ಮುದ್ದೆ ಚರ್ಮ ರೋಗ: ರಾಜಸ್ಥಾನದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ, ಪೊಲೀಸರೊಂದಿಗೆ ಘರ್ಷಣೆ
ಚೆನ್ನೈ, ಸೆ.20: ರಾಜಸ್ಥಾನದಲ್ಲಿ 57,000 ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದು 11 ಲಕ್ಷಕ್ಕೂ ಹೆಚ್ಚು ಜಾನುವಾರುಗಳನ್ನು ಸಂಕಷ್ಟಕ್ಕೆ ನೂಕಿರುವ ಲಂಪಿ ಸ್ಕಿನ್ ಡಿಸೀಸ್ (ಎಲ್ಎಸ್ಡಿ) ವಿರುದ್ಧ ಭಾರತೀಯ ಜನತಾ ಪಕ್ಷ ಜೈಪುರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದೆ.
ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿ, ಬ್ಯಾರಿಕೇಡ್ಗಳನ್ನು ಮುರಿದಿದ್ದಾರೆ. ಪ್ರತಿಭಟನಾಕಾರರು ರಾಜ್ಯ ಸರ್ಕಾರ ತಕ್ಷಣ ರೋಗದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗಿ ಆಗ್ರಹಿಸಿದರು.
ರಾಜ್ಯ ವಿಧಾನಸಭೆಯಲ್ಲೂ ಬಿಜೆಪಿ ಈ ವಿಷಯವನ್ನು ಪ್ರಸ್ತಾಪಿಸಿದೆ. ಸೋಮವಾರ ಬಿಜೆಪಿ ಶಾಸಕರೊಬ್ಬರು ರಾಜ್ಯ ವಿಧಾನಸಭೆ ಆವರಣದ ಹೊರಗೆ ಹಸುವನ್ನು ಕರೆತಂದು ಮುದ್ದೆ ಚರ್ಮರೋಗದ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆದರು.
|
ಬ್ಯಾರಿಕೇಡ್ ಮೇಲೆ ಹತ್ತಿದ ಬಿಜೆಪಿ ಮುಖ್ಯಸ್ಥ ಸತೀಶ್ ಪೂನಿಯಾ
ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಸಾವಿರಾರು ಕಾರ್ಯಕರ್ತರು ಕೇಸರಿ ಧ್ವಜಗಳನ್ನು ಹಿಡಿದು ಪೊಲೀಸರ ಜೊತೆಗೆ ಘರ್ಷಣೆ ನಡೆಸಿದ್ದಾರೆ.
ಪ್ರತಿಭಟನೆ ಸಂದರ್ಭದಲ್ಲಿ ರಾಜಸ್ಥಾನದ ಬಿಜೆಪಿ ಮುಖ್ಯಸ್ಥ ಸತೀಶ್ ಪೂನಿಯಾ ಪೊಲೀಸ್ ಬ್ಯಾರಿಕೇಡ್ ಮೇಲೆ ಹತ್ತಿ ಘೋಷಣೆ ಕೂಗಿದ್ದಾರೆ. ವಿಡಿಯೋ ನೋಡಿ.

ಮುದ್ದೆ ಚರ್ಮರೋಗ ರಾಷ್ಟ್ರೀಯ ವಿಪತ್ತು
ಇದರ ನಡುವೆಯೇ ಮುದ್ದೆ ರೋಗವನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಬೇಕು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಒತ್ತಾಯಿಸಿದ್ದಾರೆ.
ಮುದ್ದೆ ಚರ್ಮ ರೋಗದಿಂದ ಹಸುಗಳ ಜೀವ ಉಳಿಸುವುದು ಹೇಗೆ ಎಂಬುದು ನಮ್ಮ ಆದ್ಯತೆಯಾಗಿದೆ. ಕೇಂದ್ರ ಸರ್ಕಾರವೇ ಲಸಿಕೆ, ಔಷಧ ನೀಡಬೇಕಿದ್ದು, ಇಂತಹ ಸಂದರ್ಭದಲ್ಲಿ ರೋಗವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡುವಂತೆ ಕೇಂದ್ರವನ್ನು ಒತ್ತಾಯಿಸುತ್ತಿದ್ದೇವೆ ಎಂದು ತಿಳಿಸಿದರು.

ಹಾಲು ಸಂಗ್ರಹಣೆಯಲ್ಲಿ ಶೇಕಡಾ 15-18 ರಷ್ಟು ಕಡಿಮೆ
ಜೈಪುರದಲ್ಲಿ ಹಾಲಿನ ಸಂಗ್ರಹಕ್ಕೂ ಈ ರೋಗ ಹೊಡೆತ ನೀಡಿದೆ. ಹೀಗಾಗಿ ರಾಜ್ಯದಲ್ಲಿ ತಯಾರಿಸುವ ಸಿಹಿತಿಂಡಿಗಳ ಬೆಲೆಯಲ್ಲಿ ಏರಿಕೆಯಾಗಿದೆ. ರಾಜ್ಯದ ಅತಿದೊಡ್ಡ ಹಾಲು ಸಹಕಾರಿ ಸಂಘ ಜೈಪುರ ಡೈರಿ ಫೆಡರೇಶನ್ ಪ್ರಕಾರ, ಹಾಲು ಸಂಗ್ರಹಣೆಯು ಶೇಕಡಾ 15-18 ರಷ್ಟು ಕಡಿಮೆಯಾಗಿದೆ. ಆದರೂ ಇದುವರೆಗೆ ಪೂರೈಕೆಯಲ್ಲಿ ಯಾವುದೇ ಅಡ್ಡಿ ಉಂಟಾಗಿಲ್ಲ.

ರೈತರಿಗೆ ಹಾಲು ಪ್ರಾಥಮಿಕ ಆದಾಯದ ಮೂಲ
ಪಶುಸಂಗೋಪನೆಯು ರಾಜಸ್ಥಾನದ ಆರ್ಥಿಕತೆಯ ಬೆನ್ನೆಲುಬಾಗಿರುವುದರಿಂದ ಮುಖ್ಯಮಂತ್ರಿ ಗೆಹ್ಲೋಟ್ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ಮರುಭೂಮಿ ರಾಜ್ಯದ ರೈತರಿಗೆ ಹಾಲು ಪ್ರಾಥಮಿಕ ಆದಾಯದ ಮೂಲವಾಗಿದೆ. 13 ರಾಜ್ಯಗಳಿಗೆ ಹರಡಿರುವ ಎಲ್ಎಸ್ಡಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಬರೆದ ಪತ್ರದಲ್ಲಿ, ಅಶೋಕ್ ಗೆಹ್ಲೋಟ್ ಅವರು ರೋಗವನ್ನು ಎದುರಿಸಲು ಹೆಚ್ಚುವರಿ ಸಹಾಯದ ಅಗತ್ಯವನ್ನು ಒತ್ತಿಹೇಳಿದ್ದಾರೆ. ಜೊತೆಗೆ ಲಸಿಕೆ ಸಿದ್ಧವಾದ ನಂತರ ರಾಜಸ್ಥಾನಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಮನವಿ ಮಾಡಿದ್ದಾರೆ.
ಮುದ್ದೆ ಚರ್ಮ ರೋಗವನ್ನು ಎದುರಿಸಲು ಇನ್ನೂ ಯಾವುದೇ ಲಸಿಕೆ ಇಲ್ಲದಿದ್ದರೂ, ಮೇಕೆ ಪೋಕ್ಸ್ ಲಸಿಕೆ ಪರಿಣಾಮಕಾರಿ ಎಂದು ಸಾಬೀತಾಗಿದೆ. ರಾಜಸ್ಥಾನದಲ್ಲಿ 16.22 ಲಕ್ಷ ಮೇಕೆ ಪಾಕ್ಸ್ ಲಸಿಕೆ ಡೋಸ್ಗಳನ್ನು ಹೊಂದಿದ್ದು, ಇದುವರೆಗೆ 12.32 ಲಕ್ಷ ಜಾನುವಾರುಗಳಿಗೆ ಲಸಿಕೆ ನೀಡಲಾಗಿದೆ. ಆದರೂ, ರಾಜ್ಯದಲ್ಲಿ 11 ಲಕ್ಷಕ್ಕೂ ಹೆಚ್ಚು ಪ್ರಾಣಿಗಳು ವೈರಸ್ಗೆ ತುತ್ತಾಗಿದ್ದು, 57,000 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ.












Click it and Unblock the Notifications