ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಸ್ಥಾನ : ಜನರ ಗುಂಪಿನಿಂದ ಹಲ್ಲೆ, ಹೆಡ್ ಕಾನ್‌ಸ್ಟೇಬಲ್‌ ಸಾವು

|
Google Oneindia Kannada News

ಜೈಪುರ, ಜುಲೈ 14 : ಪೊಲೀಸ್ ಹೆಡ್ ಕಾನ್‌ಸ್ಟೇಬಲ್‌ ಮೇಲೆ ಜನರ ಗುಂಪು ಹಲ್ಲೆ ನಡೆಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ.

ಅಬ್ದುಲ್ ಗನಿ (48) ಮೃತಪಟ್ಟ ಪೊಲೀಸ್ ಹೆಡ್ ಕಾನ್‌ಸ್ಟೇಬಲ್‌. ಜಮೀನು ವಿವಾದವನ್ನು ಬಗೆಹರಿಸಲು ಅಬ್ದುಲ್ ತೆರಳಿದ್ದರು. ಒತ್ತುವರಿ ಸಂಬಂಧ ಜನರ ಜೊತೆ ಮಾತಿನ ಚಕಮಕಿ ನಡೆದಿತ್ತು.

ಗಾಂಜಾ, ದನ ಕಳವು ಪ್ರಕರಣ ತಡೆಗೆ ನಿರ್ಲಕ್ಷ್ಯ; ಇನ್‌ಸ್ಪೆಕ್ಟರ್ ಅಮಾನತುಗಾಂಜಾ, ದನ ಕಳವು ಪ್ರಕರಣ ತಡೆಗೆ ನಿರ್ಲಕ್ಷ್ಯ; ಇನ್‌ಸ್ಪೆಕ್ಟರ್ ಅಮಾನತು

ಆಕ್ರೋಶಗೊಂಡ ಜನರು ಅಬ್ದುಲ್ ಗನಿ ಅವರ ಮೇಲೆ ಹಲ್ಲೆ ಮಾಡಿದ್ದರು. ಜನರ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕಾರಣವೇ ಇಲ್ಲದೆ ಕೊಲೆ ಮಾಡಿದ್ದವನ ಕಾಲಿಗೆ ಬಿತ್ತು ಪೊಲೀಸರ ಗುಂಡೇಟುಕಾರಣವೇ ಇಲ್ಲದೆ ಕೊಲೆ ಮಾಡಿದ್ದವನ ಕಾಲಿಗೆ ಬಿತ್ತು ಪೊಲೀಸರ ಗುಂಡೇಟು

Police head constable

ಪೊಲೀಸ್ ಹೆಡ್ ಕಾನ್‌ಸ್ಟೇಬಲ್‌ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನ ಪೊಲೀಸ್ ಇಲಾಖೆಯಲ್ಲಿ ಆತಂಕ ಮೂಡಿಸಿದೆ. ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಅತ್ಯಾಚಾರ ದೂರು: ತನಿಖೆಗೆ ಹೋದ ಪೊಲೀಸರಿಗೆ ಕಾದಿತ್ತು ಅಚ್ಚರಿಅತ್ಯಾಚಾರ ದೂರು: ತನಿಖೆಗೆ ಹೋದ ಪೊಲೀಸರಿಗೆ ಕಾದಿತ್ತು ಅಚ್ಚರಿ

ಕೆಲವು ವರ್ಷಗಳಿಂದ ರಾಜಸ್ಥಾನ ಜನರಿಂದ ಹಲ್ಲೆ ನಡೆಸಿ ಹತ್ಯೆ ಮಾಡುವ ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಅಕ್ರಮವಾಗಿ ಗೋವು ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ 28 ವರ್ಷದ ಯುವಕನನ್ನು ಕಳೆದ ವರ್ಷ ಜನರು ಗುಂಪು ಹಲ್ಲೆ ಮಾಡಿ ಹತ್ಯೆ ಮಾಡಿತ್ತು.

2017ರ ಏಪ್ರಿಲ್‌ 23ರಂದು ಪೆಹ್ಲು ಖಾನ್ ತನ್ನ ಇಬ್ಬರು ಮಕ್ಕಳ ಜೊತೆ ಜೈಪುರದಲ್ಲಿ ನಡೆಯುವ ಜಾತ್ರೆಯಲ್ಲಿ ದನಗಳನ್ನು ಮನೆಗಾಗಿ ಖರೀದಿ ಮಾಡಿದ್ದ. ಅದನ್ನು ಹರ್ಯಾಣಕ್ಕೆ ಸಾಗಣೆ ಮಾಡುವಾಗ ಗೋ ರಕ್ಷಕರು ಅವರ ಮೇಲೆ ದಾಳಿ ಮಾಡಿದ್ದರು. ಪೆಹ್ಲು ಖಾನ್ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು.

English summary
Police head constable Abdul Gani (48) was beaten to death in Rajasthan. He was probing a land dispute and had gone to the site. Mob attacked him after an argument over encroachment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X