ರಾಜಸ್ಥಾನ ಕಾಂಗ್ರೆಸ್ ಕೈಗೆ : ಸಮೀಕ್ಷೆಗಳ ಫಲಿತಾಂಶ ನಿಜವಾಯ್ತು!
ಜೈಪುರ, ಡಿಸೆಂಬರ್ 11 : ರಾಜಸ್ಥಾನ ವಿಧಾನಸಭೆ ಚುನಾವಣೆ 2018ರ ಫಲಿತಾಂಶ ಪ್ರಕಟವಾಗಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿದಂತೆ ಕಾಂಗ್ರೆಸ್ ದೊಡ್ಡ ಪಕ್ಷವಾಗಿದೆ. ಆಡಳಿತಾರೂಢ ಬಿಜೆಪಿ ಸೋಲು ಕಂಡಿದೆ.
ರಾಜಸ್ಥಾನದ 199 ಕ್ಷೇತ್ರಗಳಿಗೆ ಡಿಸೆಂಬರ್ 7ರಂದು ಚುನಾವಣೆ ನಡೆದಿತ್ತು. ಮಂಗಳವಾರ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ 95 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ರಾಜಸ್ಥಾನ ವಿಧಾನಸಭೆಯಲ್ಲಿ ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 100. ಬಿಜೆಪಿ 81, ಬಿಎಸ್ಪಿ 3 ಇತರರು 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವುದು ಖಚಿತವಾಗಿದ್ದು, ಮುಖ್ಯಮಂತ್ರಿ ಯಾರು? ಎನ್ನುವ ಚರ್ಚೆ ಆರಂಭವಾಗಿದೆ.
2013ರ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 163 ಸ್ಥಾನಗಳಲ್ಲಿ ಜಯಗಳಿಸಿ ಅಧಿಕಾರ ಹಿಡಿದಿತ್ತು. 2018ರ ಚುನಾವಣೆಯಲ್ಲಿ ಪಕ್ಷ 100ರ ಗಡಿ ದಾಟಲು ವಿಫಲವಾಗಿದೆ. ರಾಜ್ಯದಲ್ಲಿದ್ದ ಆಡಳಿತ ವಿರೋಧಿ ಅಲೆ ಕಾಂಗ್ರೆಸ್ ಪಕ್ಷಕ್ಕೆ ಸಹಾಯಕವಾಗಿದೆ....

ಚುನಾವಣಾ ಫಲಿತಾಂಶ 2018
2018ರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಕಾಂಗ್ರೆಸ್ 95, ಬಿಜೆಪಿ 81, ಬಿಎಸ್ಪಿ 3 ಮುತ್ತು ಇತರರು 20 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶವೂ ಕಾಂಗ್ರೆಸ್ ದೊಡ್ಡ ಪಕ್ಷವಾಗಲಿದೆ ಎಂದು ಹೇಳಿತ್ತು.

ಸಮೀಕ್ಷೆಗಳ ಸಮೀಕ್ಷೆ
ಡಿಸೆಂಬರ್ 7ರಂದು ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಮತದಾನ ನಡೆದಿತ್ತು. ಚುನಾವಣೆ ಮುಗಿದ ಬಳಿಕ ವಿವಿಧ ರಾಷ್ಟ್ರೀಯ ವಾಹಿನಿಗಳು ಚುನಾವಣೋತ್ತರ ಸಮೀಕ್ಷೆಗಳನ್ನು ನಡೆಸಿದ್ದವು. ಎಲ್ಲಾ ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್ 115, ಬಿಜೆಪಿ 76, ಬಿಎಸ್ಪಿ 0, ಇತರರು 8 ಸ್ಥಾನಗಳಲ್ಲಿ ಜಯಗಳಿಸಬಹುದು ಎಂದು ಹೇಳಲಾಗಿತ್ತು.

ವಿರೋಧಿ ಅಲೆಯಲ್ಲಿ ಮುದುಡಿದ ಕಮಲ
ಆಡಳಿತ ವಿರೋಧಿ ಅಲೆಯಲ್ಲಿ ಬಿಜೆಪಿ ಕೊಚ್ಚಿ ಹೋಗಿದ್ದು ಭಾರಿ ಹಿನ್ನಡೆ ಅನುಭವಿಸಿದೆ. 2013ರ ಚುನಾವಣೆಯಲ್ಲಿ 163 ಕ್ಷೇತ್ರಗಳಲ್ಲಿ ಗೆದ್ದಿದ್ದ ಪಕ್ಷ 5 ವರ್ಷ ಅಧಿಕಾರ ನಡೆಸಿತ್ತು. ಆದರೆ, ವಸುಂಧರಾ ರಾಜೆ ಅವರು ಜನರ ಕೈಗೆ ಸಿಗುವುದಿಲ್ಲ, ಪಕ್ಷದ ಹಿರಿಯ ನಾಯಕರನ್ನು ಕಡೆಗಣಿಸಲಾಗಿದೆ ಎಂಬ ಆರೋಪಗಳಿತ್ತು. ಇವು ಚುನಾವಣೆಯಲ್ಲಿ ಹೊಡೆತ ನೀಡಿದ್ದು, ಪಕ್ಷ ಹಿನ್ನಡೆ ಅನುಭವಿಸಿದೆ.

ಟುಡೇಸ್ ಚಾಣಕ್ಯ ಫಲಿತಾಂಶ
ಟುಡೇಸ್ ಚಾಣಕ್ಯ ಚುನಾವಣೋತ್ತರ ಸಮೀಕ್ಷೆ ನಿಖರವಾಗಿರುತ್ತದೆ ಎಂಬುದು ಹಲವು ಬಾರಿ ಸಾಬೀತಾಗಿದೆ. ರಾಜಸ್ಥಾನದಲ್ಲೂ ಟುಡೇಸ್ ಚಾಣಾಕ್ಯ ಸಮೀಕ್ಷೆ ನಡೆಸಿತ್ತು. ಕಾಂಗ್ರೆಸ್ 123, ಬಿಜೆಪಿ 68, ಇತರರು 8 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ ಎಂದು ಸಮೀಕ್ಷೆಯ ವರದಿ ಹೇಳಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications