ಪಂಚಾಯತ್ ಚುನಾವಣೆಯಲ್ಲಿ ನಮ್ಮದೇ ಗೆಲುವು ಎಂದ ಬಿಜೆಪಿ
ಜೈಪುರ, ಡಿಸೆಂಬರ್ 9: ರಾಜಸ್ಥಾನದಲ್ಲಿ ನಡೆದ ಪಂಚಾಯತ್ ರಾಜ್ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಜಯಭೇರಿ ಬಾರಿಸಿರುವುದಾಗಿ ಬಿಜೆಪಿ ಹೇಳಿಕೊಂಡಿದೆ. 4,371 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ 222 ಸಮಿತಿಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ಪಂಚಾಯತ್ ರಾಜ್ ಚುನಾವಣೆಯು ಕಾಂಗ್ರೆಸ್ ಪರವಾಗಿರುವಂತೆ ಪರಿವರ್ತಿಸಲು ಮತ್ತು ನಿಯಂತ್ರಿಸಲು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ತೋಳ್ಬಲ, ಹಣಬಲ ಮತ್ತು ಅಧಿಕಾರವನ್ನು ಬಳಸಿಕೊಂಡಿದ್ದಾರೆ ಎಂದು ರಾಜಸ್ಥಾನ ಬಿಜೆಪಿ ಘಟಕ ಆರೋಪಿಸಿದೆ. ಆದರೆ ಕಾಂಗ್ರೆಸ್ ಇಲ್ಲಿ ಸೋಲು ಅನುಭವಿಸಿದೆ ಮತ್ತು ಬಿಜೆಪಿ ಕಾರ್ಯಕರ್ತರ ಬಲ ವಿಜಯಶಾಲಿಯಾಗಿ ಹೊರಹೊಮ್ಮಿದೆ ಎಂದು ಅದು ಹೇಳಿಕೊಂಡಿದೆ.
4,371 ಪಂಚಾಯತ್ ರಾಜ್ ಕ್ಷೇತ್ರಗಳ ಪೈಕಿ ತಾನು 1,836 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ 1,718ರಲ್ಲಿ ಗೆದ್ದಿದೆ ಎಂದು ಬಿಜೆಪಿ ಹೇಳಿದೆ. ಹಾಗೆಯೇ ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ 323 ಮತ್ತು ಕಾಂಗ್ರಸ್ 246 ಕ್ಷೇತ್ರಗಳಲ್ಲಿ ಗೆಲುವು ಕಂಡಿರುವುದಾಗಿ ಬಿಜೆಪಿ ಮುಖಂಡರು ಹೇಳಿದ್ದಾರೆ. ಇದು ಹೊಸ ಕೃಷಿ ಕಾಯ್ದೆಗಳ ಪರ ಗ್ರಾಮೀಣ ಭಾಗದ ಜನರು ನೀಡಿರುವ ತೀರ್ಪು ಎಂದು ಬಿಜೆಪಿ ಐಟಿ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ ಹೇಳಿಕೊಂಡಿದ್ದಾರೆ.

ರಾಜಸ್ಥಾನದ ಪಂಚಾಯತ್ ಮತ್ತು ಜಿಲ್ಲಾ ಪರಿಷದ್ ಚುನಾವಣೆಗಳಲ್ಲಿನ ಪಕ್ಷದ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ಬಡವರು, ಕೃಷಿಕರು ಮತ್ತು ಕಾರ್ಮಿಕರು ಇರಿಸಿರುವ ನಂಬಿಕೆಯನ್ನು ಸಂಕೇತಿಸುತ್ತದೆ. ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಬಿಜೆಪಿ ಮೇಲೆ ವಿಶ್ವಾಸ ಇರಿಸಿಕೊಂಡಿರುವುದಕ್ಕೆ ಮಹಿಳೆಯರು, ರೈತರು ಮತ್ತು ಇತರೆ ಗ್ರಾಮೀಣ ಮತದಾರರಿಗೆ ಧನ್ಯವಾದ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications