Get Updates
Get notified of breaking news, exclusive insights, and must-see stories!

ಜೈಪುರ ಸಾಹಿತ್ಯ ಉತ್ಸವ: ಶಶಿ ತರೂರ್ ಕೃತಿ ಕುರಿತು ಚರ್ಚೆ

ಜೈಪುರ, ಫೆಬ್ರವರಿ 26: ಜಗತ್ತಿನ ಅತ್ಯಂತ ಶ್ರೇಷ್ಠ ಸಾಹಿತ್ಯ ಉತ್ಸವಗಳಲ್ಲಿ ಒಂದೆನಿಸಿರುವ ಜೈಪುರ ಸಾಹಿತ್ಯ ಉತ್ಸವದ ಶುಕ್ರವಾರದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಪುಸ್ತಕದ ಕುರಿತು ಸಂವಾದ ನಡೆಯಿತು.

ಹಾರ್ವರ್ಡ್ ವಿಶ್ವವಿದ್ಯಾಲಯದ ಪ್ರೊಫೆಸರ್ ಮಿಖಾಯಲ್ ಸ್ಯಾಂಡೆಲ್ ಅವರು 'ದಿ ಟಿರನಿ ಆಫ್ ಮೆರಿಟ್: ವಾಟ್ಸ್ ಬಿಕಂ ಆಫ್ ದಿ ಕಾಮನ್ ಗುಡ್?' ಕೃತಿಯ ಬಗ್ಗೆ ತರೂರ್ ಅವರೊಂದಿಗೆ ಸಂವಾದ ನಡೆಸಿದರು. ಜಯಶಾಲಿಗಳು ಮತ್ತು ಸೋತವರ ನಡುವೆ ತೀವ್ರವಾದ ವಿಭಜನೆಯನ್ನು ಪ್ರತಿಫಲಿಸು ರಾಜಕೀಯ ಕಾಲಮಾನದ ಧ್ರುವೀಕರಣದ ಬಗ್ಗೆ ತರೂರ್ ಪುಸ್ತಕ ವಿವರಣೆ ನೀಡಿದೆ.

ಮಿಖಾಯಲ್ ಸ್ಯಾಂಡೆಲ್ ಅವರನ್ನು ಶ್ಲಾಘಿಸಿದ ತರೂರ್, ಅವರ ಕೆಲಸಗಳನ್ನು ಬಹಳ ಸಮಯದಿಂದ ತಾವು ಗಮನಿಸುತ್ತಿರುವುದಾಗಿ ತಿಳಿಸಿದರು.

Jaipur Literature Fastival: Michael Sandel Conversation With Congress MP Shashi Tharoor

'ಅರ್ಹತೆ' ವಿಷಯದ ಕುರಿತು ಸ್ಯಾಂಡೆಲ್ ಅವರು ಇಡೀ ಚರ್ಚೆಗೆ ಹೊಸ ಆಯಾಮ ನೀಡಿದರು. ಯೋಗ್ಯತಾಶಾಹಿ ನೀತಿಯು ಅಸಮಾನತೆಯ ಸಮಾಜಕ್ಕೆ ಅನ್ವಯವಾಗುತ್ತದೆ ಎಂಬ ಕಾರಣಕ್ಕೆ ಮಾತ್ರವಲ್ಲದೆ, ತನ್ನ ಪರಿಕಲ್ಪನೆಯೊಳಗೇ ಹರಿದಾಡುತ್ತದೆ ಎಂಬ ಕಾರಣಕ್ಕೆ ಸಮಸ್ಯಾತ್ಮಕವಾಗಿದೆ. ಜನರು ಯೋಗ್ಯತಾಶಾಹಿ ಸಮಾಜದ ಬಗ್ಗೆ ದೂರಿದಾಗ, ಆ ದೂರು ಸಾಮಾನ್ಯವಾಗಿ ಆದರ್ಶದ ಬಗ್ಗೆ ಇರುವುದಿಲ್ಲ. ಬದಲಾಗಿ ಅದರ ಮಟ್ಟಕ್ಕೆ ತಲುಪಲು ವಿಫಲವಾಗುವುದರ ಬಗ್ಗೆ ಇರುತ್ತದೆ ಎಂದು ವ್ಯಾಖ್ಯಾನಿಸಿದರು.

ಇತ್ತೀಚಿನ ದಶಕಗಳಲ್ಲಿ ಮಾರುಕಟ್ಟೆ ಚಾಲಿತ ಜಾಗತೀಕರಣ, ಜಯಶಾಲಿಗಳು ಮತ್ತು ಸೋತವರ ವಿಭಜನೆ ತೀವ್ರಗೊಳ್ಳುತ್ತಿದೆ. ನಮ್ಮ ರಾಜಕಾರಣಕ್ಕೆ ವಿಷವುಣಿಸುವುದು ನಮ್ಮನ್ನು ದೂರ ಮಾಡುತ್ತಿದೆ. ಹೆಚ್ಚುತ್ತಿರುವ ಅಸಮಾನತೆಯಿಂದ ನಮ್ಮ ನಿಲುವುಗಳಲ್ಲಿ ಬದಲಾವಣೆಗಳಾಗಿವೆ. ಮೇಲ್ಮಟ್ಟದಲ್ಲಿ ಇಳಿದವರು ತಮ್ಮದೇ ಪರಿಶ್ರಮದಿಂದ ತಮಗೆ ಯಶಸ್ಸು ಸಿಕ್ಕಿದೆ ಎಂದು ಭಾವಿಸುತ್ತಿದ್ದಾರೆ ಎಂದು ಸ್ಯಾಂಡೆಲ್ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+