ಗೋಸಾಗಣೆ ಮಾಡುತ್ತಿದ್ದವನ ಗುಂಪು ಹತ್ಯೆ: 6 ಆರೋಪಿಗಳು ಖುಲಾಸೆ
ಅಲ್ವಾರ್, ಆಗಸ್ಟ್ 14: ಗೋವನ್ನು ಕದ್ದು ಕಸಾಯಿ ಖಾನೆಗೆ ಸಾಗಿಸುತ್ತಿದ್ದಾನೆ ಎಂಬ ಆರೋಪದಲ್ಲಿ ರಾಜಸ್ಥಾನದ ಅಲ್ವಾರ್ನಲ್ಲಿ ಪೆಹ್ಲು ಖಾನ್ ಎಂಬುವವರನ್ನು ಜನರ ಗುಂಪು ಹಲ್ಲೆ ನಡೆಸಿ ಕೊಂದು ಹಾಕಿದ ಘಟನೆಗೆ ಸಂಬಂಧಿಸಿದಂತೆ ಎಲ್ಲ ಆರು ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯವೊಂದು ಎರಡು ವರ್ಷಗಳ ಬಳಿಕ ಖುಲಾಸೆಗೊಳಿಸಿದೆ.
ಸಂಶಯದ ಲಾಭದ ಮೇರೆಗೆ ಈ ಎಲ್ಲ ಆರೋಪಿಗಳನ್ನು ಪ್ರಕರಣದಿಂದ ಖುಲಾಸೆ ಮಾಡುತ್ತಿರುವುದಾಗಿ ನ್ಯಾಯಾಲಯ ಹೇಳಿದೆ.
2017ರ ಏಪ್ರಿಲ್ 1ರಂದು ಹರಿಯಾಣದ ನುಹ್ ಗ್ರಾಮದ 55 ವರ್ಷದ ಪೆಹ್ಲು ಖಾನ್, ರಂಜಾನ್ ಮಾಸಕ್ಕಾಗಿ ಹಾಲು ಉತ್ಪಾದನೆಯನ್ನು ಹೆಚ್ಚಿಸುವ ಸಲುವಾಗಿ ಹಸುವೊಂದನ್ನು ಖರೀದಿಸಲು ತೆರಳಿದ್ದರು. ಅವರನ್ನು ದೆಹಲಿ-ಅಲ್ವಾರ್ ಹೆದ್ದಾರಿಯಲ್ಲಿ ಗೋರಕ್ಷಕರ ಗುಂಪು ಅಡ್ಡಗಟ್ಟಿತ್ತು. ಹಸು ಖರೀದಿ ಮಾಡಿದ ರಶೀದಿ ತೋರಿಸಿ ತಮ್ಮನ್ನು ಉಳಿಸಿಕೊಳ್ಳಲು ಅವರು ಪ್ರಯತ್ನಿಸಿದರೂ ಗುಂಪು ಅವರನ್ನು ರಾಡ್ ಮತ್ತು ಬಡಿಗೆಗಳಿಂದ ಥಳಿಸಿತ್ತು. ಪೆಹ್ಲು ಖಾನ್ ಅವರು ಎರಡು ದಿನಗಳ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಪೆಹ್ಲು ಖಾನ್ ಮೇಲೆ ಹಲ್ಲೆ ನಡೆಸುವ ವಿಡಿಯೋ ಎಲ್ಲೆಡೆ ಹರಿದಾಡಿತ್ತು. ಈ ವೈರಲ್ ವಿಡಿಯೋವನ್ನೇ ಮುಂದಿಟ್ಟುಕೊಂಡು ಗೋರಕ್ಷಕರ ವಿರುದ್ಧ ವಾದ ಮಂಡಿಸಲಾಗಿತ್ತು. ಆದರೆ, ಸಿಡಿಯಲ್ಲಿ ಇರುವ ವಿಡಿಯೋವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಅದು ನಕಲಿಯೇ ಅಥವಾ ಅಸಲಿಯೇ ಎಂಬುದನ್ನು ಖಚಿತಪಡಿಸಿಕೊಳ್ಳದ ಕಾರಣ ಅದನ್ನು ಒಪ್ಪುವಂತಹ ಪುರಾವೆಯೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ನ್ಯಾಯಾಲಯದ ತೀರ್ಪನ್ನು ಅಧ್ಯಯನ ಮಾಡಿದ ಬಳಿಕ ಮೇಲಿನ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವುದಾಗಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಯೋಗೇಂದ್ರ ಖಟಾನಾ ತಿಳಿಸಿದ್ದಾರೆ.
ಗುಂಪು ಹತ್ಯೆ ಪ್ರಕರಣದ ವಿಚಾರಣೆ ಆಗಸ್ಟ್ 7ರಂದು ಪೂರ್ಣಗೊಂಡಿತ್ತು. 40ಕ್ಕೂ ಹೆಚ್ಚು ಪ್ರತ್ಯಕ್ಷದರ್ಶಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಘಟನೆ ನಡೆದ ಸಂದರ್ಭದಲ್ಲಿ ಖಾನ್ ಅವರೊಂದಿಗಿದ್ದ ಅವರ ಇಬ್ಬರು ಮಕ್ಕಳನ್ನು ಸಹ ವಿಚಾರಣೆಗೆ ಒಳಪಡಿಸಲಾಗಿತ್ತು.
ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿ ಆರು ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಪೆಹ್ಲು ಖಾನ್ನ ಸಾವಿನ ಬಳಿಕ ಹತ್ಯೆ ಪ್ರಕರಣವನ್ನೂ ದಾಖಲು ಮಾಡಲಾಗಿತ್ತು. ಈ ಘಟನೆ ದೇಶದಾಂದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
ಪೆಹ್ಲು ಖಾನ್ ಹತ್ಯೆ ಪ್ರಕರಣದ ಏಳು ಆರೋಪಿಗಳ ಪೈಕಿ ಆರು ಮಂದಿಗೆ ರಾಜಸ್ಥಾನ ಪೊಲೀಸರು ಕ್ಲೀನ್ ಚಿಟ್ ನೀಡಿದ್ದರು. ಅಲ್ಲದೆ, ಕಳೆದ ಡಿಸೆಂಬರ್ನಲ್ಲಿ ಪೆಹ್ಲು ಖಾನ್ ಮತ್ತು ಆತ ಇಬ್ಬರು ಗಂಡುಮಕ್ಕಳ ವಿರುದ್ಧ ರಾಜ್ಯದ ಗೋಹತ್ಯೆಗೆ ಸಂಬಂಧಿಸಿದ ಕಾನೂನನ್ನು ಉಲ್ಲಂಘಿಸಿದ ಆರೋಪ ದಾಖಲಿಸಿದ್ದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications