ಜೈಪುರ ಸಾಹಿತ್ಯ ಉತ್ಸವ: ಶಶಿ ತರೂರ್ ಕೃತಿ ಕುರಿತು ಚರ್ಚೆ
ಜೈಪುರ, ಫೆಬ್ರವರಿ 26: ಜಗತ್ತಿನ ಅತ್ಯಂತ ಶ್ರೇಷ್ಠ ಸಾಹಿತ್ಯ ಉತ್ಸವಗಳಲ್ಲಿ ಒಂದೆನಿಸಿರುವ ಜೈಪುರ ಸಾಹಿತ್ಯ ಉತ್ಸವದ ಶುಕ್ರವಾರದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಪುಸ್ತಕದ ಕುರಿತು ಸಂವಾದ ನಡೆಯಿತು.
ಹಾರ್ವರ್ಡ್ ವಿಶ್ವವಿದ್ಯಾಲಯದ ಪ್ರೊಫೆಸರ್ ಮಿಖಾಯಲ್ ಸ್ಯಾಂಡೆಲ್ ಅವರು 'ದಿ ಟಿರನಿ ಆಫ್ ಮೆರಿಟ್: ವಾಟ್ಸ್ ಬಿಕಂ ಆಫ್ ದಿ ಕಾಮನ್ ಗುಡ್?' ಕೃತಿಯ ಬಗ್ಗೆ ತರೂರ್ ಅವರೊಂದಿಗೆ ಸಂವಾದ ನಡೆಸಿದರು. ಜಯಶಾಲಿಗಳು ಮತ್ತು ಸೋತವರ ನಡುವೆ ತೀವ್ರವಾದ ವಿಭಜನೆಯನ್ನು ಪ್ರತಿಫಲಿಸು ರಾಜಕೀಯ ಕಾಲಮಾನದ ಧ್ರುವೀಕರಣದ ಬಗ್ಗೆ ತರೂರ್ ಪುಸ್ತಕ ವಿವರಣೆ ನೀಡಿದೆ.
ಮಿಖಾಯಲ್ ಸ್ಯಾಂಡೆಲ್ ಅವರನ್ನು ಶ್ಲಾಘಿಸಿದ ತರೂರ್, ಅವರ ಕೆಲಸಗಳನ್ನು ಬಹಳ ಸಮಯದಿಂದ ತಾವು ಗಮನಿಸುತ್ತಿರುವುದಾಗಿ ತಿಳಿಸಿದರು.

'ಅರ್ಹತೆ' ವಿಷಯದ ಕುರಿತು ಸ್ಯಾಂಡೆಲ್ ಅವರು ಇಡೀ ಚರ್ಚೆಗೆ ಹೊಸ ಆಯಾಮ ನೀಡಿದರು. ಯೋಗ್ಯತಾಶಾಹಿ ನೀತಿಯು ಅಸಮಾನತೆಯ ಸಮಾಜಕ್ಕೆ ಅನ್ವಯವಾಗುತ್ತದೆ ಎಂಬ ಕಾರಣಕ್ಕೆ ಮಾತ್ರವಲ್ಲದೆ, ತನ್ನ ಪರಿಕಲ್ಪನೆಯೊಳಗೇ ಹರಿದಾಡುತ್ತದೆ ಎಂಬ ಕಾರಣಕ್ಕೆ ಸಮಸ್ಯಾತ್ಮಕವಾಗಿದೆ. ಜನರು ಯೋಗ್ಯತಾಶಾಹಿ ಸಮಾಜದ ಬಗ್ಗೆ ದೂರಿದಾಗ, ಆ ದೂರು ಸಾಮಾನ್ಯವಾಗಿ ಆದರ್ಶದ ಬಗ್ಗೆ ಇರುವುದಿಲ್ಲ. ಬದಲಾಗಿ ಅದರ ಮಟ್ಟಕ್ಕೆ ತಲುಪಲು ವಿಫಲವಾಗುವುದರ ಬಗ್ಗೆ ಇರುತ್ತದೆ ಎಂದು ವ್ಯಾಖ್ಯಾನಿಸಿದರು.
ಇತ್ತೀಚಿನ ದಶಕಗಳಲ್ಲಿ ಮಾರುಕಟ್ಟೆ ಚಾಲಿತ ಜಾಗತೀಕರಣ, ಜಯಶಾಲಿಗಳು ಮತ್ತು ಸೋತವರ ವಿಭಜನೆ ತೀವ್ರಗೊಳ್ಳುತ್ತಿದೆ. ನಮ್ಮ ರಾಜಕಾರಣಕ್ಕೆ ವಿಷವುಣಿಸುವುದು ನಮ್ಮನ್ನು ದೂರ ಮಾಡುತ್ತಿದೆ. ಹೆಚ್ಚುತ್ತಿರುವ ಅಸಮಾನತೆಯಿಂದ ನಮ್ಮ ನಿಲುವುಗಳಲ್ಲಿ ಬದಲಾವಣೆಗಳಾಗಿವೆ. ಮೇಲ್ಮಟ್ಟದಲ್ಲಿ ಇಳಿದವರು ತಮ್ಮದೇ ಪರಿಶ್ರಮದಿಂದ ತಮಗೆ ಯಶಸ್ಸು ಸಿಕ್ಕಿದೆ ಎಂದು ಭಾವಿಸುತ್ತಿದ್ದಾರೆ ಎಂದು ಸ್ಯಾಂಡೆಲ್ ಹೇಳಿದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications