ರಾಜಸ್ಥಾನ; ಕಾಂಗ್ರೆಸ್ ಶಾಸಕರ ಅನರ್ಹತೆ ಬಿಕ್ಕಟ್ಟು ಸುಪ್ರೀಂಕೋರ್ಟ್‌ಗೆ

ಜೈಪುರ, ಜುಲೈ 22 : ರಾಜಸ್ಥಾನ ಕಾಂಗ್ರೆಸ್‌ನಲ್ಲಿನ ಬಿಕ್ಕಟ್ಟು ಸುಪ್ರೀಂಕೋರ್ಟ್ ಮೆಟ್ಟಿಲೇರಲಿದೆ. ಸಚಿನ್ ಪೈಲೆಟ್ ಸೇರಿ 19 ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್ ನೀಡಿರುವ ನೋಟಿಸ್‌ಗೆ ಶುಕ್ರವಾರದ ತನಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

Recommended Video

      America ನಂತರ Indiaದಲ್ಲಿ ಅತಿ ಹೆಚ್ಚು Covid test | Oneindia Kannada

      ವಿಧಾನಸಭೆ ಸ್ಪೀಕರ್ ಸಿ. ಪಿ. ಜೋಶಿ ರಾಜಸ್ಥಾನ ಹೈಕೋರ್ಟ್ ಆದೇಶದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಿದ್ದಾರೆ. ಸ್ಪೀಕರ್ ನೀಡಿರುವ ನೋಟಿಸ್ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದೆ.

      ಶುಕ್ರವಾರ ಅರ್ಜಿಯ ತೀರ್ಪು ನೀಡುವ ತನಕ ಸ್ಪೀಕರ್ ನೋಟಿಸ್ ಕುರಿತು ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಸೂಚನೆ ನೀಡಿದೆ. ರಾಜಸ್ಥಾನ ಹೈಕೋರ್ಟ್‌ನ ಈ ಆದೇಶವನ್ನು ಸ್ಪೀಕರ್ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಿದ್ದಾರೆ.

      ರಾಜಸ್ಥಾನ ಹೈಕೋರ್ಟ್‌ನಲ್ಲಿ ಸ್ಪೀಕರ್ ಪರವಾಗಿ ವಾದ ಮಂಡಿಸಿದ ಅಭಿಷೇಕ್ ಮನು ಸಿಂಘ್ವಿ, "ಶಾಸಕರಿಗೆ ನೋಟಿಸ್ ಕುರಿತು ಪ್ರಶ್ನೆ ಮಾಡಲು ಅವಕಾಶವೇ ಇಲ್ಲ. ಸ್ಪೀಕರ್ ತೀರ್ಮಾನ ಕೈಗೊಂಡಿದ್ದರೆ ಪ್ರಶ್ನೆ ಮಾಡಬಹುದಿತ್ತು" ಎಂದು ಹೇಳಿದ್ದರು.

      ಕ್ರಮ ಕೈಗೊಳ್ಳುವಂತಿಲ್ಲ

      ಕ್ರಮ ಕೈಗೊಳ್ಳುವಂತಿಲ್ಲ

      ಸಚಿನ್ ಪೈಲೆಟ್ ಸೇರಿದಂತೆ 19 ಶಾಸಕರ ಅನರ್ಹತೆ ನೋಟಿಸ್ ವಿಚಾರದಲ್ಲಿ ಶುಕ್ರವಾರದ ತನಕ ಯಾವುದೇ ಕ್ರಮವನ್ನು ಸ್ಪೀಕರ್ ಕೈಗೊಳ್ಳುವಂತಿಲ್ಲ ಎಂದು ರಾಜಸ್ಥಾನ ಹೈಕೋರ್ಟ್ ಮೊದಲು ಮೂರು ದಿನ ತಡೆಯಾಜ್ಞೆ ನೀಡಿತ್ತು. ಬಳಿಕ ಮಂಗಳವಾರ ಶುಕ್ರವಾರದ ತನಕ ಅದನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

      ಸಂಪೂರ್ಣ ಅಧಿಕಾರವಿದೆ

      ಸಂಪೂರ್ಣ ಅಧಿಕಾರವಿದೆ

      ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರನ್ನು ಅನರ್ಹಗೊಳಿಸಲು ನೋಟಿಸ್ ನೀಡಲಾಗಿದೆ. ಸ್ಪೀಕರ್‌ಗೆ ನೋಟಿಸ್ ನೀಡುವ ಅಧಿಕಾರವಿದೆ. ಹೈಕೋರ್ಟ್ ನೋಟಿಸ್ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆ ನೀಡುವ ಮೂಲಕ ವಿಳಂಬ ಮಾಡುತ್ತಿದೆ ಎಂದು ಸ್ಪೀಕರ್ ಸಿ. ಪಿ. ಜೋಶಿ ಹೇಳಿದ್ದಾರೆ. ಆದ್ದರಿಂದ ಆದೇಶವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಿದ್ದಾರೆ.

      ಸಚಿನ್ ಪೈಲೆಟ್ ಬಣಕ್ಕೆ ಸಮಯ ಸಿಕ್ಕಿದೆ

      ಸಚಿನ್ ಪೈಲೆಟ್ ಬಣಕ್ಕೆ ಸಮಯ ಸಿಕ್ಕಿದೆ

      ಎರಡು ಸಿಎಲ್‌ಪಿ ಸಭೆಗೆ ಗೈರಾಗಿದ್ದ ರಾಜಸ್ಥಾನ ಕಾಂಗ್ರೆಸ್ ನಾಯಕ ಸಚಿನ್ ಪೈಲೆಟ್ ಮತ್ತು ಅವರ 18 ಬೆಂಬಲಿತ ಶಾಸಕರಿಗೆ ಸ್ಪೀಕರ್ ಅನರ್ಹತೆ ನೋಟಿಸ್ ನೀಡಿದ್ದರು. ಇದನ್ನು ಅವರು ಹೈಕೋರ್ಟ್‌ನಲ್ಲಿ ಪ್ರಶ್ನಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಶುಕ್ರವಾರಕ್ಕೆ ತೀರ್ಪು ಕಾಯ್ದಿರಿಸಿದೆ. ಆದ್ದರಿಂದ, ಸಚಿನ್ ಪೈಲೆಟ್ ಬಣಕ್ಕೆ ಸಮಯ ಸಿಕ್ಕಿದೆ.

      ನಾವು ಪಕ್ಷವನ್ನು ಬಿಟ್ಟಿಲ್ಲ

      ನಾವು ಪಕ್ಷವನ್ನು ಬಿಟ್ಟಿಲ್ಲ

      ರಾಜಸ್ಥಾನ ಹೈಕೋರ್ಟ್‌ನಲ್ಲಿ ಬಂಡಾಯ ಶಾಸಕರ ಪರವಾಗಿ ವಾದ ಮಂಡಿಸಿದ ವಕೀಲರು, "ವಿಧಾನಸಭೆ ಅಧಿವೇಶನ ನಡೆಯುತ್ತಿಲ್ಲ. ಆದ್ದರಿಂದ, ವಿಪ್‌ಗೆ ಯಾವುದೇ ಮಾನ್ಯತೆ ಇಲ್ಲ. ಶಾಸಕರು ಕಾಂಗ್ರೆಸ್ ಪಕ್ಷವನ್ನು ಬಿಡುತ್ತಿಲ್ಲ. ನಾಯಕತ್ವವನ್ನು ಬದಲಾವಣೆ ಮಾಡಬೇಕು ಎಂದು ಮಾತ್ರ ಕೇಳುತ್ತಿದ್ದಾರೆ" ಎಂದು ಹೇಳಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+