900 ಕುಟುಂಬವನ್ನು ದತ್ತು ಪಡೆದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ
ನವದೆಹಲಿ, ಮೇ 28: ರಾಜಸ್ಥಾನದ ಜನತೆ ಉಷ್ಣಗಾಳಿ, ನೀರಿನ ಕೊರತೆ ಹಾಗೂ ಮರುಭೂಮಿ ಮಿಡತೆಯ ಹಾವಳಿಯಿಂದಾಗಿ ಮಾನಸಿಕ ಹಾಗೂ ದೈಹಿಕವಾಗಿ ಕುಗ್ಗಿಹೋಗಿದ್ದಾರೆ.
ಇದರ ಜೊತೆಗೆ ಕರೊನಾವೂ ಕೂಡ ಇದೆ. ರಾಜಸ್ಥಾನದ ಸೋಡಾ ಪ್ರದೇಶದ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷೆ ಛವಿ ರಾಜಾವತ್ ಅವರು ಅಲ್ಲಿನ 900 ಕುಟುಂಬವನ್ನು ದತ್ತು ತೆಗೆದುಕೊಳ್ಳಲು ಮುಂದಾಗಿದ್ದಾರೆ.
ಸಾಮಾನ್ಯವಾಗಿ ಊರಿನ ಒಂದೆರೆಡು ಮಂದಿಯನ್ನು ದತ್ತು ತೆಗೆದುಕೊಳ್ಳಬಹುದು ಆದರೆ ಇವರು ಹಳ್ಳಿಯಲ್ಲಿರುವ 900 ಕುಟುಂಬವನ್ನೂ ಕೂಡ ದತ್ತು ತೆಗೆದುಕೊಂಡು ಅವರ ಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಛವಿ ಅವರು ಬಿಜಿನೆಸ್ ಮ್ಯಾನೇಜ್ಮೆಂಟ್ ಡಿಗ್ರಿ ವ್ಯಾಸಂಗ ಮಾಡಿದ್ದಾರೆ. ಆದರೆ ಅವರು ಒಳ್ಳೆಯ ಕೆಲಸಕ್ಕೆ ಸೇರುವುದು ಬಿಟ್ಟು ಜನರ ಅಭಿವೃದ್ಧಿಗೆ ಶ್ರಮಿಸಲು ಮುಂದಾಗಿದ್ದಾರೆ. ಈ 900 ಕುಟುಂಬಗಳನ್ನು ಸಾಕಲು ನಿಧಿ ಒಟ್ಟುಗೂಡಿಸುತ್ತಿದ್ದಾರೆ.
ಈ ಪ್ರಸ್ತುತ ಪರಿಸ್ಥಿತಿಯನ್ನು ನೋಡಿದಾಗ ಭಾರತವು ಉತ್ತಮ ಸ್ಥಳಗಳಲ್ಲಿ ಒಂದು ಎಂದು ಹೇಳಲು ಕಷ್ಟವಾಗುತ್ತದೆ. ಸೆಕೆ ಹೆಚ್ಚಿದೆ, ಕುಡಿಯಲು ನೀರಿಲ್ಲ, ಕೊರೊನಾವೈರಸ್ ಹಾವಳಿ ಇದೆ, ಈಗ ಮರುಭೂಮಿ ಮಿಡತೆ ಕೂಡ ಬೆಳೆಗಳನ್ನು ನಾಶಮಾಡುತ್ತಿದೆ. ನಾನು ಈ ಹಳ್ಳಿಯ ಜೊತೆ ಮೊದಲಿನಿಂದಲೂ ಸಂಪರ್ಕ ಹೊಂದಿದ್ದೇನೆ. ಹೀಗಾಗಿ ಈ 900 ಕುಟುಂಬದ ಜವಾಬ್ದಾರಿ ಹೊರಲು ತಯಾರಿದ್ದೇನೆ.
ಎಷ್ಟು ಮಂದಿಗೆ ನಿಮ್ಮಿಂದ ಸಹಾಯ ಮಾಡಲು ಸಾಧ್ಯವೋ ಅಷ್ಟು ಸಹಾಯ ಮಾಡಿ. ಸಹಾಯ ಮಾಡಲು ಇಲ್ಲಿ ಕ್ಲಿಕ್ ಮಾಡಿ.
ಇದರ ಬಳಿಕ ಇ-ಮೇಲ್ ಹಾಗೂ ಫೋನ್ ನಂಬರ್ ಹಾಕಿ, ಡೊನೇಟ್ ಎನ್ನುವ ಬಟನ್ ಕ್ಲಿಕ್ ಮಾಡಿ. ನಿಮಗೆ ಇನ್ಯಾವುದೇ ಮಾಹಿತಿ ಬೇಕಿದ್ದರೆ [email protected] ಗೆ ಇ-ಮೇಲ್ ಮಾಬಹುದಾಗಿದೆ.
ಅವರು ಗ್ರಾಮದ ಜನರೊಂದಿಗೆ ಮಾತನಾಡಿ, ಅವರಿಗೆ ಪ್ರತಿ ತಿಂಗಳು 3 ಸಾವಿರ ರೂ ನೀಡುವುದಾಗಿ ಭರವಸೆ ನೀಡಿದ್ದಾರೆ. ಆನ್ಲೈನ್ ಮೂಲಕ ಕೆಲವರನ್ನು ಭೇಟಿಯಾಗಿ ಅವರ ಬಳಿ ಸಹಾಯ ಕೇಳಿದ್ದಾರೆ. ಸುಮಾರು 140 ಮಂದಿಯನ್ನು ದತ್ತುತೆಗೆದುಕೊಳ್ಳುವಷ್ಟು ಹಣ ಈಗಾಗಲೇ ಸಂಗ್ರಹವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಏಪ್ರಿಲ್ 10 ರಿಂದ ಅಭಿಯಾನ ಆರಂಭವಾಗಿದ್ದು, ಜುಲೈ 2020ರವರೆಗೆ ನಡೆಯಲಿದೆ.
ಈ ಹಳ್ಳಿಯಲ್ಲಿ ಸಾಕಷ್ಟು ಮಂದಿ ಬಳಿ ಜಮೀನಿಲ್ಲ, ಸಣ್ಣ ಹಾಗೂ ಮಧ್ಯಮ ವರ್ಗದ ಕೃಷಿಕರು ಎಂದಿಗೂ ಲಾಭ ಗಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications