ಜೈಪುರಕ್ಕೆ ಸಚಿನ್ ಪೈಲೆಟ್ ವಾಪಸ್; ಹೇಳಿದ್ದು ಒಂದೇ ಮಾತು!
ಜೈಪುರ, ಆಗಸ್ಟ್ 11 : ಸರಣಿ ಸಭೆಗಳು, ಆರೋಪ, ಪ್ರತ್ಯಾರೋಪ, ಹೈಕೋರ್ಟ್, ಸುಪ್ರೀಂಕೋರ್ಟ್ ಎಲ್ಲಾ ಕಡೆ ಸದ್ದು ಮಾಡಿದ್ದ ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು ಅಂತ್ಯಗೊಂಡಿದೆ. ಕಾಂಗ್ರೆಸ್ ನಾಯಕ ಸಚಿನ್ ಪೈಲೆಟ್ ಜೈಪುರಕ್ಕೆ ವಾಪಸ್ ಆಗಿದ್ದಾರೆ.
ಮಂಗಳವಾರ ಸಂಜೆ ಜೈಪುರಕ್ಕೆ ವಾಪಸ್ ಆದ ಸಚಿನ್ ಪೈಲೆಟ್ ಪತ್ರಿಕಾಗೋಷ್ಠಿ ನಡೆಸಿದರು. "ನಾನು ಯಾವುದೇ ಹುದ್ದೆಗಾಗಿ ಬೇಡಿಕೆ ಇಟ್ಟಿಲ್ಲ" ಎಂದು ಅವರು ಸ್ಪಷ್ಟಪಡಿಸಿದರು. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧದ ಅಸಮಾಧಾನದಿಂದಾಗಿ 18 ಶಾಸಕರ ಜೊತೆ ಹರ್ಯಾಣದ ಹೋಟೆಲ್ನಲ್ಲಿ ಅವರು ಒಂದು ತಿಂಗಳಿನಿಂದ ವಾಸ್ತವ್ಯ ಹೂಡಿದ್ದರು.
"ಕಾಂಗ್ರೆಸ್ ಪಕ್ಷಕ್ಕೆ ವಾಪಸ್ ಆಗುವ ಶಾಸಕರ ವಿರುದ್ಧ ಯಾವುದೇ ದ್ವೇಷದ ರಾಜಕಾರಣ ನಡೆಯಬಾರದು ಎಂಬುದು ನನ್ನ ನಿರೀಕ್ಷೆಯಾಗಿದೆ" ಎಂದು ಸಚಿನ್ ಪೈಲೆಟ್ ಹೇಳಿದರು. ದೆಹಲಿಯಲ್ಲಿ ಹೈಕಮಾಂಡ್ ಮಟ್ಟದಲ್ಲಿ ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು ಪರಿಹರಿಸಲು ನಡೆಸಿದ ಎಲ್ಲಾ ಪ್ರಯತ್ನಗಳು ಫಲಕೊಟ್ಟಿವೆ.
42 ವರ್ಷದ ಸಚಿನ್ ಪೈಲೆಟ್ ರಾಜಸ್ಥಾನದ ಉಪ ಮುಖ್ಯಮಂತ್ರಿಯಾಗಿದ್ದು. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಎದ್ದಿದ್ದ ಅವರನ್ನು ಉಪ ಮುಖ್ಯಮಂತ್ರಿ ಮತ್ತು ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿತ್ತು.

ನಾನು ಯಾವುದೇ ಬೇಡಿಕೆ ಇಟ್ಟಿಲ್ಲ
ಮತ್ತೆ ಉಪಮುಖ್ಯಮಂತ್ರಿ ಆಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿನ್ ಪೈಲೆಟ್, "ನಾನು ಪಕ್ಷದ ನಾಯಕರ ಬಳಿ ಯಾವುದೇ ಹುದ್ದೆಗಾಗಿ ಬೇಡಿಕೆ ಇಟ್ಟಿಲ್ಲ. ನಾನು ಒಬ್ಬ ಶಾಸಕ ಮತ್ತು ಕಾಂಗ್ರೆಸ್ ಕಾರ್ಯಕರ್ತ. ಪಕ್ಷ ಹೇಳಿದಂತೆ ನಾನು ಮಾಡುವೆ" ಎಂದು ಸ್ಪಷ್ಟನೆ ನೀಡಿದರು.

ವೈಯಕ್ತಿಕ ದಾಳಿಯಿಂದ ನೋವಾಗಿದೆ
"ವೈಯಕ್ತಿಕ ಮಟ್ಟದ ದಾಳಿಯಿಂದಾಗಿ ನನಗೆ ತುಂಬಾ ನೋವಾಗಿದೆ. ಮಾಡಿದ ಎಲ್ಲಾ ಆರೋಪಗಳು, ಬಳಸಿದ ಭಾಷೆಯನ್ನು ಮರೆತು ಬಿಡೋಣ. ಎಲ್ಲರೂ ಒಂದಾಗಿ ಜನರಿಗೆ ಸಹಾಯಕವಾಗುವಂತಹ ಕೆಲಸ ಮಾಡೋಣ" ಎಂದು ಸಚಿನ್ ಪೈಲೆಟ್ ಕರೆ ನೀಡಿದರು.

ಪಕ್ಷ, ನಾಯಕತ್ವದ ವಿರುದ್ಧ ಮಾತನಾಡಿಲ್ಲ
"ಪಕ್ಷದ ನಾಯಕರು, ನಾಯಕತ್ವದ ವಿರುದ್ಧ ನಾವು ಎಂದೂ ಮಾತನಾಡಿಲ್ಲ. ಹಲವಾರು ಜನರು ನಮ್ಮ ಹೇಳಿಕೆಗಳನ್ನು ತಿರುಚಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರು. 30 ದಿನದ ಹಿಂದೆ ನಾವು ಹೇಳಿದ ಮಾತಿಗೆ ಇಂದಿಗೂ ಬದ್ಧರಾಗಿದ್ದೇವೆ" ಎಂದು ಸಚಿನ್ ಪೈಲೆಟ್ ಹೇಳಿದರು.

ಕಾಂಗ್ರೆಸ್ ಎಲ್ಲವನ್ನೂ ಕೊಟ್ಟಿದೆ
"ಚಿಕ್ಕ ವಯಸ್ಸಿನಲ್ಲಿಯೇ ಕಾಂಗ್ರೆಸ್ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನೀಡಿದ ಹುದ್ದೆಗೆ ನಾನು ನ್ಯಾಯ ಒದಗಿಸಿದ್ದೇನೆ. ಮುಂದೆಯೂ ಪಕ್ಷ ಹೇಳಿದ ಕೆಲಸಗಳನ್ನು ಮಾಡುತ್ತೇನೆ" ಎಂದು ಸಚಿನ್ ಪೈಲೆಟ್ ಸ್ಪಷ್ಟಪಡಿಸಿದರು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications