ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆಗೆ ಹೆಗಲು ಕೊಟ್ಟ ಮುಸ್ಲಿಂ ಬಾಂಧವರು
ಜೈಪುರ, ಏಪ್ರಿಲ್.14: ವಿಶ್ವದ ಉದ್ದಗಲಕ್ಕೂ ವ್ಯಾಪಿಸಿದ ಕೊರೊನಾ ವೈರಸ್ ಮಹಾಮಾರಿ ಭಾರತದ ಪಾಲಿಗೂ ದೊಡ್ಡ ಸವಾಲಾಗಿ ಪರಿಣಮಿಸಿದೆ. ಮಾರಕ ಸೋಂಕು ಜನರಲ್ಲಿ ಮಾನವೀಯತೆ ಮತ್ತು ಸಹಾಯ, ಸಹಕಾರ ಮನೋಭಾವವನ್ನು ಹೆಚ್ಚಿಸುತ್ತದೆ. ಈ ಮಾತಿಗೆ ಸಾಕ್ಷಿ ಎನ್ನುವಂತಾ ಘಟನೆಯೊಂದು ರಾಜಸ್ಥಾನದಲ್ಲಿ ನಡೆದಿದೆ.
Recommended Video
ರಾಜಸ್ಥಾನದ ಜೈಪುರ್ ನಲ್ಲಿ ಕ್ಯಾನ್ಸರ್ ನಿಂದ ಪ್ರಾಣ ಬಿಟ್ಟ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆಯನ್ನು ಮನೆಯ ಸುತ್ತಮುತ್ತಲಿದ್ದ ಮುಸ್ಲಿಂ ಬಾಂಧವರು ಮುಂದೆ ನಿಂತು ನೆರವೇರಿಸುವ ಮೂಲಕ ಮಾನವೀಯತೆ ಮರೆದಿದ್ದಾರೆ.
ಜೈಪುರ್ ನ ಭಜರಂಗ್ ನಗರ್ ಭಟ್ಟಾ ಬಸ್ತಿ ಪ್ರದೇಶದಲ್ಲಿ ವಾಸವಾಗಿದ್ದ ರಾಜೇಂದ್ರ ಎಂಬುವವರು ಮಾರಕ ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದರು. ಸೋಮವಾರ ಈ ವ್ಯಕ್ತಿ ಮೃತಪಟ್ಟಿದ್ದು ನೆರೆಹೊರೆಯಲ್ಲಿದ್ದ ಮುಸ್ಲಿಂ ಬಾಂಧವರೇ ಮುಂದೆ ನಿಂತು ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಗಂಡು ದಿಕ್ಕಿಲ್ಲದ ಮನೆಗೆ ನೆರೆಹೊರೆಯವರ ಹೆಗಲು:
ಗಂಡು ಮಕ್ಕಳು ಇಲ್ಲದ ಮೃತ ರಾಜೇಂದ್ರ ನಿವಾಸದ ಸುತ್ತಮುತ್ತಲಿನಲ್ಲೂ ಯಾರೊಬ್ಬ ಹಿಂದೂಗಳೂ ಇರಲಿಲ್ಲ. ಭಾರತ ಲಾಕ್ ಡೌನ್ ನಿಂದ ಸಂಬಂಧಿಕರು ಕೂಡಾ ಜೈಪುರ್ ಗೆ ತೆರಳಲು ಆಗುತ್ತಿರಲಿಲ್ಲ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ನೆರೆಹೊರೆಯಲ್ಲಿದ್ದ ಮುಸ್ಲಿಂ ಬಾಂಧವರೇ ಸೇರಿಕೊಂಡು ಹಿಂದೂ ಧರ್ಮದ ಪ್ರಕಾರ ರಾಜೇಂದ್ರ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸುವ ಮೂಲಕ ಬಡ ಕುಟುಂಬಕ್ಕೆ ಹೆಗಲು ಕೊಟ್ಟು ನಿಂತಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications