ಸರಕಾರ ಉರುಳುವ ಭಯ: ನೇರ ಪ್ರಧಾನಿ ಮೋದಿಗೆ ಪತ್ರ ಬರೆದ ಅಶೋಕ್ ಗೆಹ್ಲೋಟ್
ಜೈಪುರ, ಜುಲೈ 22: ಸಚಿನ್ ಪೈಲಟ್ ಮತ್ತು ಅವರ ಬಣದ ಬಂಡಾಯದಿಂದ ತಬ್ಬಿಬ್ಬಾಗಿರುವ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ನೇರ ಪ್ರಧಾನಿ ಮೋದಿಗೆ ಪತ್ರವನ್ನು ಬರೆದಿದ್ದಾರೆ.
Recommended Video
"ನಮ್ಮ ಪಕ್ಷದ ಶಾಸಕರಿಗೆ ಹಣದ ಆಮಿಷವೊಡ್ದಿ ಸರಕಾರ ಉರುಳಿಸುವ ಪ್ರಯತ್ನ ನಡೆಯುತ್ತಿದೆ"ಎಂದು ಪತ್ರದಲ್ಲಿ ದೂರಿರುವ ಗೆಹ್ಲೋಟ್, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಮತ್ತು ಇತರ ಬಿಜೆಪಿ ಮುಖಂಡರು 'ಡೀಲ್ ಕುದುರಿಸುತ್ತಿದ್ದಾರೆ' ಎಂದು ಆರೋಪಿಸಿದ್ದಾರೆ.
"ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಯ್ಕೆಯಾಗಿರುವ ಸರಕಾರವನ್ನು ಉರುಳಿಸುವ ಪ್ರಯತ್ನ ನಡೆಯುತ್ತದೆ. ಇದು ಜನಾದೇಶಕ್ಕೆ ಮಾಡುತ್ತಿರುವ ಬಹುದೊಡ್ಡ ಅವಮಾನ"ಎಂದು ಗೆಹ್ಲೋಟ್ ದೂರಿದ್ದಾರೆ.

"ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ಇದೇ ರೀತಿ ಪ್ರಜಾಪ್ರಭುತ್ವ ವಿರೋಧಿ ನಡೆಯಿಂದ ಸರಕಾರ ಪತನಗೊಂಡಿತು. ರಾಜಸ್ತಾನದಲ್ಲೂ ಅದೇ ಪ್ರಯತ್ನ ನಡೆಯುತ್ತಿದೆ"ಎಂದು ಅಶೋಕ್ ಗೆಹ್ಲೋಟ್, ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
"ಜ್ಯೋತಿರಾದಿತ್ಯ ಸಿಂಧಿಯಾ ಹೇಗೆ ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಸರಕಾರವನ್ನು ಉರುಳಿಸಿದರೋ, ಅದೇ ರೀತಿ ಸಚಿನ್ ಪೈಲಟ್, ರಾಜಸ್ಥಾನದಲ್ಲಿ ಆ ಕೆಲಸಕ್ಕೆ ಮುಂದಾಗಿದ್ದಾರೆ"ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
Written a letter to Prime Minister Shri Narendra Modi. pic.twitter.com/P2TnSoa0Cu
— Ashok Gehlot (@ashokgehlot51) July 22, 2020
ಕಾಂಗ್ರೆಸ್ ಬಂಡಾಯ ನಾಯಕ ಸಚಿನ್ ಪೈಲೆಟ್ ಸೇರಿದಂತೆ 19 ಶಾಸಕರ ಅನರ್ಹತೆಯ ವಿಚಾರದ ಬಗ್ಗೆ ವಿಚಾರಣೆ ಪೂರ್ಣಗೊಂಡಿದ್ದು, ರಾಜಸ್ಥಾನ ಹೈಕೋರ್ಟ್ ಪ್ರಕರಣದ ತೀರ್ಪನ್ನು ಶುಕ್ರವಾರಕ್ಕೆ (ಜುಲೈ 24) ಕಾಯ್ದಿರಿಸಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications