Breaking: ಕನ್ಹಯ್ಯಾ ಲಾಲ್ ಹತ್ಯೆ ಬೆನ್ನಲ್ಲೇ ಉದಯಪುರದಲ್ಲಿ ಕರ್ಫ್ಯೂ ಜಾರಿ
ಜೈಪುರ್, ಜೂನ್ 28: ರಾಜಸ್ಥಾನದಲ್ಲಿ ತಾಲಿಬಾನ್ ಮಾದರಿಯಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ನಡೆದ ಬೆನ್ನಲ್ಲೇ ಉದಯಪುರ ಜಿಲ್ಲೆಯಲ್ಲಿ 144 ಸೆಕ್ಷನ್ ಅಡಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ ಎಂಬ ಕಾರಣಕ್ಕೆ ಟೈಲರ್ ಅನ್ನು ಹತ್ಯೆ ಮಾಡಿದ ಇಬ್ಬರು ಆರೋಪಿಗಳಾದ ಮೊಹಮ್ಮದ್ ರಿಯಾಜ್ ಅನ್ಸಾರಿ ಮತ್ತು ಗೌಸ್ ಮೊಹಮ್ಮದ್ ಅನ್ಸಾರಿ ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.
ಉದಯಪುರದ ಧನ್ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯನ್ನು ಗಮನದಲ್ಲಿಟ್ಟುಕೊಂಡು, ಉದಯಪುರ ಜಿಲ್ಲೆಯ ಧನ್ಮಂಡಿ, ಘಂಟಾಘರ್, ಹಾಥಿಪೋಲ್, ಅಂಬಾಮಾತಾ, ಸೂರಜ್ಪೋಲ್, ಭೂಪಾಲಪುರ ಮತ್ತು ಸವಿನಾ ಪಿಎಸ್ ಪ್ರದೇಶಗಳಲ್ಲಿ ಸೆಕ್ಷನ್ 144 ಮತ್ತು ಕರ್ಫ್ಯೂ ವಿಧಿಸಲಾಗಿದೆ. ಈ ಜಿಲ್ಲೆಯಲ್ಲಿ ಮುಂದಿನ ಆದೇಶದವರೆಗೆ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ.

ಉದಯಪುರದಲ್ಲಿ ಇಂಟರ್ ನೆಟ್ ಸ್ಥಗಿತ: ಟೈಲರ್ ಕನ್ಹಯ್ಯಾ ಲಾಲ್ ಹತ್ಯೆಯ ಬೆನ್ನಲ್ಲೇ ಉದಯಪುರದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹತ್ಯೆಯನ್ನು ಖಂಡಿಸಿ ಜನರು ಪ್ರತಿಭಟನೆ ನಡೆಸುತ್ತಿದ್ದು, ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮುಂದಿನ 24 ಗಂಟೆಗಳವರೆಗೆ ಇಂಟರ್ ಸೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಉದಯಪುರದಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜನೆ: ಜೈಪುರದಿಂದ ಇಬ್ಬರು ಎಡಿಜಿಪಿಗಳು, ಇನ್ನೂ ಒಬ್ಬರು ಎಸ್ಪಿ ಮತ್ತು 600 ಹೆಚ್ಚುವರಿ ಪೊಲೀಸ್ ಪಡೆಯನ್ನು ಉದಯಪುರಕ್ಕೆ ಕಳುಹಿಸಲಾಗಿದೆ. ಅಪರಾಧಿಗಳನ್ನು ಬಿಡುವುದಿಲ್ಲ. ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು. ಕಾನೂನು ಸುವ್ಯಸ್ಥೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಉದಯಪುರದ ಹೆಚ್ಚುವರಿ ನಿರ್ದೇಶಕ ಹವಾಸಿಂಗ್ ಗುಮ್ತಾ ತಿಳಿಸಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications