ರಾಜಸ್ಥಾನ ರಾಜ್ಯಸಭೆ ಚುನಾವಣೆ: ಬಿಜೆಪಿ ಶಾಸಕರು ರೆಸಾರ್ಟಿಗೆ ಶಿಫ್ಟ್ !
ಜೈಪುರ, ಜೂನ್ 16: ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಲು ಜೂನ್ 19ರಂದು ಚುನಾವಣೆ ನಡೆಸಲಾಗುತ್ತಿದೆ. ಗುಜರಾತ್ ಬಳಿಕ ರಾಜಸ್ಥಾನದಲ್ಲೂ ರೆಸಾರ್ಟ್ ರಾಜಕೀಯ ಆಟ ಆರಂಭಗೊಂಡಿದೆ. ಶಾಸಕರನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ತೊಡಗಿವೆ.
Recommended Video
ರಾಜಸ್ಥಾನದ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ತನ್ನ ಶಾಸಕರನ್ನು ರೆಸಾರ್ಟಿಗೆ ಕಳಿಸಿದೆ. ಈಗ ಬಿಜೆಪಿ ಕೂಡಾ ತನ್ನ ಶಾಸಕರನ್ನು ಮತ್ತೊಂದು ರೆಸಾರ್ಟ್ ನಲ್ಲಿರಿಸಿದೆ.
ಮೊದಲ ಬಾರಿಗೆ ಶಾಸಕರಾಗಿರುವವರಿಗೆ ತರಬೇತಿ ಮತ್ತು ಶಾಸಕಾಂಗ ವಿಷಯಗಳ ಬಗ್ಗೆ ಚರ್ಚೆ ನಡೆಸುವ ಉದ್ದೇಶಗಳಿಗಾಗಿ ನಮ್ಮ ಶಾಸಕರನ್ನು ಎರಡು ದಿನದ ಮಟ್ಟಿಗೆ ರೆಸಾರ್ಟ್ ಗೆ ಕಳುಹಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಪ್ರತಿಕ್ರಿಯಿಸಿದ್ದಾರೆ.

ರಾಜಸ್ಥಾನದಲ್ಲಿ 200 ಶಾಸಕರಲ್ಲಿ ಸುಮಾರು 190ಕ್ಕೂ ಹೆಚ್ಚು ಶಾಸಕರು ರೆಸಾರ್ಟ್ ಗಳಲ್ಲಿದ್ದಾರೆ. ಬಿಜೆಪಿಯ 72 ಶಾಸಕರ ಪೈಕಿ 60 ಮಂದಿ ಶಾಸಕರು ಟೊಂಕ್ ರಸ್ತೆಯ ಸೀತಾಪುರ್ ಹೋಟೆಲ್ ನಲ್ಲಿದ್ದಾರೆ. ರಾಷ್ಟ್ರೀಯ ಲೋಕ್ ತಾಂತ್ರಿಕ್ ಪಾರ್ಟಿ ಶಾಸಕರು ಕೂಡಾ ಬಿಜೆಪಿ ಬೆಂಬಲಕ್ಕಿದ್ದಾರೆ. ಕಾಂಗ್ರೆಸ್ ಪಕ್ಷದ 100ಕ್ಕೂ ಅಧಿಕ ಶಾಸಕರು ದೆಹಲಿ ಹೆದ್ದಾರಿಯ ರೆಸಾರ್ಟಿನಲ್ಲಿದ್ದಾರೆ.
ರಾಜಸ್ಥಾನದಿಂದ ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಸಿ ವೇಣುಗೋಪಾಲ್ ಹಾಗೂ ನೀರಜ್ ಡಾಂಗಿ ಸ್ಪರ್ಧಿಸಿದ್ದರೆ, ಬಿಜೆಪಿಯಿಂದ ರಾಜೇಂದ್ರ ಗೆಹ್ಲೋಟ್, ಓಂಕಾರ್ ಸಿಂಗ್ ಲಖಾವತ್ ಕಣದಲ್ಲಿದ್ದಾರೆ. 200 ಸ್ಥಾನದಲ್ಲಿ 107 ಸ್ಥಾನ ಹೊಂದಿರುವ ಕಾಂಗ್ರೆಸ್ಸಿಗೆ ಪಕ್ಷೇತರ ಅಭ್ಯರ್ಥಿಗಳು, ರಾಷ್ಟ್ರೀಯ ಲೋಕದಳ, ಸಿಪಿಐ (ಎಂ), ಭಾರತೀಯ ಬುಡಕಟ್ಟು ಪಕ್ಷ (ಬಿಟಿಪಿ) ದ ಬೆಂಬಲ ಸಿಗುವ ನಿರೀಕ್ಷೆಯಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications