ಸಚಿನ್ ಪೈಲಟ್ ವಜಾಗೊಂಡ ಬೆನ್ನಲ್ಲೇ ಬಂಡಾಯ ಶಾಸಕರ ಬಹಿರಂಗ ಸವಾಲು
ಜೈಪುರ, ಜುಲೈ 14: ಉಪಮುಖ್ಯಮಂತ್ರಿ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಸಚಿನ್ ಪೈಲಟ್ ಅವರನ್ನು ವಜಾಗೊಳಿಸಿದ ನಂತರ, ರಾಜಸ್ಥಾನದ ರಾಜಕೀಯ ಇನ್ನೊಂದು ಮಗ್ಗುಲಿಗೆ ಉರುಳಿದೆ.
Recommended Video
ಎರಡು ಸಿಎಲ್ಪಿ ಸಭೆಯಲ್ಲೂ ಸಚಿನ್ ಮತ್ತು ಅವರ ಬೆಂಬಲಿಗರು ಗೈರಾದ ನಂತರ, ಈಗ, ಬಂಡಾಯ ಎದ್ದಿರುವ ಶಾಸಕರಿಗೂ ಶಿಸ್ತುಕ್ರಮ ಜರಗಿಸುವ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ಈ ನಡುವೆ ತಮಗೆ ಬಹುಮತ ಇದೆ ಎಂದು ಹೇಳುವ ಸಿಎಂ ಅಶೋಕ್ ಗೆಹ್ಲೋಟ್, ಸದನದಲ್ಲಿ ಅದನ್ನು ಸಾಬೀತು ಪಡಿಸಲಿ ಎಂದು ಸಚಿನ್ ಪೈಲಟ್ ಬೆಂಬಲಿಗರು ಸವಾಲು ಹಾಕಿದ್ದಾರೆ.

ಪಕ್ಷೇತರರು ಮತ್ತು ಇತರರ ಬೆಂಬಲಿಗರೊಂದಿಗೆ ಸರಕಾರ ರಚಿಸಿರುವ ಅಶೋಕ್ ಗೆಹ್ಲೋಟ್ ಅವರಿಗೆ ಬಹುಮತ ಸಾಬೀತು ಪಡಿಸಲು ಸಾಧ್ಯವಿಲ್ಲ ಎಂದು ಬಂಡಾಯ ಶಾಸಕರು ಅಭಿಪ್ರಾಯ ಪಟ್ಟಿದ್ದಾರೆ.
"ತನಗೆ 109 ಶಾಸಕರ ಬೆಂಬಲವಿದೆ ಎಂದು ಗೆಹ್ಲೋಟ್ ಹೇಳುತ್ತಾರೆ. ಹಾಗಿದ್ದರೆ ಅದನ್ನು ಸಾಬೀತು ಪಡಿಸಲಿ. ಆಗ ನಿಜಾಂಶ ತಿಳಿಯುತ್ತದೆ, ಯಾರ ಜೊತೆಗೆ ಎಷ್ಟು ಶಾಸಕರಿದ್ದಾರೆ"ಎಂದು ಸಚಿನ್ ಪೈಲಟ್ ಪರ ಶಾಸಕ ರಮೇಶ್ ಮೀನಾ ಸವಾಲು ಹಾಕಿದ್ದಾರೆ.
"ಪೂರ್ವ ರಾಜಸ್ಥಾನದ ಕೆಲವು ಸಮುದಾಯಗಳನ್ನು ನಿರಂತರವಾಗಿ ಕಡೆಗಣಿಸಲಾಗುತ್ತಿದೆ. ಐದು ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುವವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಲೇ ಇಲ್ಲ. ತಾಳ್ಮೆಗೂ ಒಂದು ಮಿತಿಯಿದೆ"ಎಂದು ಮೀನಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications