ಅಶೊಕ್ ಗೆಹ್ಲೋಟ್ ಹಠದ ಮುಂದೆ ಸೋತು ನಿಂತ ರಾಹುಲ್ ಗಾಂಧಿ!
ಜೈಪುರ, ನವೆಂಬರ್ 15: ಎತ್ತು ಏರಿಗೆ... ಕೋಣ ನೀರಿಗೆ... ಹಾಗಾಗಿದೆ ರಾಜಸ್ಥಾನದ ಕಾಂಗ್ರೆಸ್ ಪರಿಸ್ಥಿತಿ! ಮುಖಂಡರಾದ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲೆಟ್ ಅವರನ್ನು ಚುನಾವಣೆ ಕಣದಿಂದ ದೂರವಿಟ್ಟು, ಅವರು ಐದು ರಾಜ್ಯಗಳಲ್ಲಿ ಪುರ್ಣ ಪ್ರಮಾಣದಲ್ಲಿ ಪ್ರಚಾರದ ಹೊಣೆ ಹೊತ್ತುಕೊಳ್ಳುವಂತೆ ಮಾಡಬೇಕು ಎಂಬುದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಯೋಜನೆಯಾಗಿತ್ತು.
ಆದರೆ ಇದೀಗ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ತಾವು (ಅಶೋಕ್ ಗೆಹ್ಲೋಟ್) ಮತ್ತು ಸಚಿನ್ ಪೈಲೆಟ್ ಇಬ್ಬರೂ ಸ್ಪರ್ಧಿಸುವುದಾಗಿ ಅಶೋಕ್ ಗೆಹ್ಲೋಟ್ ಸ್ವತಃ ಘೋಷಿಸಿಬಿಟ್ಟಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಮೊದಲೇ ಈ ರೀತಿ ಘೋಷಿಸಿದ್ದು, ಹಲವರ ಕೆಂಗಣ್ಣಿಗೆ ಕಾರಣವಾಗಿದೆ.
ಚುನಾವಣೆ ಕಣದಿಂದ ದೂರವುಳಿಸುವ ರಾಹುಲ್ ಯೋಜನೆಗೆ ಇಬ್ಬರು ನಾಯಕರೂ ಸಿದ್ಧವಿಲ್ಲ. ರಾಜಕೀಯದಲ್ಲಿದ್ದುಕೊಂಡು ಚುನಾವಣೆಗೆ ಸ್ಪರ್ಧಿಸದೆ ಉಳಿಯುವುದು ಎಂದರೆ ಹೇಗೆ ಸಾಧ್ಯ? ಅದೂ ಅಲ್ಲದೆ ಇಬ್ಬರ ಮುಂದೆಯೂ ಮುಖ್ಯಮಂತ್ರಿ ಪಟ್ಟದ ಕನಸಿರುವಾಗ..!
ಈ ಇಬ್ಬರು ನಾಯಕರ ನಡುವೆಯೂ ಇದ್ದ ಭಿನ್ನಾಭಿಪ್ರಾಯವನ್ನೇನೋ ರಾಹುಲ್ ಗಾಂಧಿ ತಹಬಂದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಬ್ಬರನ್ನೂ ಚುನಾವಣೆಯ ಕಣದಿಂದ ದೂರವುಳಿಸುವುದಕ್ಕೆ ಮಾತ್ರ ಅವರಿಗೆ ಸಾಧ್ಯವಾಗಿಲ್ಲ!

ಕಣದಿಂದ ದೂರವಿರಿಸುವ ಯೋಚನೆ ಏಕೆ?
ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ, ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲೆಟ್ ನಾಲ್ವರೂ ಪ್ರಮುಖ ನಾಯಕರು ಮತ್ತು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳು. ತಮ್ಮ ತಮ್ಮ ಕ್ಷೇತ್ರಗಳ ಬಗ್ಗೆ ಮಾತ್ರ ಇವರೆಲ್ಲರೂ ಹೆಚ್ಚು ಗಮನ ನೀಡುತ್ತಿರುವುದರಿಂದ ಈ ಯಾರಿಗೂ ಟಿಕೆಟ್ ನೀಡದೆ, ಐದು ರಾಜ್ಯಗಳ ಚುನಾವಣೆಯ ಪ್ರಚಾರದಲ್ಲೂ ಈ ನಾಯಕರು ಸಕ್ರಿಯರಾಗುವಂತೆ ಮಾಡಬೇಕು ಎಂಬುದು ಹೈಕಮಾಂಡ್ ಉದ್ದೇಶವಾಗಿತ್ತು.

ತಾನೂ ಅಭ್ಯರ್ಥಿ ಎಂದುಬಿಟ್ಟರು ಗೆಹ್ಲೋಟ್!
ನವದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಬುಧವಾರ ನಡೆದ ಸಭೆಯೊಂದರಲ್ಲಿ ತಾವೂ ರಾಜಸ್ಥಾನ ವಿಧಾನಸಭೆ ಚುನಾವಣೆಯ ಅಭ್ಯರ್ಥಿ ಎಂದು ಸ್ವತಃ ಅಶೋಕ್ ಗೆಹ್ಲೋಟ್ ಅವರೇ ಘೋಷಿಸಿಬಿಟ್ಟರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ರಾಜಸ್ಥಾನ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆಯವರು ಗೆಹ್ಲೋಟ್ ಪಕ್ಕದಲ್ಲೇ ಕೂತಿದ್ದರೂ, ಅವರಿಗೆ ಅವಕಾಶವನ್ನೇ ನೀಡದೆ ತಮ್ಮ ಹೆಸರನ್ನು ತಾವೇ ಘೋಷಿಸಿಕೊಂಡು ಕೈ ನಾಯಕರಿಗೆ ಕೊಂಚ ಇರಿಸುಮುರಿಸುಂಟಾಗುವಂತೆ ಮಾಡಿದರು.

ಅಭ್ಯರ್ಥಿಗಳ ಪಟ್ಟಿಯೇ ಪ್ರಕಟವಾಗಿಲ್ಲ!
ರಾಜಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ಮೊದಲೇ ಇಷ್ಟೆಲ್ಲ ಬೆಳವಣಿಗೆ ನಡೆದಿರುವುದು ಹೈಕಮಾಂಡ್ ಅನ್ನೇ ಚಿಂತೆಗೀಡುಮಾಡಿದೆ. ಗೆಹ್ಲೋಟ್ ಮಾತನಾಡುತ್ತ, ತಾವು ಮತ್ತು ಪೈಲೆಟ್ ಇಬ್ಬರೂ ಚುನಾವಣೆಗೆ ಸ್ಪರ್ಧಿಸುತ್ತೇವೆ ಎಂದಿದ್ದಾರೆ. ಅಕಸ್ಮಾತ್ ಇಬ್ಬರೂ ಗೆದ್ದರೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಜಿದ್ದಾಜಿದ್ದಿ ಏರ್ಪಡುವುದು ಖಂಡಿತ.

ಎಂದು ಚುನಾವಣೆ?
ರಾಜಸ್ಥಾನದಲ್ಲಿ ಡಿಸೆಂಬರ್ 7 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ. 200 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ ಪಕ್ಷವೊಂದು ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 101. ಪ್ರಸ್ತುತ ವಸುಂಧರಾ ರಾಜೆ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications