'ವಂಚಕರು' ಕಾಂಗ್ರೆಸ್ ಸೇರಿದ ಶಾಸಕರಿಗೆ ಮಾಯಾವತಿ ಛೀಮಾರಿ
ಜೈಪುರ, ಸೆಪ್ಟೆಂಬರ್ 17: ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದ ಆರು ಬಿಎಸ್ಪಿ ಶಾಸಕರು ಇದ್ದಕ್ಕಿದ್ದಂತೇ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಗೆ ಸೇರಿರುವುದನ್ನು 'ಮೋಸ' ಎಂದು ಮಾಯಾವತಿ ಜರೆದಿದ್ದಾರೆ.
ಬಹುಜನ ಸಮಾಜ ಪಕ್ಷದ ರಾಜೇಂದ್ರ ಗುಡ್ಡ್, ಜೋಗೇಂದ್ರ ಸಿಂಗ್ ಅವಾನಾ, ವಾಝಿಬ್ ಅಲಿ, ಲಖನ್ ಸಿಂಗ್ ಮೀನಾ, ಸಂದೀಪ್ ಯಾದವ್ ಮತ್ತು ದೀಪಕ್ ಖೇರಿಯಾ ಅವರು ಸೋಮವಾರ ಕಾಂಗ್ರೆಸ್ ಸೇರಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಕ್ಷದ ಅಧ್ಯಕ್ಷೆ ಮಾಯಾವತಿ, "ಬಿಎಸ್ಪಿಯಲ್ಲಿ ಒಡಕು ಮೂಡಿಸಿ, ನಮ್ಮ ಶಾಸಕರನ್ನು ಸೆಳೆದುಕೊಂಡ ಕಾಂಗ್ರೆಸ್, ತಾನು ಎಂದಿಗೂ ನಂಬಿಕೆಗೆ ಅರ್ಹವಾದ ಪಕ್ಷವಲ್ಲ ಎಂಬುದನ್ನು ಸಾಬೀತುಪಡಿಸಿದೆ. ಈ ಮೂಲಕ ನಮಗೆ ಮೋಸ ಮಾಡಲಾಗಿದೆ" ಎಂದು ಮಾಯಾವತಿ ಕಿಡಿಕಾರಿದ್ದಾರೆ.

"ಕಾಂಗ್ರೆಸ್ ನ ಬುದ್ದಿಯೇ ಅಷ್ಟು. ಅದು ತನ್ನ ವಿರೋಧಿಗಳೊಂದಿಗೆ ಸೆಣಸಾಡುವುದಕ್ಕಿಂತ ಹೆಚ್ಚಾಗಿ ತನಗೆ ಬೆಂಬಲ ನೀಡುವವರೊಂದಿಗೇ ಸೆಣಸಾಡುತ್ತದೆ" ಎಂದು ಮಾಯಾವತಿ ಲೇವಡಿ ಮಾಡಿದ್ದಾರೆ.
"ಕಾಂಗ್ರೆಸ್ ಎಮದಿಗೂ ಅಂಬೇಡ್ಕರ್ ಅವರ ಮತ್ತು ಅವರ ತತ್ತ್ವಗಳ ವಿರೋಧಿ. ಅದಕ್ಕಾಗಿಯೇ ದೇಶದ ಮೊದಲ ಕಾನೂನು ಸಚಿವರಾಗಿದ್ದ ಅಂಬೇಡ್ಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಗಿದ್ದು! ಅವರಿಗೆ ಭಾರತ ರತ್ನ ಕೊಡುವ ಕೆಲಸವನ್ನೂ ಕಾಂಗ್ರೆಸ್ ಮಾಡಲಿಲ್ಲ ಎಂಬುದು ಶೋಚನೀಯ ಮತ್ತು ನಾಚಿಕೆಗೇಡಿನ ವಿಚಾರ" ಎಮದು ಮಾಯಾವತಿ ಟ್ವೀಟ್ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಇದೇ ನವೆಂಬರ್ ನಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ನಡೆದ ಈ ಬೆಳವಣಿಗೆ ಬಿಎಸ್ಪಿಗೆ ಭಾರೀ ಆಘಾತವನ್ನುಂತು ಮಾಡಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications