ಬಿಎಸ್ ಪಿ ನಾಯಕರಿಗೆ ಶೂ ಹಾರ ಹಾಕಿ, ಕತ್ತೆ ಮೇಲೆ ಮೆರವಣಿಗೆ
ಜೈಪುರ್ (ರಾಜಸ್ಥಾನ), ಅಕ್ಟೋಬರ್ 22: ಟಿಕೆಟ್ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಮಂಗಳವಾರ ಪಕ್ಷದ ಕಚೇರಿ ಹೊರಗೆ ಪಕ್ಷದ ಕಾರ್ಯಕರ್ತರು ಬಿಎಸ್ ಪಿ ನಾಯಕರಿಗೆ ಶೂ ಹಾರ ಹಾಕಿ, ಮುಖಕ್ಕೆ ಮಸಿ ಬಳಿದು, ಕತ್ತೆ ಮೇಲೆ ಮೆರವಣಿಗೆ ಮಾಡಿದ್ದಾರೆ. ಬಿಎಸ್ ಪಿ ರಾಷ್ಟ್ರೀಯ ಸಮನ್ವಯಕಾರ ರಾಮ್ ಜೀ ಗೌತಮ್, ರಾಜಸ್ಥಾನದ ಮಾಜಿ ಉಸ್ತುವಾರಿ ಸೀತಾರಾಮ್ ಗೆ ಶೂ ಹಾರ ಹಾಕಲಾಗಿದೆ.
ಜೈಪುರ್ ನ ಬನಿಪಾರ್ಕ್ ನಲ್ಲಿ ಇರುವ ಕಚೇರಿಯ ಹೊರಭಾಗದಲ್ಲಿ ರಾಮ್ ಜೀ ಗೌತಮ್ ಅವರನ್ನು ಕತ್ತೆ ಮೇಲೆ ಕೂರಿಸಿ, ಮೆರವಣಿಗೆ ಮಾಡಲಾಗಿದೆ.
"ನಮ್ಮ ಕಾರ್ಯಕರ್ತರು ನಾಯಕರ ವಿರುದ್ಧ ಬೇಸರಗೊಂಡಿದ್ದಾರೆ. ಕಾರ್ಯಕರ್ತರು ಐದು ವರ್ಷದಿಂದ ತಳ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಈಗ ಪಕ್ಷಕ್ಕೆ ಬಂದವರಿಗೆ ಟಿಕೆಟ್ ನೀಡಲಾಗುತ್ತಿದೆ. ಹಣಕ್ಕಾಗಿಯೇ ಬಿಜೆಪಿ, ಕಾಂಗ್ರೆಸ್ ನಿಂದ ಅವರು ಬಂದಿದ್ದಾರೆ. ಬಿಎಸ್ ಪಿ ಕಾರ್ಯಕರ್ತರು, ನಾಯಕರನ್ನು ನಿರ್ಲಕ್ಷಿಸಿ, ಶೋಷಿಸಲಾಗುತ್ತಿದೆ" ಎಂದು ಪಕ್ಷದ ಕಾರ್ಯಕರ್ತರು ಆರೋಪಿಸಿದ್ದಾರೆ.

ನಾವು ಮೂರು ಪ್ರತಿಭಟನೆ ನಡೆಸಿದೆವು. ಆದರೆ ಅದನ್ನು ನಮ್ಮ ನಾಯಕಿ ಮಾಯಾವತಿಗೆ ತಿಳಿಸಲಿಲ್ಲ. ಆದ್ದರಿಂದ ಈ ಹೆಜ್ಜೆ ಇಡಬೇಕಾಯಿತು ಎಂದು ತಿಳಿಸಲಾಗಿದೆ.
#WATCH Rajasthan: BSP workers blackened faces of party's national coordinator Ramji Gautam&former BSP state incharge Sitaram¶ded them on donkeys,in Jaipur today.The workers also garlanded them with shoes&alleged that these leaders were indulging in anti-party activities pic.twitter.com/Vjvn1kur2w
— ANI (@ANI) October 22, 2019
ಇದು ನಾಚಿಕೆಗೇಡಿನ ಕೆಲಸ ಎಂದಿರುವ ಮಾಯಾವತಿ, ಇದಕ್ಕೆ ಕಾಂಗ್ರೆಸ್ ಅನ್ನು ನಿಂದಿಸಿದ್ದಾರೆ. ಹಿಂದಿಯಲ್ಲಿ ಟ್ವೀಟ್ ಮಾಡಿರುವ ಮಾಯಾವತಿ, ಕಾಂಗ್ರೆಸ್ ಕುದುರೆ ವ್ಯಾಪಾರದಲ್ಲಿ ತೊಡಗಿಕೊಂಡಿದೆ. ಇದೀಗ ರಾಜ್ಯದಲ್ಲಿ ಬಿಎಸ್ ಪಿ ನಾಯಕರ ವಿರುದ್ಧ ದಾಳಿಗೆ ಇಳಿದಿದೆ ಎಂದು ಆರೋಪಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications