ರೋಚಕ ದಿಕ್ಕಿನಲ್ಲಿ ರಾಜಸ್ಥಾನ ಚುನಾವಣೆ: ರಾಜೆ ವಿರುದ್ಧ ಬಲಾಢ್ಯ ಅಭ್ಯರ್ಥಿ!
ಜೈಪುರ, ನವೆಂಬರ್ 17: ಡಿಸೆಂಬರ್ ನಲ್ಲಿ ನಡೆಯಲಿರುವ ರಾಜಸ್ಥಾನ ವಿಧಾನಸಭೆ ಚುನಾವಣೆ ರೋಚಕಘಟ್ಟ ತಲುಪುವ ಸಾಧ್ಯತೆ ಹೆಚ್ಚಾಗಿದೆ.
ಇಂದು ತಾನೇ ಕಾಂಗ್ರೆಸ್ ಬಿಡುಗಡೆ ಮಾಡಿದ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಹಾಲಿ ಮುಖ್ಯಮಂತ್ರಿ ಬಿಜೆಪಿಯ ವಸುಂಧರಾ ರಾಜೆ ಅವರ ವಿರುದ್ಧ ಬಿಜೆಪಿ ಮಾಜಿ ನಾಯಕ ಮನ್ವೇಂದ್ರ ಸಿಂಗ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಇತ್ತೀಚೆಗಷ್ಟೇ ಬಿಜೆಪಿ ತೊರೆದು ಮನ್ವೇಂದ್ರ ಸಿಂಗ್ ಕಾಂಗ್ರೆಸ್ ಸೇರಿದ್ದರು. ಬಿಜೆಪಿಯ ಪ್ರಮುಖ ನಾಯಕರಲ್ಲೊಬ್ಬರಾಗಿದ್ದ ಮನ್ವೇಂದ್ರ ಸಿಂಗ್ ಚುನಾವಣೆ ಹೊಸ್ತಿಲಲ್ಲಿರುವಾಗ ಬಿಜೆಪಿ ತೊರೆದು ವಿಪಕ್ಷ ಕಾಂಗ್ರೆಸ್ ಅನ್ನು ಸೇರಿದ್ದು ಬಿಜೆಪಿಗೆ ಭಾರೀ ಹಿನ್ನಡೆಯನ್ನುಂಟು ಮಾಡಿತ್ತು.

ಮುಖಾಮುಖಿಯಾಗಲಿರುವ ಇಬ್ಬರು ದಿಗ್ಗಜರು
ಬಿಜೆಪಿಯ ಮಾಜಿ ಮುಖಂಡ ಮನ್ವೇಂದ್ರ ಸಿಂಗ್ ಅವರನ್ನು ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ವಿರುದ್ಧ ನಿಲ್ಲಿಸುವ ಕಾಂಗ್ರೆಸ್ ನಡೆ ಬಿಜೆಪಿಗೆ ಬಹುದೊಡ್ಡ ಹಿನ್ನಡೆಯನ್ನುಂಟು ಮಾಡಿದರೆ ಅಚ್ಚರಿಯಿಲ್ಲ. ಬಿಜೆಪಿಯ ಒಳಹುಳುಕುಗಳನ್ನೆಲ್ಲ ಬಲ್ಲ ಮನ್ವೇಂದ್ರ ಅವರು ರಾಜೆ ಅವರನ್ನು ಸಮರ್ಥವಾಗಿ ಎದುರಿಸಲು ಬೇಕಾದ ಎಲ್ಲಾ ತಯಾರಿಯನ್ನೂ ಮಾಡಿಕೊಂಡಿದ್ದಾರೆ. ರಾಜೆ ಅವರ ವಿರುದ್ಧ ಯಾವೆಲ್ಲ ಅಸ್ತ್ರಗಳನ್ನು ಹರಿಬಿಡಬೇಕು ಎಂಬುದನ್ನೂ ಅವರು ಬಲ್ಲರು!

ರಾಜೆ ವಿರುದ್ಧ ಆಡಳಿತ ವಿರೋಧಿ ಅಲೆ
ರಾಜಸ್ಥಾನದಲ್ಲಿ ಬಿಜೆಪಿ ಬಗ್ಗೆ ಉತ್ತಮ ಅಭಿಪ್ರಾಯವಿದ್ದರೂ, ಕೆಲವರಿಗೆ ರಾಜೆ ಅವರ ಬಗ್ಗೆ ಒಳ್ಳೆಯ ಅಭಿಪ್ರಾಯವಿಲ್ಲ. ಅವರ ದುರಹಂಕಾರವೇ ಬಿಜೆಪಿಗೆ ಹಿನ್ನಡೆಯನ್ನುಂಟು ಮಾಡಿದೆ ಎನ್ನಲಾಗುತ್ತಿದೆ. ಇದೀಗ ಬಿಜೆಪಿಯ ಮಾಜಿ ನಾಯಕರೇ ರಾಜೆ ಅವರ ವಿರುದ್ಧ ನಿಂತರೇ ಜನರು ಮನ್ವೇಂದ್ರ ಅವರಿಗೇ ಮತಹಾಕುವ ಸಾಧ್ಯತೆ ಹೆಚ್ಚು. ರಾಜಕೀಯವಾಗಿ ಸಾಕಷ್ಟು ಅನುಭವ ಹೊಂದಿರುವ ಮನ್ವೇಂದ್ರ ಅವರು ರಾಜೆ ಅವರಿಗೆ ಅತೀ ಕಠಿಣ ಪ್ರತಿಸ್ಪರ್ಧಿ ಎಂಬುದಂತೂ ಸತ್ಯ!

ಅಭ್ಯರ್ಥಿಗಳ ಪಟ್ಟಿ
ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಹುತೇಕ ಬಿಡುಗಡೆ ಮಾಡಿದ್ದಾರೆ. ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ 152 ಮತ್ತು ಎರಡನೇ ಪಟ್ಟಿಯಲ್ಲಿ 32 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿತ್ತು. ಬಿಜೆಪಿಯು ವಾರಗಳ ಮೊದಲೇ ತನ್ನ 131 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. 31 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನ.14 ರಂದು ಬಿಡುಗಡೆ ಮಾಡಿತ್ತು.

ಚುನಾವಣೆ ಎಂದು?
200 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ ಡಿಸೆಂಬರ್ 7 ರಂದು ಚುನಾವಣೆ ನಡೆಯಲಿದ್ದು, ಡಿ.11 ರಂದು ಫಲಿತಾಂಶ ಹೊರಬೀಳಲಿದೆ. ರಾಜಸ್ಥಾನದೊಟ್ಟಿಗೆ ಮಧ್ಯಪ್ರದೇಶ, ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂ ರಾಹ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶವೂ ಅಂದೇ ಹೊರಬೀಳಲಿದೆ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications