ವಿಚಾರಣೆಗೆ ಬರ್ತೀರಾ? ಇಲ್ಲಾ ಜಾಮೀನು ರದ್ದು ಮಾಡೋದಾ?: ಸಲ್ಲುಗೆ ಕೋರ್ಟ್ ಎಚ್ಚರಿಕೆ
ಜೈಪುರ, ಜುಲೈ 5: ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಜೋಧಪುರ ಸೆಷನ್ಸ್ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ.
ವಿಚಾರಣೆಗೆ ಪದೇ ಪದೇ ಗೈರು ಹಾಜರಾಗುತ್ತಿರುವ ಸಲ್ಮಾನ್ ಖಾನ್ ಅವರು ವಿಚಾರಣೆಗೆ ಹಾಜರಾಗದೆ ಇದ್ದರೆ ಜಾಮೀನು ರದ್ದು ಮಾಡಬೇಕಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.
1998ರಲ್ಲಿ ನಡೆದ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿರುವ ಸಲ್ಮಾನ್ ಖಾನ್ ವಿಚಾರಣೆಗೆ ನಿರಂತರವಾಗಿ ಗೈರಾಗುತ್ತಿದ್ದಾರೆ. ಇದಕ್ಕೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದರೆ.

ಗುರುವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಚಂದ್ರಕುಮಾರ್ ಸೊಂಗಾರ ಅವರು ಮುಂದಿನ ವಿಚಾರಣೆಗೆ ಸಲ್ಮಾನ್ ಖಾನ್ ಖುದ್ದಾಗಿ ಹಾಜರಾಗಬೇಕು. ಇಲ್ಲದಿದ್ದರೆ ಅವರಿಗೆ ನೀಡಲಾಗಿರುವ ಜಾಮೀನು ರದ್ದುಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಲ್ಮಾನ್ ಖಾನ್ ಅವರು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ತಾತ್ಕಾಲಿಕ ವಿನಾಯಿತಿ ನೀಡಲಾಗಿತ್ತು. ಆದರೆ, ಸಲ್ಮಾನ್ ಪರ ವಕೀಲರು ಪದೇ ಪದೇ ವಿನಾಯಿತಿ ಕೇಳುತ್ತಿದ್ದಾರೆ. ಇದಕ್ಕೆ ನಾವು ತಕರಾರು ಸಲ್ಲಿಸಿದ್ದೇವೆ. ಅದಕ್ಕೆ ನ್ಯಾಯಾಲಯ ಸಹಮತ ವ್ಯಕ್ತಪಡಿಸಿದ್ದು, ಖುದ್ದಾಗಿ ಹಾಜರಾಗುವಂತೆ ನ್ಯಾಯಾಲಯ ಸಲ್ಮಾನ್ ಖಾನ್ ಅವರಿಗೆ ಸೂಚನೆ ನೀಡಿದೆ ಎಂದು ಪ್ರಾಸಿಕ್ಯೂಟರ್ ಮಹಿಪಾಲ್ ಬಿಷ್ಣೋಯ್ ತಿಳಿಸಿದ್ದಾರೆ.
1998ರ ಏಪ್ರಿಲ್ 5ರಂದು ಜೋಧಪುರದಲ್ಲಿ 'ಹಮ್ ಸಾಥ್ ಸಾಥ್ ಹೈ' ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಕೃಷ್ಣಮೃಗಗಳನ್ನು ಬೇಟೆಯಾಡಿದ ಪ್ರಕರಣದಲ್ಲಿ ಸಲ್ಮಾನ್ ಖಾನ್ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಜೋಧಪುರ ಜೈಲಿನಲ್ಲಿ ಎರಡು ರಾತ್ರಿ ಕಳೆದಿದ್ದ ಅವರಿಗೆ ಜಾಮೀನು ಸಿಕ್ಕಿತ್ತು.
ಸಲ್ಮಾನ್ ಅವರೊಂದಿಗೆ ನಟರಾದ ಸೈಫ್ ಅಲಿಖಾನ್, ಸೊನಾಲಿ ಬೇಂದ್ರೆ, ನೀಲಂ ಕೊಠಾರಿ ಮತ್ತು ಟಬು ಹಾಗೂ ಅವರ ಜತೆಗಿದ್ದ ದುಷ್ಯಂತ್ ಸಿಂಗ್ ಅವರ ಮೇಲೆಯೂ ಆರೋಪವಿತ್ತು. ಆದರೆ, ಸಾಕ್ಷ್ಯದ ಕೊರತೆಯಿಂದ ಅವರು ಖುಲಾಸೆಗೊಂಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications