ಈ ವ್ಯಕ್ತಿ ತಿಂಗಳಲ್ಲಿ 25 ದಿನ, ವರ್ಷದಲ್ಲಿ 300 ದಿನ ಮಲಗೇ ಇರ್ತಾರಂತೆ!
ವೈದ್ಯರ ಪ್ರಕಾರ ದಿನಕ್ಕೆ 8 ಗಂಟೆ ನಿದ್ದೆ ಮಾಡುವುದು ಉತ್ತಮವಾದದ್ದು, ಅದಕ್ಕಿಂತ ಕಡಿಮೆ ಅಥವಾ ಅದಕ್ಕಿಂತ ಹೆಚ್ಚು ನಿದ್ದೆ ಮಾಡಿದರೂ ಅನೇಕ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚಿರುತ್ತದೆ.
ಆದರೆ ಇಲ್ಲೊಬ್ಬರು ವರ್ಷದಲ್ಲಿ 300 ದಿನ ಮಲಗೇ ಇರ್ತಾರಂತೆ, ಒಮ್ಮೆ ಮಲಗಿದರೆ ಏಳುವುದು 25 ದಿನಗಳನ್ನು ಬಿಟ್ಟು ಎನ್ನುವ ಮಾಹಿತಿ ಲಬ್ಯವಾಗಿದ್ದು, ಎಲ್ಲರಲ್ಲಿ ಅಚ್ಚರಿ ಮೂಡಿಸಿದೆ.
ಹಿಂದೂ ಮಹಾಕಾವ್ಯದಲ್ಲಿ ಬರುವ ರಾವಣನ ಕಥೆ ತಿಳಿಯದವರೇ ಇಲ್ಲ, ಲಂಕೇಶ್ವರ ರಾವಣನ ಕಿರಿಯ ಸಹೋದರ ಆಗಿರುವ ಕುಂಭಕರ್ಣ ಒಂದು ಬಾರಿ ಮಲಗಿದರೆ ಮತ್ತೆ ಎಚ್ಚರವಾಗಲು 6 ತಿಂಗಳು ಬೇಕಿತ್ತಂತೆ.

ಆದರೆ ಈ ಆಧುನಿಕ ಜಗತ್ತಿನಲ್ಲೂ ಅಂತಹ ವ್ಯಕ್ತಿಗಳು ಇದ್ದಾರೆ ಎಂದರೆ ಆಶ್ಚರ್ಯವಾಗುತ್ತದೆ. ಆತ ವರ್ಷದಲ್ಲಿ 300 ದಿನ ಮಲಗೇ ಇರುತ್ತಾರಂತೆ. ಇದು ಆಶ್ಚರ್ಯವೆನಿಸಿದರೂ ಸತ್ಯ, ರಾಜಸ್ಥಾನದ ನಾಗ್ಪುರ ಜಿಲ್ಲೆಯ ಭದ್ವಾ ಗ್ರಾಮದ ನಿವಾಸಿ ಪುರಖರಂ ನಿದ್ರಿಸುವ ವ್ಯಕ್ತಿಯಾಗಿದ್ದಾರೆ.
ಆತನ ಆಕ್ಸಿಸ್ ಹೈಪರ್ಸೊಮ್ನಿಯಾ ಎಂಬ ಕಾಯಿಲೆಯಿಂದ ಬಳಲುತ್ತಿರುವುದೇ ಅತಿಯಾದ ನಿದ್ರೆಗೆ ಕಾರಣವಾಗಿದೆ.
ಈ ವಿರಳ ಕಾಯಿಲೆಯಿಂದ ಬಳಲುತ್ತಿರುವ ಪುರಖರಂ ತಿಂಗಳಲ್ಲಿ ಐದು ದಿನ ಮಾತ್ರ ತಮ್ಮ ಅಂಗಡಿಯನ್ನು ನೋಡಿಕೊಳ್ಳಲು ಸಾಧ್ಯವಾಗುತ್ತದೆ. ನಿದ್ದೆಗೆ ಜಾರಿದರೆ ಅವರನ್ನು ಎಬ್ಬಿಸುವುದು ಕಷ್ಟ ಎನ್ನುತ್ತಾರೆ ಕುಟುಂಬಸ್ಥರು.
ಆರಂಭದಲ್ಲಿ ಅವರು 15 ಗಂಟೆಗಳ ಕಾಲ ನಿದ್ರಿಸುತ್ತಿದ್ದರು, ಕ್ರಮೇಣವಾಗಿ ಈಗ 25 ದಿನಗಳು ನಿದ್ರಿಸುತ್ತಿದ್ದಾರೆ. ಅವರು ಮಲಗಿರುವಾಗಲೇ ಅವರಿಗೆ ಸ್ನಾನ ಮಾಡಿಸಲಾಗುತ್ತದೆ, ಊಟವನ್ನು ಕೂಡ ಮಾಡಿಸಲಾಗುತ್ತದೆ.
-
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications