ರಾಜಸ್ಥಾನದ 5 ಜಿಲ್ಲೆಗಳಲ್ಲಿ ಅನಿರ್ದಿಷ್ಟಾವಧಿ ಕರ್ಫ್ಯೂ ಘೋಷಣೆ
ಜೈಪುರ, ನವೆಂಬರ್ 9: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಕುರಿತು ಸುಪ್ರೀಂಕೋರ್ಟ್ನಿಂದ ಇಂದು ತೀರ್ಪು ಹೊರ ಬೀಳಲಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ತಡೆಯಲು ರಾಜಸ್ಥಾನದಲ್ಲಿ ಅನಿರ್ದಿಷ್ಟಾವಧಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಎಲ್ಲಾ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಹಾಗೂ ರಾಜಸ್ಥಾನ ಸರ್ಕಾರವು 144 ಸೆಕ್ಷನ್ ಜಾರಿ ಮಾಡಿದೆ. ಹಾಗೂ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಸುಪ್ರೀಂಕೋರ್ಟ್ನಿಂದ ಇಂದು ಅಯೋಧ್ಯೆ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಅನೇಕ ಕಡೆ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಅಲಿಗಢ, ಆಗ್ರಾ, ಉತ್ತರ ಪ್ರದೇಶ, ಲಕ್ನೋ ಸೇರಿದಂತೆ ಇನ್ನೂ ಹಲವೆಡೆ ಇಂಟರ್ನೆಟ್ ಸೇವೆ ಸ್ಥಗಿತಗೊಳ್ಳಲಿದೆ. ರಾಜಸ್ಥಾನದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಇಂದು ಬೆಳಗ್ಗೆ 10.30ರ ಸುಮಾರಿಗೆ ತೀರ್ಪು ಹೊರಬೀಳಲಿದೆ.

ರಾಮಜನ್ಮಭೂಮಿ ಹಾಗೂ ಬಾಬ್ರಿ ಮಸೀದಿ ಕುರಿತು ತೀರ್ಪು ಹೊರಬೀಳಲಿರುವುದರಿಂದ ಭದ್ರತಾ ಕ್ರಮಗಳ ಭಾಗವಾಗಿ, ಅಯೋಧ್ಯೆಯ ನಂತರದ ತೀರ್ಪಿನ ನಂತರ ಯಾವುದೇ ಅಗತ್ಯವಿದ್ದಲ್ಲಿ ಹೆಲಿಕಾಪ್ಟರ್ಗಳನ್ನು ನಿಯೋಜಿಸಲಾಗುತ್ತಿದೆ.












Click it and Unblock the Notifications