳಲಾಗಿತ್ತು.

ಬಿಎಸ್ಪಿಯ 6 ಶಾಸಕರ ಬಲ
ರಾಜಸ್ಥಾನದಲ್ಲಿ 6 ಬಿಎಸ್ಪಿ ಶಾಸಕರು ಕಾಂಗ್ರೆಸ್ನೊಂದಿಗೆ ವಿಲೀನಗೊಂಡಿದ್ದಾರೆ. ಇದನ್ನು ಬಿಜೆಪಿ ರಾಜಸ್ಥಾನ ಹೈಕೋರ್ಟ್, ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿದೆ. ಯಾವುದೇ ಮಧ್ಯಂತರ ಆದೇಶ ಇಲ್ಲದ ಕಾರಣ ಬಿಎಸ್ಪಿ ಶಾಸಕರು ಆಡಳಿತ ಪಕ್ಷದ ಸಾಲಿನಲ್ಲಿಯೇ ಕುಳಿತು ಸರ್ಕಾರದ ಪರವಾಗಿ ಮತದಾನ ಮಾಡಿದರು.

ಸಚಿನ್ ಪೈಲೆಟ್ ಬಣದ ಬೆಂಬಲ
ರಾಜಸ್ಥಾನ ಕಾಂಗ್ರೆಸ್ನಲ್ಲಿ ಉಂಟಾಗಿದ್ದ ಭಿನ್ನಮತ ಶಮನವಾಗಿದೆ. ಸಚಿನ್ ಪೈಲೆಟ್ ಮತ್ತು ಅವರ ಬಣದ 18 ಶಾಸಕರು ಸರ್ಕಾರದ ಪರವಾಗಿ ಇಂದು ಮತದಾನ ಮಾಡಿದರು. ಸಚಿನ್ ಪೈಲೆಟ್ ಬಣದ ಶಾಸಕರ ಬೆಂಬಲ ಇಲ್ಲದಿದ್ದರೂ ಸರ್ಕಾರಕ್ಕೆ 104 ಶಾಸಕರ ಬಲವಿತ್ತು ಎಂದು ಕಾಂಗ್ರೆಸ್ ಹಿಂದೆಯೇ ಹೇಳಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications