ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್ ತವರಿನಲ್ಲಿ ಇಂದು ಬಿಜೆಪಿ ಸಭೆ, ಅಮಿತ್ ಶಾ ಭಾಗಿ
ಜೋಧ್ಪುರ, ಸೆಪ್ಟೆಂಬರ್ 10: ಬಿಜೆಪಿಯ ಒಬಿಸಿ ಮೋರ್ಚಾ ಅಥವಾ ಒಬಿಸಿ ವಿಭಾಗವು ತನ್ನ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ತವರು ಮತ್ತು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಕ್ಷೇತ್ರವಾದ ಜೋಧ್ಪುರದಲ್ಲಿ ನಡೆಸುತ್ತಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಪಕ್ಷದ ಒಬಿಸಿ ಮತಬ್ಯಾಂಕ್ ಬಲಪಡಿಸುವ ಉದ್ದೇಶದಿಂದ ಈ ಸಭೆ ನಡೆಸಲಾಗಿದೆ.
ಬಿಜೆಪಿ ಕೂಡ ರಾಜ್ಯದ ಪಶ್ಚಿಮ ಭಾಗದಲ್ಲಿ ತನ್ನ ಬಲವನ್ನು ಅಳೆಯಲು ಬಯಸಿದೆ. ಒಬಿಸಿ ಮಾಲಿ ಸಮುದಾಯಕ್ಕೆ ಸೇರಿದ ಅಶೋಕ್ ಗೆಹ್ಲೋಟ್ ಅವರು ಪಶ್ಚಿಮ ರಾಜಸ್ಥಾನದಾದ್ಯಂತ ಸಾಕಷ್ಟು ಜನಮೆಚ್ಚುಗೆಯನ್ನು ಪಡೆದಿದ್ದಾರೆ. ನಿನ್ನೆ ಸಂಜೆ ಜೈಸಲ್ಮೇರ್ಗೆ ಆಗಮಿಸಿದ ಗೃಹ ಸಚಿವ ಅಮಿತ್ ಶಾ ಅವರು ಇಂದು ನಗರದ ಹೋಟೆಲ್ನಲ್ಲಿ ಮಹತ್ವದ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಅಮಿತ್ ಶಾ ಅವರು ಜೋಧ್ಪುರಕ್ಕೆ ತೆರಳುವ ಮುನ್ನ ಜೈಸಲ್ಮೇರ್ನಲ್ಲಿರುವ ತನೋಟ್ ಮಾತಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಒಬಿಸಿ ಮೋರ್ಚಾ ಸಭೆಯ ನಂತರ ಶಾ ಅವರು ಜೋಧ್ಪುರದ ದಸರಾ ಮೈದಾನದಲ್ಲಿ ಬಿಜೆಪಿಯ ಬೂತ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮುಖ್ಯಮಂತ್ರಿಗಳ ತವರಿನಲ್ಲಿ ಅಮಿತ್ ಶಾ ಸಭೆ
ಬಿಜೆಪಿಯ ಒಬಿಸಿ ಮೋರ್ಚಾ ಮುಖ್ಯಸ್ಥ ಕೆ ಲಕ್ಷ್ಮಣ್ ಮತ್ತು ಪಕ್ಷದ ರಾಜಸ್ಥಾನ ಮುಖ್ಯಸ್ಥ ಸತೀಶ್ ಪೂನಿಯಾ ಶುಕ್ರವಾರ ಸಭೆಯನ್ನು ಉದ್ಘಾಟಿಸಿದರು. ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಕೂಡ ಶುಕ್ರವಾರ ಜೋಧಪುರಕ್ಕೆ ಆಗಮಿಸಿದ್ದರು. ಈ ವೇಳೆ ಎಂಎಸ್ ರಾಜೆ ಅವರ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಅವರನ್ನು ಸ್ವಾಗತಿಸಿದರು. ಈ ಬೆಳವಣಿಗೆ ರಾಜ್ಯದಲ್ಲಿ ರಾಜೆ ಅವರು ಇನ್ನೂ ಬಲವಾದ ಅಭಿಮಾನಿಗಳನ್ನು ಹೊಂದಿದ್ದಾರೆನ್ನುವುದು ಕೇಂದ್ರ ನಾಯಕತ್ವಕ್ಕೆ ಸ್ಪಷ್ಟವಾಗಿದೆ. ಇಂದು ಸಂಜೆ ಅಮಿತ್ ಶಾ ನಡೆಯುವ ಸಭೆಯಲ್ಲಿ ಈ ಬಗ್ಗೆಯೂ ಚರ್ಚೆಗಳು ನಡೆಯಲಿವೆ.
ಮುಂದಿನ ರಾಜಸ್ಥಾನದ ಸಿಎಂ ಇವರೇ...
2023ರಲ್ಲಿ ನಡೆಯಲಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭಾರತೀಯ ಜನತಾ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಕೆಲ ದಿನಗಳ ಹಿಂದೆ ಕಾಂಗ್ರೆಸ್ ನಾಯಕ ಗೋವಿಂದ್ ಸಿಂಗ್ ದೋತಸ್ರಾ ಭವಿಷ್ಯ ನುಡಿದಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ರಾಜ್ಯ ಭೇಟಿಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಬಾರ್ಮರ್ ಸಂಸದ ಕೈಲಾಶ್ ಚೌಧರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಅವರಿಗೆ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲು ಅವಕಾಶ ನೀಡಲಿಲ್ಲ. ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರನ್ನು ನಿರ್ಲಕ್ಷಿಸಿರುವುದು ಶೇಖಾವತ್ ಸಿಎಂ ಅಭ್ಯರ್ಥಿ ಎಂಬುದನ್ನು ಸೂಚಿಸುತ್ತದೆ ಎಂದು ದೋತಸ್ರಾ ಹೇಳಿದ್ದಾರೆ.
ಭವಿಷ್ಯ ನುಡಿದ 'ಕೈ' ನಾಯಕ ಗೋವಿಂದ್ ಸಿಂಗ್ ದೋತಸ್ರಾ
ಸ್ಥಳೀಯ ರೈತ ನಾಯಕ ಮತ್ತು ಬಾರ್ಮರ್ ಸಂಸದ ಕೈಲಾಶ್ ಚೌಧರಿ ಅವರ ಭಾವಚಿತ್ರಕ್ಕೆ ಜಾಗ ನೀಡದಿರುವುದು ಮತ್ತು ಅವರೊಂದಿಗೆ ಹೆಚ್ಚು ಸಂಪರ್ಕ ಇಟ್ಟುಕೊಳ್ಳದಿರುವುದು ಮುಂದಿನ ದಿನಗಳಲ್ಲಿ ರಾಜಸ್ಥಾನದಲ್ಲಿ ಗಜೇಂದ್ರ ಸಿಂಗ್ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥ ದೋತಸ್ರಾ ಹೇಳಿದ್ದಾರೆ. ಅಲ್ಲದೇ ಅಮಿತ್ ಶಾ ತಮ್ಮ ರ್ಯಾಲಿಯಲ್ಲಿ ಪೂನಿಯಾ ಹೆಸರನ್ನು ಸಹ ತೆಗೆದುಕೊಂಡಿಲ್ಲ ಎಂದು ಅವರು ಹೇಳಿದ್ದಾರೆ. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಕಟಾರಿಯಾ ಅವರಿಗೆ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಅವಕಾಶ ನೀಡಲಿಲ್ಲ ಎಂದು ಅವರು ಹೇಳಿದರು. ಇಂತಹ ಎಲ್ಲಾ ಘಟನೆಗಳು ಶೇಖಾವತ್ ಅವರು ಮುಂದಿನ ಚುನಾವಣೆಯಲ್ಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗುತ್ತಾರೆ ಎಂಬುದನ್ನು ಸ್ಪಷ್ಟವಾಗಿ ಸೂಚಿಸುತ್ತವೆ ಎಂದು ದೋತಸ್ರಾ ಹೇಳಿದರು.
ಸೋತ ಕ್ಷೇತ್ರಗಳನ್ನು ಗೆಲ್ಲುವ ತಂತ್ರ
200 ವಿಧಾನಸಭಾ ಕ್ಷೇತ್ರಗಳಲ್ಲಿ, ಜೋಧ್ಪುರ, ಬಾರ್ಮರ್, ಜೈಸಲ್ಮೇರ್, ಜಲೋರ್, ಸಿರೋಹಿ ಮತ್ತು ಪಾಲಿ ಹೀಗೆ ಆರು ಜಿಲ್ಲೆಗಳ 33 ಜೋಧ್ಪುರ ವಿಭಾಗಗಳನ್ನು ಒಳಗೊಂಡಿದೆ. ಪ್ರಸ್ತುತ ಬಿಜೆಪಿ 14, ಕಾಂಗ್ರೆಸ್ 17, ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ ಮತ್ತು ಸ್ವತಂತ್ರರು ತಲಾ ಒಂದು ಸ್ಥಾನವನ್ನು ಹೊಂದಿದ್ದಾರೆ.
ಇನ್ನೂ ರಾಜ್ಯ ಕಾಂಗ್ರೆಸ್ ಚುನಾವಣೆಗೆ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಲು ಉತ್ಸುಕವಾಗಿದೆ. ಅದರಲ್ಲೂ 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತ ಕ್ಷೇತ್ರಗಳಲ್ಲಿ ಈ ಬಾರಿ ಪ್ರಬಲ ಅಭ್ಯರ್ಥಿಗಳನ್ನು ಹಾಕಿ ಮೊದಲೇ ಘೋಷಣೆ ಮಾಡಲು ಮುಂದಾಗಿದೆ. ಟಿಕೆಟ್ ಆಕಾಂಕ್ಷಿಗಳು ತಮಗೆ ಟಿಕೆಟ್ ಸಿಗಬಹುದೇನೋ ಎಂದು ಕಾತರದಿಂದ ಕಾಯುತ್ತಿದ್ದಾರೆ. ವಿಧಾನಸಭೆ ಚುನಾವಣೆಯನ್ನು ಎದುರಿಸಲು ಮೂರು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮದೇ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿವೆ.