ರಾಜಸ್ಥಾನದ 11 ಜಿಲ್ಲೆಗಳಲ್ಲಿ ಸಪ್ಟೆಂಬರ್.30ರವರೆಗೂ ನಿಷೇಧಾಜ್ಞೆ
ಜೈಪುರ್, ಸಪ್ಟೆಂಬರ್.20: ರಾಜಸ್ಥಾನದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಸರ್ಕಾರವು ಶಿಸ್ತುಕ್ರಮಗಳನ್ನು ತೆಗೆದುಕೊಂಡಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಕೊವಿಡ್-19 ನಿಯಂತ್ರಿಸುವ ಉದ್ದೇಶದಿಂದ ಸಿಆರ್ ಪಿಸಿ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಜೈಪುರ್, ಜೋಧಪುರ್, ಕೋಟಾ, ಅಜ್ಮಿರ್, ಅಲ್ವರ್, ಭಿಲ್ವಾರ, ಬಿಕನೇರ್, ಉದಯಪುರ್, ಸಿಕರ್, ಪಾಲಿ ಮತ್ತು ನಗೌರ್ ಜಿಲ್ಲೆಗಳಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರವು ಆದೇಶಿಸಿದೆ.
ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಕುರಿತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದಲ್ಲಿ ಚರ್ಚಿಸಲಾಯಿತು. ಆರೋಗ್ಯ ಸಚಿವ ರಘು ಶರ್ಮಾ, ಸರ್ಕಾರದ ಮುಖ್ಯಕಾರ್ಯದರ್ಶಿ ರಾಜೀವ್ ಸ್ವರೂಪ್, ಗೃಹ ಕಾರ್ಯದರ್ಶಿ ಅಭಯ್ ಕುಮಾರ್, ಆರೋಗ್ಯ ಮತ್ತು ವೈದ್ಯಕೀಯ ಇಲಾಖೆಯ ಪ್ರಿನ್ಸಿಪಲ್ ಸೆಕ್ರಟರಿ ಅಖಿಲ್ ಅಕೋರಾ ಸಭೆಯಲ್ಲಿ ಭಾಗಿಯಾಗಿದ್ದು, ಪರಿಸ್ಥಿತಿ ಕುರಿತು ಚರ್ಚೆ ನಡೆಸಿದರು.

ಮದುವೆ, ಅಂತ್ಯಸಂಸ್ಕಾರಕ್ಕೆ ಅನುಮತಿ:
ರಾಜಸ್ಥಾನದಲ್ಲಿ ಅಕ್ಟೋಬರ್.31ರವರೆಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಉದ್ದೇಶದಿಂದಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಅಂತ್ಯ ಸಂಸ್ಕಾರದಲ್ಲಿ 20 ಮತ್ತು ಮದುವೆಗಳಲ್ಲಿ 50 ಜನರು ಭಾಗಿಯಾಗುವುದಕ್ಕಷ್ಟೇ ರಾಜ್ಯ ಸರ್ಕಾರವು ಅನುಮತಿ ನೀಡಿದೆ. ರಾಜ್ಯದಲ್ಲಿ ಪ್ರತಿನಿತ್ಯ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡು ಬರುತ್ತಿದೆ. ಕಳೆದ 24 ಗಂಟೆಗಳಲ್ಲೇ 1834 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 113124ಕ್ಕೆ ಏರಿಕೆಯಾಗಿದೆ. ಈವರೆಗೂ 93805 ಸೋಂಕಿತರು ಗುಣಮುಖರಾಗಿದ್ದು, ರಾಜ್ಯದಲ್ಲಿ 17997 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications