ರಾಜಸ್ಥಾನದಲ್ಲಿ ಮಾಯಾವತಿಗೆ ಬಿಗ್ ಶಾಕ್: ಕಾಂಗ್ರೆಸ್ ಸೇರಿದ 6 ಶಾಸಕರು
ಜೈಪುರ, ಸೆಪ್ಟೆಂಬರ್ 17: ರಾಜಸ್ಥಾನದಲ್ಲಿ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಅವರಿಗೆ ಭಾರಿ ಆಘಾತವಾಗುವಂಥ ಬೆಳವಣಿಗೆ ನಡೆದಿದೆ.
ರಾಜಸ್ಥಾನದ ಎಲ್ಲಾ ಆರೂ ಬಿಎಸ್ಪಿ ಶಾಸಕರೂ ಕಾಂಗ್ರೆಸ್ ಸೇರುವ ಮೂಲಕ ತಮ್ಮ ಅಧಿನಾಯಕಿಗೆ ಶಾಕ್ ನೀಡಿದ್ದಾರೆ.
ರಾಜೇಂದ್ರ ಗುಡ್ಡ್, ಜೋಗೇಂದ್ರ ಸಿಂಗ್ ಅವಾನಾ, ವಾಝಿಬ್ ಅಲಿ, ಲಖನ್ ಸಿಂಗ್ ಮೀನಾ, ಸಂದೀಪ್ ಯಾದವ್ ಮತ್ತು ದೀಪಕ್ ಖೇರಿಯಾ ಅವರು ಕಾಂಗ್ರೆಸ್ ಸೇರಿದ್ದಾರೆ.

"ನಾವು ಇಷ್ಟು ದಿನ ಹಲವು ಸವಾಲುಗಳನ್ನು ಎದುರಿಸಿದ್ದೇವೆ. ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧವೇ ಹೋರಾಡಿ ನಂತರ ಅದರೊಂದಿಗೇ ಕೈಜೋಡಿಸುವುದು ಎಂದರೆ ಮುಜುಗರದ ವಿಷಯ. ಜಾತ್ಯತೀತ ತತ್ತ್ವದಲ್ಲಿ ನಂಬುಕೆ ಇಟ್ಟು, ಅಭಿವೃದ್ಧಿಯನ್ನೇ ಮೂಲಮಂತ್ರವನ್ನಾಗಿಸಿಕೊಂಡಿರುವ ಕಾಂಗ್ರೆಸ್ ನಲ್ಲಿದ್ದುಕೊಂಡೇ ಗುರುತಿಸಿಕೊಳ್ಳುವುದಕ್ಕೆ ನಾವು ಬಯಸುತ್ತೇವೆ" ಎಂದು ಬಿಎಸ್ಪಿಗೆ ರಾಜೀನಾಮೆ ನೀಡಿರುವ ಶಾಸಕರು ಹೇಳಿದ್ದಾರೆ.
"ನಮಗೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ಇದೆ. ರಾಜಸ್ಥಾನಕ್ಕೆ ಅವರಲ್ಲದೆ ಬೇರೆ ಯಾರೂ ಮುಖ್ಯಮಂತ್ರಿಯಾಗುವುದಕ್ಕೆ ಸಾಧ್ಯವಿಲ್ಲ. ಅದನ್ನು ನಾವು ಒಪ್ಪುವುದೂ ಇಲ್ಲ" ಎಂದು ಅವರು ಹೇಳಿದ್ದಾರೆ.
ರಾಜ್ಯಪಾಲ ಸಿಪಿ ಜೋಶಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರಗಳನ್ನು ಶಾಸಕರು ನೀಡಿದ್ದು, ಇಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿಯಾಗಲಿದ್ದಾರೆ.
ರಾಜಸ್ಥಾನದಲ್ಲಿ ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 100(200)ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆ ನಂತರ ಅದಕ್ಕೆ 6 ಬಿಎಸ್ಪಿ ಶಾಸಕರು ಸೇರಿದಂತೆ ಪಕ್ಷೇತರ 12 ಶಾಸಕರು ಬೆಂಬಲ ನೀಡಿದ್ದರು. ಸದ್ಯಕ್ಕೆ ರಾಜಸ್ಥಾನ ವಿಧಾನಸಭೆ 112 ಶಾಸಕರನ್ನು ಹೊಂದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications