ರಾಜಸ್ಥಾನದಲ್ಲಿ ಕಾಂಗ್ರೆಸ್ ಮುನ್ನಡೆ : ಪೈಲಟ್ ಅಭಿಮಾನಿಗಳ ಸಂಭ್ರಮ
ಜೈಪುರ, ಡಿಸೆಂಬರ್ 11 : ಐದು ವರ್ಷಗಳಿಂದ ಅಧಿಕಾರವಿಲ್ಲದೆ ರಾಜಸ್ಥಾನದಲ್ಲಿ ಪರಿತಪಿಸುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ, ಚುನಾವಣೆ ಫಲಿತಾಂಶದಲ್ಲಿ ಭರ್ಜರಿ ಮುನ್ನಡೆ ಸಾಧಿಸಿರುವುದು ಮರುಭೂಮಿಯಲ್ಲಿ ನೀರಿನ ಸೆಲೆ ಕಂಡಂತಾಗಿದೆ.
ಬೆಳಿಗ್ಗೆ 9.20ರ ಸುಮಾರಿಗೆ 199 ಕ್ಷೇತ್ರಗಳ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ 94ರಲ್ಲಿ ಮುನ್ನಡೆ ಸಾಧಿಸಿದ್ದು, ಈಗಾಗಲೆ ಭರ್ಜರಿ ಸಂಭ್ರಮಾಚರಣೆ ಶುರುವಾಗಿದೆ. ಬಹುಮತ ಸಾಧಿಸಲು ಬೇಕಿರುವುದು 101 ಸ್ಥಾನಗಳು ಮಾತ್ರ. ಕಾಂಗ್ರೆಸ್ ಈ ಸಂಖ್ಯೆಗೆ ತೀರ ಹತ್ತಿರದಲ್ಲಿದೆ.
ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿಸಲಾಗಿರುವ ಸಚಿನ್ ಪೈಲಟ್ ಅವರ ಮನೆಯ ಮುಂದೆ ನೂರಾರು ಅಭಿಮಾನಿಗಳು ಈಗಾಗಲೆ ಜಮಾಯಿಸಿದ್ದು, ಡೋಲು ಬಾರಿಸುತ್ತ ಕುಣಿಯುತ್ತಿದ್ದಾರೆ. ಟ್ರೆಂಡ್ ನೋಡುತ್ತಿದ್ದರೆ ಕಾಂಗ್ರೆಸ್ ಈಬಾರಿ ಬಿಜೆಪಿಯಿಂದ ಅಧಿಕಾರ ಕಸಿದುಕೊಳ್ಳುವುದು ಖಚಿತ.

ಆಡಳಿತ ಚುಕ್ಕಾಣಿ ಹಿಡಿದಿದ್ದ ಭಾರತೀಯ ಜನತಾ ಪಕ್ಷ ಹಿನ್ನಡೆ ಸಾಧಿಸಿದ್ದು 75 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದ್ದು, ಇದೇ ಸ್ಥಿತಿ ಮುಂದುವರಿದರೆ ಬಿಜೆಪಿ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವುದು ನಿಶ್ಚಿತ.
ಈ ನಡುವೆ ಸಚಿನ್ ಪೈಲಟ್ ಮತ್ತು ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ನಡುವೆ ಮುಖ್ಯಮಂತ್ರಿ ಕುರ್ಚಿಗಾಗಿ ಭಾರೀ ಪೈಪೋಟಿ ಎದುರಾಗಿದೆ. ಇತ್ತೀಚೆಗೆ ಮಾಧ್ಯಮದೊಂದಿಗೆ ಮಾತನಾಡುವಾಗ ಸಚಿನ್ ಪೈಲಟ್ ಬಗ್ಗೆ ಪ್ರಶ್ನೆ ಕೇಳಿದಾಗ ಗೆಹ್ಲೋಟ್ ಹಾರಿಕೆಯ ಉತ್ತರ ನೀಡಿದ್ದರು.
2013ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 163 ಸ್ಥಾನಗಳಲ್ಲಿ ಗೆದ್ದು, ವಸುಂಧರಾ ರಾಜೇ ಅವರು ಮುಖ್ಯಮಂತ್ರಿ ಪದವಿಗೇರಿದ್ದರು. ಕಾಂಗ್ರೆಸ್ ಕೇವಲ 21ರಲ್ಲಿ ಮಾತ್ರ ಗೆದ್ದಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications