ರಾಜಸ್ಥಾನದಲ್ಲಿ ವಿಶ್ವಾಸಮತಯಾಚನೆ ಇಲ್ಲ?
ಜೈಪುರ, ಜುಲೈ 26 : ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಧಾನಸಭೆ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಮತ್ತೊಂದು ಮನವಿ ಸಲ್ಲಿಕೆ ಮಾಡಿದ್ದಾರೆ. ಈ ಮನವಿಯಲ್ಲಿ ವಿಶ್ವಾಸಮತ ಯಾಚನೆ ಮಾಡುವ ಕುರಿತು ಯಾವುದೇ ಉಲ್ಲೇಖ ಮಾಡಿಲ್ಲ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶುಕ್ರವಾರ ರಾಜ್ಯಪಾಲ ಕಲ್ರಾಜ್ ಮಿಶ್ರಾರನ್ನು ಭೇಟಿ ಮಾಡಿದ್ದರು. ರಾಜ್ಯದ ರಾಜಕೀಯ ಪರಿಸ್ಥಿತಿ, ಕೊರೊನಾ ವಿಚಾರಗಳ ಕುರಿತು ಚರ್ಚಿಸಲು ವಿಧಾನಸಭೆ ಅಧಿವೇಶನ ಕರೆಯುವಂತೆ ಮನವಿ ಮಾಡಿದ್ದರು.
ಆದರೆ, ರಾಜ್ಯಪಾಲರು ಈ ಮನವಿಯನ್ನು ತಳ್ಳಿ ಹಾಕಿದ್ದರು. ಆದ್ದರಿಂದ ಅಶೋಕ್ ಗೆಹ್ಲೋಟ್ ಜುಲೈ 31ರಿಂದ ವಿಧಾನಸಭೆ ಅಧಿವೇಶನ ಕರೆಯಬೇಕು ಎಂದು ಮತ್ತೊಂದು ಪತ್ರವನ್ನು ರಾಜ್ಯಪಾಲರಿಗೆ ಬರೆದಿದ್ದಾರೆ.

ಕೊರೊನಾ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ಅಧಿವೇಶನ ಕರೆಯಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆದರೆ, ವಿಶ್ವಾಸಮತ ಯಾಚನೆ ಮಾಡುವ ಬಗ್ಗೆ ಪತ್ರದಲ್ಲಿ ಯಾವುದೇ ಉಲ್ಲೇಖವಿಲ್ಲ. ಮುಖ್ಯಮಂತ್ರಿಗಳ ಈ ಪತ್ರ ಕುತೂಹಲಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಬಂಡಾಯ ಶಾಸಕ ಸಚಿನ್ ಪೈಲೆಟ್ ಸೇರಿದಂತೆ 19 ಶಾಸಕರ ಅನರ್ಹತೆ ವಿಚಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಅರ್ಜಿಯ ವಿಚಾರಣೆಯನ್ನು ಕೋರ್ಟ್ ಪೂರ್ಣಗೊಳಿಸಿದ್ದು, ಸೋಮವಾರ ತೀರ್ಪು ನೀಡಲಿದೆ.
ಸಚಿನ್ ಪೈಲೆಟ್ ಸೇರಿದಂತೆ 19 ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್ ನೀಡಿರುವ ನೋಟಿಸ್ ಅನ್ನು ಹೈ ಶಾಸಕರು ಕೋರ್ಟ್ನಲ್ಲಿ ಪ್ರಶ್ನೆ ಮಾಡಿದ್ದರು. ಶುಕ್ರವಾರ ರಾಜಸ್ಥಾನ ಹೈಕೋರ್ಟ್ ತೀರ್ಪನ್ನು ಪ್ರಕಟಿಸಿದ್ದು, ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದೆ.
ಅಶೋಕ್ ಪೈಲೆಟ್ ಬಣದಲ್ಲಿ ಎಷ್ಟು ಶಾಸಕರಿದ್ದಾರೆ?, ಸಚಿನ್ ಪೈಲೆಟ್ ಬಣದಲ್ಲಿ ಎಷ್ಟು ಶಾಸಕರು ಇದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications