ರಾಜಸ್ಥಾನ: ಸೋನಿಯಾ, ಎಂಎಂ ಸಿಂಗ್ ಜತೆಗೆ ಮಾನ್ವೇಂದ್ರ ಸ್ಟಾರ್ ಪ್ರಚಾರಕ
Recommended Video

ಜೈಪುರ, ನವೆಂಬರ್ 20: ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷವು ಬಿರುಸಿನ ಪ್ರಚಾರಕ್ಕೆ ಎಲ್ಲಾ ರೀತಿಯಿಂದಲೂ ಸಜ್ಜಾಗುತ್ತಿದೆ. ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಪ್ರಕಟಿಸಿದ್ದು, ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಲ್ಲದೆ, ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಮಾನ್ವೇಂದ್ರ ಸಿಂಗ್ ಅವರ ಹೆಸರು ಸೇರಿಸಲಾಗಿದೆ.
ರಾಜಸ್ಥಾನದ ಅಸೆಂಬ್ಲಿ ಯುದ್ಧ ಗೆಲ್ಲಲು ನಾಲ್ಕು ಮಂದಿ ಸ್ಟಾರ್ ಪ್ರಚಾರಕರನ್ನು ಹೆಸರಿಸಲಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಹೆಚ್ಚು ಪ್ರಚಾರ ಸಭೆ, ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸ್ಟಾರ್ ಪ್ರಚಾರಕರು: ನಟ, ಲೋಕಸಭಾ ಸದಸ್ಯ ರಾಜ್ ಬಬ್ಬರ್, ಪಂಜಾಬ್ ಸಚಿವ, ಮಾಜಿ ಕ್ರಿಕೆಟರ್ ನವಜ್ಯೋತ್ ಸಿಂಗ್ ಸಿಧು ಹೆಸರು ನಿರೀಕ್ಷಿತವಾಗಿದೆ. ಆದರೆ, ಜಸ್ವಂತ್ ಸಿಂಗ್ ಅವರ ಪುತ್ರ ಮಾನ್ವೇಂದ್ರ ಅವರನ್ನು ಸ್ಟಾರ್ ಪ್ರಚಾರಕರನ್ನಾಗಿ ಹೆಸರಿಸಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.
ಮುಖ್ಯಮಂತ್ರಿ ವಸುಂಧರಾ ರಾಜೇ ವಿರುದ್ಧ ಝಲ್ನಪಟನ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾನ್ವೇಂದ್ರ ಕಣಕ್ಕಿಳಿಯುತ್ತಿದ್ದಾರೆ. ಮಿಕ್ಕಂತೆ, ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯ ಪಕ್ಷಾಧ್ಯಕ್ಷ ಸಚಿನ್ ಪೈಲಟ್, ಮಾಜಿ ಕೇಂದ್ರ ಸಚಿವ ಸಿಪಿ ಜೋಶಿ, ಮಾಜಿ ರಾಜ್ಯಾಧ್ಯಕ್ಷ ನಾರಾಯಣ್ ಸಿಂಗ್ ಹಾಗೂ ಡಾ. ಚಂದ್ರಭಾನ್, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ರಘು ಶರ್ಮ, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ರೆಹನಾ ರಿಯಾಜ್, ಮಾಜಿ ಸಚಿವ ಭಾನ್ವರ್ ಲಾಲ್ ಹೆಸರು ಇದೆ.
ಇದಲ್ಲದೆ, ರಾಜಸ್ಥಾನದಲ್ಲಿ ಪಕ್ಷದ ಉಸ್ತುವಾರಿ ಅವಿನಾಶ್ ಪಾಂಡೆ, ವಿಪಕ್ಷ ನಾಯಕ ರಾಮೇಶ್ವರ್ ದುಡಿ, ಲೋಕಸಭೆಯ ಮಾಜಿ ಸ್ಪೀಕರ್ ಮೀರಾಕುಮಾರ್, ಪಕ್ಷದ ಖಜಾಂಚಿ ಅಹ್ಮದ್ ಪಟೇಲ್, ಪಂಜಾಬ್ ಮುಖ್ಯಮಂತ್ರಿ ಕ್ಯಾ. ಅಮರೀಂದರ್ ಸಿಂಗ್, ಉತ್ತರಪ್ರದೇಶದ ಹಿರಿಯ ನಾಯಕರಾದ ಪ್ರಮೋದ್ ತಿವಾರಿ ಇವರೆಲ್ಲರ ಜತೆಗೆ ಗುಜರಾತಿನ ವಿವಾದಿತ ಶಾಸಕ ಅಲ್ಪೇಶ್ ಠಾಕೂರ್ ಕೂಡಾ ಪ್ರಚಾರದಲ್ಲಿ ತೊಡಗಲಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications