ಸಿಎಂ ಯಾರೆಂದು ಹೈಕಮಾಂಡ್ ತೀರ್ಮಾನಿಸಲಿ ಎಂಬ ನಿರ್ಧಾರ; ಶಾಸಕ ಅಸಮಾಧಾನ
ಜೈಪುರ್, ಡಿಸೆಂಬರ್ 12: ರಾಜಸ್ತಾನದಲ್ಲಿ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಅಸಮಾಧಾನ ವ್ಯಕ್ತವಾಗಿದೆ. ಶಾಸಕ ವಿಶ್ವೇಂದ್ರ ಸಿಂಗ್ ಆಯ್ಕೆ ಪ್ರಕ್ರಿಯೆಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜಸ್ತಾನದಲ್ಲಿ ಬುಧವಾರ ಒಂದು ಅಂಶದ ನಿರ್ಣಯ ಕೈಗೊಳ್ಳಲಾಯಿತು. ಮುಖ್ಯಮಂತ್ರಿ ಆಯ್ಕೆಯ ಅಧಿಕಾರವನ್ನು ರಾಹುಲ್ ಗಾಂಧಿ ಅವರಿಗೆ ನೀಡಲಾಯಿತು.
ಈ ಬಗ್ಗೆ ಇದೀಗ ಅಸಮಾಧಾನವಾಗಿದ್ದಾರೆ ವಿಶ್ವೇಂದ್ರ ಸಿಂಗ್. ಪಕ್ಷದ ಹೈಕಮಾಂಡ್ ನಿಂದ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸುವಂತೆ ಇದ್ದರೆ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸುವ ಅಗತ್ಯ ಏನು? ಪಕ್ಷದ ವೀಕ್ಷಕರಿಗೆ ನನ್ನ ಅಭಿಪ್ರಾಯವನ್ನು ತಿಳಿಸುವ ಮೂಲಕ ಏಕೆ ಸಮಯ ವ್ಯರ್ಥ ಮಾಡಿಕೊಳ್ಳಬೇಕು ಎಂದು ಎಂದು ಸಿಂಗ್ ಪ್ರಶ್ನಿಸಿದ್ದಾರೆ.
ಶಾಸಕಾಂಗ ಪಕ್ಷದಲ್ಲಿ ಭಾಗವಹಿಸಿದ್ದ ಅವರು, ಆ ನಂತರ ಮಾತನಾಡಿದ್ದಾರೆ. ಜಾಟ್ ಸಮುದಾಯದ ನಾಯಕರಾದ ಅವರು, ಭರತ್ ಪುರ್ ಜಿಲ್ಲೆಯ ದೀಗ್-ಕುಮ್ಹೇರ್ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದಾರೆ. ಕಾಂಗ್ರೆಸ್ ವೀಕ್ಷಕರಾದ ಕೆ.ಸಿ.ವೇಣುಗೋಪಾಲ್ ಅವರು ಕಾಂಗ್ರೆಸ್ ಶಾಸಕರ ಜತೆ ಮಾತುಕತೆ ನಡೆಸಿದ್ದಾರೆ.

ಶಾಸಕರಿಂದ ಅಭಿಪ್ರಾಯ ಪಡೆದು, ಅದನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ತಿಳಿಸಲಾಗುವುದು. ಆ ನಂತರ ಮುಖ್ಯಮಂತ್ರಿ ಯಾರು ಎಂದು ಅವರು ಹೇಳಿದ್ದಾರೆ. "ಇದೊಂದು ಅಂಶದ ಬಗ್ಗೆ ಭಿನ್ನಾಭಿಪ್ರಾಯ ಇದೆ. ಆದರೆ ಪಕ್ಷದ ಮೇಲೆ ಕೋಪ, ಅಸಂತೋಷ ಏನಿಲ್ಲ. ಪಕ್ಷದ ಒಂದಂಶದ ನಿರ್ಣಯಕ್ಕೆ ನನಗೆ ಒಪ್ಪಿಗೆ ಇದೆ. ಆದರೆ ಅಂಥ ಸನ್ನಿವೇಶದಲ್ಲಿ ಶಾಸಕರ ಅಭಿಪ್ರಾಯ ಏಕೆ ಪಡೆಯಬೇಕು? ಅದರಿಂದ ಪ್ರಯೋಜನ ಇಲ್ಲ ಅಂದಿದ್ದೆ" ಎಂದಿದ್ದಾರೆ ವಿಶ್ವೇಂದ್ರ ಸಿಂಗ್.
ರಾಜಸ್ತಾನ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲಟ್ ಹಾಗೂ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇಬ್ಬರೂ ಅಲ್ಲಿನ ಮುಖ್ಯಮಂತ್ರಿ ಹುದ್ದೆಯ ರೇಸಿನಲ್ಲಿ ಇದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications