ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತ ಮಾಡಿತ ರಾಜಸ್ಥಾನ ಸರ್ಕಾರ: ಈಗ ಎಷ್ಟಿದೆ ದರ?
ಜೈಪುರ, ಮೇ 22: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನನ್ನು ಕಡಿಮೆ ಮಾಡಿದ ಬೆನ್ನಲ್ಲೇ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಕಡಿತ ಮಾಡಿದೆ.
ಕೇಂದ್ರ ಸರ್ಕಾರದ ಮಹತ್ವದ ಆದೇಶದ ಬೆನ್ನಲ್ಲೇ ರಾಜಸ್ಥಾನದ ಕಾಂಗ್ರೆಸ್ ನೇತೃತ್ವದ ಸರ್ಕಾರ ಪೆಟ್ರೋಲ್ ಮೇಲೆ 2.48 ರೂ. ಮತ್ತು ಡೀಸೆಲ್ ಮೇಲೆ 1.16 ವ್ಯಾಟ್ ಕಡಿತ ಮಾಡಿದೆ. ಈ ಮೂಲಕ ಶನಿವಾರ 118.48 ರೂ. ಇದ್ದ ಪೆಟ್ರೋಲ್ ಬೆಲೆ ಈಗ 108.48 ರೂಪಾಯಿಗೆ ಇಳಿಕೆಯಾಗಿದೆ. 100.92 ರೂಪಾಯಿ ಮೂಲಕ ಶತಕದ ಗಡಿ ದಾಟಿದ್ದ ಡೀಸೆಲ್ ಬೆಲೆ 93.27 ರೂಪಾಯಿಗಳಿಗೆ ಇಳಿಕೆಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿ ಟ್ವೀಟ್ ಮಾಡಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ "ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿಮೆ ಮಾಡಿದೆ. ರಾಜ್ಯ ಸರ್ಕಾರ ಕೂಡ ವ್ಯಾಟ್ ಕಡಿತಗೊಳಿಸಲು ತೀರ್ಮಾನ ಮಾಡಿದ್ದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 2.48 ರೂ., ಡೀಸೆಲ್ ಮೇಲೆ 1.16 ರೂ ವ್ಯಾಟ್ ಕಡಿತ ಮಾಡಲಾಗಿದೆ. ಈ ಮೂಲಕ ಪೆಟ್ರೋಲ್ ಬೆಲೆಯಲ್ಲಿ10.48 ರೂ. ಕಡಿಮೆಯಾಗಿದ್ದು ಡೀಸೆಲ್ ಬೆಲೆಯಲ್ಲಿ 7.16 ರೂ. ಕಡಿಮೆಯಾಗಲಿದೆ" ಎಂದು ಮಾಹಿತಿ ನೀಡಿದ್ದಾರೆ.

ರಾಜಸ್ಥಾನದ ನಂತರ ಕೇರಳ ಸರ್ಕಾರ ಕೂಡ ತೆರಿಗೆ ಕಡಿಮೆ ಮಾಡಿದ್ದು ಪೆಟ್ರೋಲ್ ಮೇಲೆ 2.41 ರೂ. ಡೀಸೆಲ್ ಮೇಲೆ 1.36 ರೂ. ವ್ಯಾಟ್ ಕಡಿತಗೊಳಿಸಿದೆ.
ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಲು ಶನಿವಾರ ಮಹತ್ವದ ನಿರ್ಣಯ ಕೈಗೊಂಡಿದ್ದ ಕೇಂದ್ರ ಸರ್ಕಾರ, ಪ್ರತಿ ಲೀಟರ್ ಮೇಲೆ ಪೆಟ್ರೋಲ್ ಮೇಲೆ 8 ರೂ. ಡೀಸೆಲ್ ಮೇಲೆ 6 ರೂ. ಅಬಕಾರಿ ಸುಂಕ ಕಡಿಮೆ ಮಾಡಿತ್ತು.
ಸಿಲಿಂಡರ್ ಮೇಲೆ 200 ರೂ. ಸಬ್ಸಿಡಿ; ಬೆಲೆ ಕಡಿಮೆ ಮಾಡಿದ್ದ ಮಾಹಿತಿಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದರು. ಅಬಕಾರಿ ಸುಂಕ ಕಡಿಮೆ ಮಾಡಿರುವುದರಿಂದ ಕೇಂದ್ರ ಸರ್ಕಾರಕ್ಕೆ 1 ಲಕ್ಷ ಕೋಟಿ ಆದಾಯ ಕಡಿಮೆಯಾಗಲಿದೆ. ಹಣದುಬ್ಬರ ಕಡಿಮೆ ಮಾಡುವ ಉದ್ದೇಶದಿಂದ ಹಲವು ಘೋಷಣೆ ಮಾಡಿರುವ ಸಚಿವೆ, ಉಜ್ವಲ ಯೋಜನೆಯಡಿ ಸಿಲಿಂಡರ್ ಮೇಲೆ 200 ರೂ. ಸಬ್ಸಿಡಿ ನೀಡಲಾಗುವುದು ಎಂದು ಹೇಳಿದರು.

ಬೆಲೆ ಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆಯಾಗಿದ್ದೆ ಪೆಟ್ರೋಲಿಯಂ ಮೇಲಿನ ಉತ್ಪನ್ನಗಳ ಮೇಲಿನ ವ್ಯಾಟ್ ತಗ್ಗಿಸುವಂತೆ ರಾಜ್ಯ ಸರ್ಕಾರಗಳಿಗೆ ನಿರ್ಮಲಾ ಸೀತಾರಾಮನ್ ಒತ್ತಾಯ ಮಾಡಿದ್ದರು. ಈ ಬೆನ್ನಲ್ಲೇ ರಾಜಸ್ಥಾನ ಮತ್ತು ಕೇರಳ ಸರ್ಕಾರ ವ್ಯಾಟ್ ತಗ್ಗಿಸುವ ಮೂಲಕ ಕೊಂಚ ಬೆಲೆ ಇಳಿಕೆ ಮಾಡಿದೆ.
2021 ನವೆಂಬರ್ನಲ್ಲಿ ದೀಪಾವಳಿ ಹಿಂದಿನ ದಿನದಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಕಡಿಮೆ ಮಾಡಿತ್ತು. ಪೆಟ್ರೋಲ್ ಮೇಲೆ ಪ್ರತಿ ಲೀಟರ್ 5 ರೂ. ಡೀಸೆಲ್ ಮೇಲೆ ಪ್ರತಿ ಲೀಟರ್ 10 ರೂ. ಸುಂಕ ಕಡಿತಮಾಡಿತ್ತು.
-
Commercial LPG: ಹೋಟೆಲ್, ಪಿಜಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್: ವಾಣಿಜ್ಯ ಎಲ್ಪಿಜಿ ಹಂಚಿಕೆ ಪ್ರಮಾಣ ಹೆಚ್ಚಿಸಿ ಆದೇಶ -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾರ್ಚ್ 23ರ ದರಪಟ್ಟಿ -
MT Aqua Titan: ಮಂಗಳೂರು ಕರಾವಳಿಗೆ ಆಗಮಿಸಿದ ರಷ್ಯಾದ ಕಚ್ಚಾ ತೈಲ ಹೊತ್ತ ಬೃಹತ್ ನೌಕೆ -
ಭಾರತದಲ್ಲಿ ಇಂಧನ ಭದ್ರತೆಗೆ ಒತ್ತು, ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ: ಮೋದಿ ನೇತೃತ್ವದಲ್ಲಿ ಸಭೆ, ಹಲವು ಮಹತ್ವದ ತೀರ್ಮಾನ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ











Click it and Unblock the Notifications