ರಾಜಸ್ತಾನದಲ್ಲಿ ಮಿಗ್- 27 ಯುದ್ಧ ವಿಮಾನ ಪತನ
ಜೋಧ್ ಪುರ್ (ರಾಜಸ್ತಾನ್), ಮಾರ್ಚ್ 31: ಭಾರತೀಯ ವಾಯು ಸೇನೆಗೆ ಸೇರಿದ ಮಿಗ್- 27 ಯುದ್ಧ ವಿಮಾನವು ದಕ್ಷಿಣ ರಾಜಸ್ತಾನದ ಸಿರೋಹಿ ಬಳಿ ಭಾನುವಾರ ಬೆಳಗ್ಗೆ ಪತನವಾಗಿದೆ. ಮಿಗ್ 27 ಯುಪಿಜಿ ವಿಮಾನವು ತನ್ನ ಮಾಮೂಲಿ ಕಾರ್ಯ ನಿರ್ವಹಣೆಯಲ್ಲಿ ತೊಡಗಿದ್ದಾಗ ಸಿರೋಹಿಯ ಶಿಯೋಗಂಜ್ ನ ಗೋದನದಲ್ಲಿ ಈ ಘಟನೆ ಸಂಭವಿಸಿದೆ.
ಈ ಸ್ಥಳವು ಜೋಧ್ ಪುರ್ ನಿಂದ 180 ಕಿಲೋಮೀಟರ್ ದೂರದಲ್ಲಿದೆ. ಮಿಗ್ 27 ಯುದ್ಧ ವಿಮಾನವು ಸೋವಿಯತ್ ರಷ್ಯಾ ಕಾಲಕ್ಕೆ ಸೇರಿದ್ದಾಗಿದ್ದು, 1980ರ ದಶಕದಲ್ಲಿ ಇದನ್ನು ಖರೀದಿಸಲಾಗಿತ್ತು. 1999ರಲ್ಲಿ ಪಾಕಿಸ್ತಾನದ ಜತೆಗೆ ನಡೆದ ಕಾರ್ಗಿಲ್ ಯುದ್ಧದಲ್ಲಿ ಇವುಗಳನ್ನು ವ್ಯಾಪಕವಾಗಿ ಬಳಸಲಾಗಿತ್ತು. ಬೆಟ್ಟ ಪ್ರದೇಶದಲ್ಲಿ ಅಡಗಿ ಕೂತಿದ್ದ ಶತ್ರುಗಳ ಮೇಲೆ ದಾಳಿ ನಡೆಸಲು ಇವುಗಳಿಂದ ಸಹಾಯ ಆಗಿತ್ತು.

ಈಗ ನಡೆದಿರುವ ಘಟನೆಯಲ್ಲಿ ಪೈಲಟ್ ಮಿಗ್ 27 ಯುದ್ಧ ವಿಮಾನದಿಂದ ಹೊರಗೆ ಬರಲು ಯಶಸ್ವಿಯಾಗಿ, ಅಪಾಯದಿಂದ ಪಾರಾಗಿದ್ದಾರೆ. ಆದರೆ ಇತ್ತೀಚೆಗೆ ಮಿಗ್ ವಿಮಾನ ದುರಂತ ಪ್ರಕರಣಗಳು ಹೆಚ್ಚಾಗಿವೆ. ಈ ವಿಮಾನವನ್ನು 'ಹಾರಾಡುವ ಶವಪೆಟ್ಟಿಗೆ' ಅಂತಲೇ ಕರೆಯಲಾಗುತ್ತದೆ. ಇವು ಎಷ್ಟು ಅಪಾಯಕಾರಿ ಎಂದು ಬಿಂಬಿಸಲು ಹೀಗೆ ಕರೆಯಲಾಗುತ್ತದೆ.
Visuals from Rajasthan's Jodhpur where a MiG 27 UPG aircraft on a routine mission from Jodhpur, crashed this morning. pic.twitter.com/dGPL9yYk7P
— ANI (@ANI) 31 March 2019
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications