ರಾಜಸ್ಥಾನದಲ್ಲಿ ಕಾಂಗ್ರೆಸ್ಸಿಗೆ ಬಹುಮತ: ಎನ್ ಡಿಟಿವಿ ವಿಶ್ಲೇಷಣೆ
Recommended Video

ಜೈಪುರ, ಡಿಸೆಂಬರ್ 05: ಬಹಳ ಕುತೂಹಲ ಕೆರಳಿಸಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ಎನ್ ಡಿಟಿವಿಯ ಪ್ರಣೋಯ್ ರಾಯ್ ವಿಶ್ಲೇಷಿಸಿದ್ದಾರೆ. ಆಡಳಿತಾರೂಢ ವಸುಂಧರಾ ರಾಜೆ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಇರುವ ಆಡಳಿತ ವಿರೋಧಿ ಅಲೆಯನ್ನು ಕಾಂಗ್ರೆಸ್ ಸಮರ್ಥವಾಗಿ ಬಳಸಿಕೊಂಡು ಬಹುಮತ ಗಳಿಸುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿದೆ.
2013 ರ ಚುನಾವಣೆಯಲ್ಲಿ ಭಾರೀ ಜಯಗಳಿಸಿದ್ದ ಬಿಜೆಪಿ ಈ ಬಾರಿ ಅತ್ಯಂತ ಕಳಪೆ ಪ್ರದರ್ಶನ ತೋರುವ ಸಾಧ್ಯತೆ ಇದೆ. ಕಳೆದ ಚುನಾವಣೆಗೆ ಹೋಲಿಸಿದರೆ, ಬಿಜೆಪಿ 90 ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ವಿವಾದಾತ್ಮಕ ನಡೆ ಮತ್ತು ಪಕ್ಷದ ಜನರಿಂದಲೇ ಸಿಕ್ಕ 'ದುರಹಂಕಾರ' ಎಂಬ ಬಿರುದು, ಅವರ ರಾಜಕೀಯ ಬದುಕಿನ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆ ಇದೆ.
199(200) ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು ಫಲಿತಾಂಶ ಕುತೂಹಲ ಕೆರಳಿಸಿದೆ. ಎನ್ ಡಿಟಿವಿ ವಿಶ್ಲೇಷಣೆ ಪ್ರಕಾರ ಯಾರಿಗೆಷ್ಟು ಸ್ಥಾನ ಎಂಬ ವಿವರ ಇಲ್ಲಿದೆ.

ಯಾರಿಗೆ ಎಷ್ಟು ಸ್ಥಾನ?
ಕಾಂಗ್ರೆಸ್- 125
ಬಿಜೆಪಿ - 67
ಬಿಎಸ್ಪಿ - 2
ಇತರರು - 6

2013 ರಲ್ಲಿ ಎಷ್ಟಿತ್ತು?
ಕಾಂಗ್ರೆಸ್- 21
ಬಿಜೆಪಿ - 163
ಬಿಎಸ್ಪಿ - 3
ಇತರರು - 13

ಮ್ಯಾಜಿಕ್ ನಂಬರ್ 101
200 ವಿಧಾನಸಭಾ ಕ್ಷೇತ್ರಗಳ ರಾಜಸ್ಥಾನ ವಿಧಾನಸಭೆಯಲ್ಲಿ ಬಹುಮತಕ್ಕೆ ಅಗ್ಯವಿರುವ ಮ್ಯಾಜಿಕ್ ನಂಬರ್ 101. ಕಾಂಗ್ರೆಸ್ ಸುಲಭವಾಗಿ ಈ ನಂಬರ್ ಅನ್ನು ದಾಟಲಿದೆ ಎಂಬುದು ವಿಶ್ಲೇಷಣೆ. ಹಾಲಿ ಬಿಜೆಪಿ ಸರ್ಕಾರದ ವಿರುದ್ಧ, ಅದರಲ್ಲೂ ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ವಿರುದ್ಧ ರಾಜ್ಯದ ಜನತೆಯಲ್ಲಿ ಉತ್ತಮ ಅಭಿಪ್ರಾಯವಿದ್ದಂತಿಲ್ಲ. ಈ ಆಡಳಿತ ವಿರೋಧಿ ಅಲೆಯನ್ನೇ ಕಾಂಗ್ರೆಸ್ ಸಮರ್ಥವಾಗಿ ಬಳಸಿಕೊಳ್ಳುತ್ತಿದೆ. ಆದರೆ ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನಾಭಿಪ್ರಾಯವರುವುದು ಬಿಜೆಪಿಗೆ ಲಾಭವಾಗಬಹುದು ಎಂಬುದು ಬಿಜೆಪಿ ಲೆಕ್ಕಾಚಾರ.

ಡಿ.7 ರಂದು ಚುನಾವಣೆ
ರಾಜಸ್ಥಾನದಲ್ಲಿ ಡಿ.7 ರಂದು ಚುನಾವಣೆ ನಡೆಯಲಿದ್ದು, ಡಿ.11 ರಂದು ಫಲಿತಾಂಶ ಹೊರಬೀಳಲಿದೆ. ಒಟ್ಟು 200 ಕ್ಷೇತ್ರಗಳ ವಿಧಾನಸಭೆಯಲ್ಲಿ 199 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇಲ್ಲಿನ ಆಲ್ವಾರ್ ಜಿಲ್ಲೆಯ ರಾಮಗರ್ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಲಕ್ಷ್ಮಣ್ ಸಿಂಗ್ ನ.29 ರಂದು ಹೃದಯಾಘಾತದಿಂದ ಮೃತರಾದ ಕಾರಣ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications