ಶ್ರೀರಾಮನ ಮಗ ಕುಶನ ವಂಶಸ್ಥರು ನಾವು ಎಂದ ಬಿಜೆಪಿ ಸಂಸದೆ ದಿಯಾ ಕುಮಾರಿ
ಜೈಪುರ್ (ರಾಜಸ್ತಾನ), ಆಗಸ್ಟ್ 11: "ರಘುವಂಶಸ್ಥರು (ಶ್ರೀರಾಮನ ವಂಶದವರು) ಈಗ ಅಯೋಧ್ಯಾದಲ್ಲಿ ವಾಸವಿದ್ದಾರಾ?" ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠವು ಪ್ರಶ್ನೆ ಮಾಡಿತ್ತು. ಇದೀಗ ಬಿಜೆಪಿ ಸಂಸದೆ- ಜೈಪುರ್ ನ ರಾಜ ವಂಶಸ್ಥೆಯೊಬ್ಬರು, ನಾವು ರಾಮನ ಮಗ ಕುಶನ ವಂಶಜರು ಎಂದು ಟ್ವಿಟ್ಟರ್ ನಲ್ಲಿ ಘೋಷಿಸಿದ್ದಾರೆ.
"ಹೌದು, ರಾಮನ ವಂಶಜರು ಜಗತ್ತಿನಾದ್ಯಂತ ಇದ್ದಾರೆ. ನಮ್ಮ ಕುಟುಂಬವೂ ಸಹ ರಾಮನ ಮಗ ಕುಶನ ವಂಶಕ್ಕೆ ಸೇರಿದ್ದು" ಎಂದು ರಾಜಸ್ತಾನದ ರಾಜಸಮಂದ್ ನ ದಿಯಾ ಕುಮಾರಿ ಹೇಳಿದ್ದಾರೆ. ದಿಯಾ ಕುಮಾರಿ ಅವರು ಜೈಪುರ್ ನ ಹಿಂದಿನ ರಾಜ ಮನೆತನಕ್ಕೆ ಸೇರಿದವರು.
ರಾಮ್ ಲಲ್ಲಾ ವಿರಾಜ್ ಮನ್ ಪರ ವಕೀಲರಾದ ಕೆ. ಪರಾಶರನ್ ಅವರನ್ನು ಸುಪ್ರೀಂ ಕೋರ್ಟ್ ಪೀಠ ಪ್ರಶ್ನೆ ಮಾಡಿತ್ತು. ಏಕೆಂದರೆ, ರಾಮನ ಜನ್ಮ ಸ್ಥಳ ಅದೇ ವ್ಯಾಪ್ತಿಗೆ ಸೇರುತ್ತದೆ ಎಂದು ಅವರ ವಾದವಾಗಿತ್ತು.

"ನಾನು ಯಾವುದೇ ಉದ್ದೇಶದಿಂದ ಇದನ್ನು ಹೇಳುತ್ತಿಲ್ಲ. ವಿವಾದಕ್ಕೆ ಗುರಿ ಆಗಿರುವ ಆ ಭೂಮಿಯ ಮಾಲೀಕತ್ವಕ್ಕೆ ನಾವೇನೂ ತಕರಾರು ಮಾಡಲ್ಲ. ಈ ಕಾನೂನು ಪ್ರಕ್ರಿಯೆಯ ಭಾಗವೂ ಆಗಲ್ಲ. ನಾನು ಹೇಳಿರುವುದು ಹೃದಯದ ಧ್ವನಿಯೇ ಹೊರತು, ಯಾವುದೇ ಉದ್ದೇಶದಿಂದ ಅಲ್ಲ" ಎಂದು ಭಾನುವಾರ ಅವರು ಹೇಳಿದ್ದಾರೆ.
ಜೈಪುರ್ ನಲ್ಲಿ ಇರುವ ಅರಮನೆ ಮ್ಯೂಸಿಯಂನ ವಿಶೇಷಾಧಿಕಾರಿ ಪ್ರಕಾರ: ಜೈಪುರದ ಪದ್ಮನಾಭ ಸಿಂಗ್ ಅವರು ರಾಮನ ಮಗ ಕುಶನ ವಂಶಜರು. ಜೈಪುರ್ ನ ರಾಜವಂಶಸ್ಥರು ರಜಪೂತ್ ನ ಕಛವಾ ಸಮುದಾಯಕ್ಕೆ ಸೇರಿದವರು. ಇತಿಹಾಸಕಾರರ ಪ್ರಕಾರ, ಇವರು ರಾಮನ ಮಗ ಕುಶನ ವಂಶಜರು. ಇತರ ಇತಿಹಾಸಕಾರರು ಖಾತ್ರಿ ಪಡಿಸುವಂತೆ, ಅಯೋಧ್ಯಾದ ಜೈಸಿಂಗ್ ಪುರ್ ಅಂದರೆ ರಾಮಜನ್ಮಭೂಮಿ ಸ್ಥಳವು ಕಛವಾಗಳಿಗೆ ಸೇರಿದ್ದು ಎನ್ನಲಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications