ಕಾಮನ್ವೆಲ್ತ್ ಚಿನ್ನದ ಹುಡುಗಿ ಕೃಷ್ಣಾ ಪೂನಿಯಾ ಈಗ ಕಾಂಗ್ರೆಸ್ ಶಾಸಕಿ
ಜೈಪುರ, ಡಿಸೆಂಬರ್ 11: 2010ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದ ಡಿಸ್ಕಸ್ ಥ್ರೋ ಆಟಗಾರ್ತಿ ಕೃಷ್ಣ ಪೂನಿಯಾ, ರಾಜಕೀಯದಲ್ಲಿಯೂ ಭರ್ಜರಿ 'ಎಸೆತ' ಹಾಕಿದ್ದಾರೆ.
ರಾಜಕೀಯದ ಮೊದಲ ಪ್ರಯತ್ನದಲ್ಲಿ ಸೋತಿದ್ದ ಅವರಲ್ಲೀಗ ಅಥ್ಲೆಟಿಕ್ನಲ್ಲಿ ಪದಕ ಗೆದ್ದಷ್ಟೇ ಸಂಭ್ರಮ.
ರಾಜಸ್ಥಾನದ ಸಾದುಲ್ಪುರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೃಷ್ಣ ಪೂನಿಯಾ ಬಹುಜನ ಸಮಾಜ ಪಕ್ಷ ಮನೋಜ್ ನ್ಯಂಗಲಿ ಮತ್ತು ಬಿಜೆಪಿಯ ರಾಮ್ ಸಿಂಗ್ ಕಸ್ವಾನ್ ಅವರ ವಿರುದ್ಧ ಸುಮಾರು 15,000 ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದಾರೆ.

2013ರ ವಿಧಾನಸಭೆ ಚುನಾವಣೆಯಲ್ಲಿಯೂ ಅವರು ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದರು. ಆದರೆ ಮೂರನೆ ಸ್ಥಾನ ಪಡೆದುಕೊಂಡಿದ್ದರು.
ಬಿಜೆಪಿ ಮತ್ತು ಬಿಎಸ್ಪಿಯಿಂದ ಟಿಕೆಟ್ ಆಹ್ವಾನ ಬಂದಿದ್ದರೂ, ಕಾಂಗ್ರೆಸ್ ಆಯ್ದುಕೊಂಡಿದ್ದ ಕೃಷ್ಣಾ ಅವರಿಗೆ ಟಿಕೆಟ್ ದೊರೆತಿದ್ದರೂ ಪ್ರಚಾರಕ್ಕೆ ಹೆಚ್ಚು ಸಮಯ ಸಿಕ್ಕಿರಲಿಲ್ಲ. ಹೀಗಾಗಿ ಅವರು ಸೋಲು ಕಾಣಬೇಕಾಗಿತ್ತು.

ಹರಿಯಾಣದ ಕೃಷ್ಣಾ, ರಾಜಸ್ಥಾನದ ವಿರೇಂದರ್ ಪೂನಿಯಾ ಅವರನ್ನು 1999ರಲ್ಲಿ ಮದುವೆಯಾಗಿದ್ದರು. ಕೃಷ್ಣಾ ಅವರನ್ನು ತಾರಾ ಪ್ರಚಾರಕಿಯಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಉದ್ದೇಶಿಸಿತ್ತು. ಆದರೆ, ಟಿಕೆಟ್ ನೀಡುವಂತೆ ಕೃಷ್ಣಾ ಪಟ್ಟುಹಿಡಿದಿದ್ದರು.
2010ರಲ್ಲಿ ದೆಹಲಿಯಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಕೃಷ್ಣಾ ಮಹಿಳೆಯರ ಡಿಸ್ಕಸ್ ಥ್ರೋ ವೈಯಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದರು. 2012ರಲ್ಲಿ ಅವರು ಒಲಿಂಪಿಕ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications