ರಾಜಸ್ಥಾನ ಚುನಾವಣೆ : ಪಕ್ಷೇತರ ಅಭ್ಯರ್ಥಿ ವಿರುದ್ಧ ಸೋತ ಸಚಿವ!
ಜೈಪುರ, ಡಿಸೆಂಬರ್ 11 : ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಸಚಿವರೊಬ್ಬರು ಪಕ್ಷೇತರ ಅಭ್ಯರ್ಥಿ ವಿರುದ್ಧ ಸೋಲು ಕಂಡಿದ್ದಾರೆ. ರಾಜಸ್ಥಾನದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದ್ದು, ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಮಂಗಳವಾರ ರಾಜಸ್ಥಾನ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. 199 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 98, ಬಿಜೆಪಿ 74, 13 ಪಕ್ಷೇತರರು ಮತ್ತು 14 ಇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಶಿರೋಹಿ ಕ್ಷೇತ್ರದಲ್ಲಿ ಸಚಿವ ಓಥರಾಮ್ ದೇವಾಸಿ ಅವರು ಪಕ್ಷೇತರ ಅಭ್ಯರ್ಥಿ ಸನ್ಯಾಮ್ ಲೋಧ ವಿರುದ್ಧ ಸೋಲು ಕಂಡಿದ್ದಾರೆ. ದೇವಾಸಿ ಅವರು 71,019 ಮತಗಳನ್ನು ಪಡೆದರೆ, ಲೋಧ ಅವರು 81,272 ಮತಗಳನ್ನು ಪಡೆದಿದ್ದಾರೆ.

ಸನ್ಯಾಮ್ ಲೋಧ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದರು. 2018ರ ವಿಧಾನಸಭೆ ಚುನಾವಣೆಗೂ ಮೊದಲು ಅವರು ಕಾಂಗ್ರೆಸ್ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಹಾಲಿ ಸಚಿವರಿಗೆ ಅವರು ಸೋಲಿನ ರುಚಿ ತೋರಿಸಿದ್ದಾರೆ.
ಸೋತ ಸಚಿವರು : ಓಥರಾಮ್ ದೇವಾಸಿ ಅವರು ಮಾತ್ರ ಚುನಾವಣೆಯಲ್ಲಿ ಸೋತಿಲ್ಲ, ಇನ್ನೂ ಹಲವರು ಸೋಲು ಕಂಡಿದ್ದಾರೆ.
* ಜಲಸಂಪನ್ಮೂಲ ಸಚಿವ ರಾಮ್ ಪ್ರತಾಪ್ ಅವರು ಹನುಮಘರ್ ಕ್ಷೇತ್ರದಲ್ಲಿ ಕಾಂಗ್ರೆಸ್ನ ವಿನೋದ್ ಕುಮಾರ್ ಅವರ ಎದುರು 15,522 ಮತಗಳಿಂದ ಸೋಲುಕಂಡಿದ್ದಾರೆ.
* ಕೃಷಿ ಸಚಿವ ಪ್ರಭುಲಾಲ್ ಸಾಯ್ನಿ ಅವರು ಕಾಂಗ್ರೆಸ್ನ ಪ್ರಮೋದ್ ಭಯ್ಯ ವಿರುದ್ಧ 34,063 ಮತಗಳ ಅಂತರದಲ್ಲಿ ಸೋತಿದ್ದಾರೆ.
* ರಾಜಸ್ಥಾನ ವಿಧಾನಸಭೆ ಸ್ಪೀಕರ್ ಕೈಲಾಶ್ ಮೇಘಾವಾಲ್ ಅವರು 74,542 ಮತಗಳ ಅಂತರದಲ್ಲಿ ಶಾಹ್ಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications