ರಾಜಸ್ಥಾನದಲ್ಲಿ ಕಾಂಗ್ರೆಸ್ಸಿಗೆ ಬಹುಮತ: ಎನ್ ಡಿಟಿವಿ ವಿಶ್ಲೇಷಣೆ
Recommended Video

ಜೈಪುರ, ಡಿಸೆಂಬರ್ 05: ಬಹಳ ಕುತೂಹಲ ಕೆರಳಿಸಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ಎನ್ ಡಿಟಿವಿಯ ಪ್ರಣೋಯ್ ರಾಯ್ ವಿಶ್ಲೇಷಿಸಿದ್ದಾರೆ. ಆಡಳಿತಾರೂಢ ವಸುಂಧರಾ ರಾಜೆ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಇರುವ ಆಡಳಿತ ವಿರೋಧಿ ಅಲೆಯನ್ನು ಕಾಂಗ್ರೆಸ್ ಸಮರ್ಥವಾಗಿ ಬಳಸಿಕೊಂಡು ಬಹುಮತ ಗಳಿಸುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿದೆ.
2013 ರ ಚುನಾವಣೆಯಲ್ಲಿ ಭಾರೀ ಜಯಗಳಿಸಿದ್ದ ಬಿಜೆಪಿ ಈ ಬಾರಿ ಅತ್ಯಂತ ಕಳಪೆ ಪ್ರದರ್ಶನ ತೋರುವ ಸಾಧ್ಯತೆ ಇದೆ. ಕಳೆದ ಚುನಾವಣೆಗೆ ಹೋಲಿಸಿದರೆ, ಬಿಜೆಪಿ 90 ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ವಿವಾದಾತ್ಮಕ ನಡೆ ಮತ್ತು ಪಕ್ಷದ ಜನರಿಂದಲೇ ಸಿಕ್ಕ 'ದುರಹಂಕಾರ' ಎಂಬ ಬಿರುದು, ಅವರ ರಾಜಕೀಯ ಬದುಕಿನ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆ ಇದೆ.
199(200) ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು ಫಲಿತಾಂಶ ಕುತೂಹಲ ಕೆರಳಿಸಿದೆ. ಎನ್ ಡಿಟಿವಿ ವಿಶ್ಲೇಷಣೆ ಪ್ರಕಾರ ಯಾರಿಗೆಷ್ಟು ಸ್ಥಾನ ಎಂಬ ವಿವರ ಇಲ್ಲಿದೆ.

ಯಾರಿಗೆ ಎಷ್ಟು ಸ್ಥಾನ?
ಕಾಂಗ್ರೆಸ್- 125
ಬಿಜೆಪಿ - 67
ಬಿಎಸ್ಪಿ - 2
ಇತರರು - 6

2013 ರಲ್ಲಿ ಎಷ್ಟಿತ್ತು?
ಕಾಂಗ್ರೆಸ್- 21
ಬಿಜೆಪಿ - 163
ಬಿಎಸ್ಪಿ - 3
ಇತರರು - 13

ಮ್ಯಾಜಿಕ್ ನಂಬರ್ 101
200 ವಿಧಾನಸಭಾ ಕ್ಷೇತ್ರಗಳ ರಾಜಸ್ಥಾನ ವಿಧಾನಸಭೆಯಲ್ಲಿ ಬಹುಮತಕ್ಕೆ ಅಗ್ಯವಿರುವ ಮ್ಯಾಜಿಕ್ ನಂಬರ್ 101. ಕಾಂಗ್ರೆಸ್ ಸುಲಭವಾಗಿ ಈ ನಂಬರ್ ಅನ್ನು ದಾಟಲಿದೆ ಎಂಬುದು ವಿಶ್ಲೇಷಣೆ. ಹಾಲಿ ಬಿಜೆಪಿ ಸರ್ಕಾರದ ವಿರುದ್ಧ, ಅದರಲ್ಲೂ ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ವಿರುದ್ಧ ರಾಜ್ಯದ ಜನತೆಯಲ್ಲಿ ಉತ್ತಮ ಅಭಿಪ್ರಾಯವಿದ್ದಂತಿಲ್ಲ. ಈ ಆಡಳಿತ ವಿರೋಧಿ ಅಲೆಯನ್ನೇ ಕಾಂಗ್ರೆಸ್ ಸಮರ್ಥವಾಗಿ ಬಳಸಿಕೊಳ್ಳುತ್ತಿದೆ. ಆದರೆ ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನಾಭಿಪ್ರಾಯವರುವುದು ಬಿಜೆಪಿಗೆ ಲಾಭವಾಗಬಹುದು ಎಂಬುದು ಬಿಜೆಪಿ ಲೆಕ್ಕಾಚಾರ.

ಡಿ.7 ರಂದು ಚುನಾವಣೆ
ರಾಜಸ್ಥಾನದಲ್ಲಿ ಡಿ.7 ರಂದು ಚುನಾವಣೆ ನಡೆಯಲಿದ್ದು, ಡಿ.11 ರಂದು ಫಲಿತಾಂಶ ಹೊರಬೀಳಲಿದೆ. ಒಟ್ಟು 200 ಕ್ಷೇತ್ರಗಳ ವಿಧಾನಸಭೆಯಲ್ಲಿ 199 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇಲ್ಲಿನ ಆಲ್ವಾರ್ ಜಿಲ್ಲೆಯ ರಾಮಗರ್ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಲಕ್ಷ್ಮಣ್ ಸಿಂಗ್ ನ.29 ರಂದು ಹೃದಯಾಘಾತದಿಂದ ಮೃತರಾದ ಕಾರಣ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications