ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಸಭೆ ಚುನಾವಣೆ: ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕಿ ಅಮಾನತು

|
Google Oneindia Kannada News

ಜೈಪುರ, ಜೂನ್ 10: ರಾಜಸ್ಥಾನದಲ್ಲಿ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ನಿರೀಕ್ಷೆಯಂತೆ ಫಲಿತಾಂಶ ಬಂದಿದೆ. ಕಾಂಗ್ರೆಸ್ ಪಕ್ಷ ಮೂರು ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಬಿಜೆಪಿ ಒಂದು ಸ್ಥಾನ ಗೆದ್ದುಕೊಂಡಿವೆ. ಆದರೆ, ಬಿಜೆಪಿ ಬೆಂಬಲಿತ ಉದ್ಯಮಿ ಸುಭಾಷ್ ಚಂದ್ರಗೆ ಸೋಲುಂಟಾಗಿದೆ. ಇನ್ನು ಇದರ ಬೆನ್ನಲ್ಲೇ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕಿಗೆ ಅಮಾನತು ಶಿಕ್ಷೆ ಸಿಕ್ಕಿದೆ.

ಧೋಲ್ ಪುರ್ ಶಾಸಕರಾದ ಶೋಭಾರಾಣಿ ಕುಶ್ವಾಹ ಅವರು ಇಂದು ನಡೆದ ರಾಜ್ಯಸಭೆ ಚುನಾವಣೆ ಮತದಾನ ಪ್ರಕ್ರಿಯೆಯಲ್ಲಿ ಅಡ್ಡ ಮತದಾನ ಮಾಡಿ ಪ್ರತಿಪಕ್ಷಕ್ಕೆ ನೆರವು ನೀಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಬಿಜೆಪಿ ಅಧಿಕೃತವಾಗಿ ಹೇಳಿದೆ.

ರಾಜ್ಯಸಭೆ ಚುನಾವಣೆಗಾಗಿ ಜೂನ್ 10ರಂದು ಬೆಳಗ್ಗೆ ಮತದಾನ ನಡೆದು ಸಂಜೆ ವೇಳೆಗೆ ಮತ ಎಣಿಕೆ, ಫಲಿತಾಂಶ ಪ್ರಕಟವಾಗಿದೆ. 15 ರಾಜ್ಯಗಳ 57 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಆದರೆ, ಈ ಪೈಕಿ11 ರಾಜ್ಯಗಳ ಒಟ್ಟು 41 ರಾಜ್ಯಸಭೆ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ 108 ಶಾಸಕರನ್ನು ಹೊಂದಿದ್ದು, 26 ಅಧಿಕ ಮತ ಮೌಲ್ಯದೊಂದಿಗೆ ಎರಡು ಸ್ಥಾನವನ್ನು ಸುಲಭವಾಗಿ ಗೆಲ್ಲಲಿದೆ. ಮೂರನೇ ಸ್ಥಾನ ಗೆಲ್ಲಲು ಇನ್ನೂ 15 ಸ್ಥಾನ ಬೇಕಾಗುತ್ತದೆ. ಕಾಂಗ್ರೆಸ್ ಪಕ್ಷದಿಂದ ರಣದೀಪ್ ಸುರ್ಜೇವಾಲ, ಮುಕುಲ್ ವಾಸ್ನಿಕ್ ಹಾಗೂ ಪ್ರಮೋದ್ ತಿವಾರಿಗೆ 126 ಶಾಸಕರ ಬಲ ಸಿಕ್ಕಿದೆ. ಬಿಜೆಪಿ 71 ಶಾಸಕ ಬಲ ಹೊಂದಿದ್ದು, ಒಂದು ಸ್ಥಾನ ಗೆಲ್ಲುವ ನಿರೀಕ್ಷೆ ಹೊಂದಿದ್ದು, 30 ಹೆಚ್ಚುವರಿ ಮತ ಮೌಲ್ಯ ಹೊಂದಿದೆ.

Rajasthan Rajya Sabha Results: BJP suspends Dholpur MLA for cross-voting

ವಿಜೇತರು: ಕಾಂಗ್ರೆಸ್ ಪಕ್ಷದ ರಣದೀಪ್ ಸುರ್ಜೇವಾಲ, ಮುಕುಲ್ ವಾಸ್ನಿಕ್, ಪ್ರಮೋದ್ ತಿವಾರಿ, ಬಿಜೆಪಿಯ ಘನಶ್ಯಾಮ್ ತಿವಾರಿ. ಬಿಜೆಪಿ ಬೆಂಬಲಿತ ಉದ್ಯಮಿ ಸುಭಾಷ್ ಚಂದ್ರಗೆ ಸೋಲುಂಟಾಗಿದೆ.

Breaking: ರಾಜ್ಯಸಭೆ- ರಾಜಸ್ಥಾನದಲ್ಲಿ ಕೈ ಪಾಲಾದ 3 ಸ್ಥಾನಗಳುBreaking: ರಾಜ್ಯಸಭೆ- ರಾಜಸ್ಥಾನದಲ್ಲಿ ಕೈ ಪಾಲಾದ 3 ಸ್ಥಾನಗಳು

ಕಳೆದ ಜೂನ್ ಮತ್ತು ಆಗಸ್ಟ್ ನಡುವೆ ವಿವಿಧ ದಿನಾಂಕಗಳಲ್ಲಿ ಸದಸ್ಯರ ನಿವೃತ್ತಿಯಿಂದಾಗಿ ಖಾಲಿಯಾಗುವ ಸ್ಥಾನಗಳಿಗೆ ಚುನಾವಣೆ ನಡೆಸಲಾಗುತ್ತಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಮುಖ್ತಾರ್ ಅಬ್ಬಾಸ್ ನಖ್ವಿ, ಕಾಂಗ್ರೆಸ್ ನಾಯಕ ಅಂಬಿಕಾ ಸೋನಿ, ಜೈರಾಮ್ ರಮೇಶ್ ಮತ್ತು ಕಪಿಲ್ ಸಿಬಲ್ ಮತ್ತು ಬಿಎಸ್‌ಪಿಯ ಸತೀಶ್ ಚಂದ್ರ ಮಿಶ್ರಾ ನಿವೃತ್ತಿ ಆಗಲಿದ್ದಾರೆ.

ತಮಿಳುನಾಡು ಮತ್ತು ಮಹಾರಾಷ್ಟ್ರದಿಂದ ತಲಾ ಆರು ಸದಸ್ಯರು ನಿವೃತ್ತಿ ಹೊಂದಲಿದ್ದಾರೆ. ಬಿಹಾರದಿಂದ ಐದು ಮತ್ತು ಆಂಧ್ರಪ್ರದೇಶ, ರಾಜಸ್ಥಾನ ಮತ್ತು ಕರ್ನಾಟಕದಿಂದ ತಲಾ ನಾಲ್ವರು ಸದಸ್ಯರು ರಾಜ್ಯಸಭೆಯಿಂದ ನಿವೃತ್ತಿ ಆಗುತ್ತಿದ್ದಾರೆ. ಅದೇ ರೀತಿ ಮಧ್ಯಪ್ರದೇಶ ಮತ್ತು ಒಡಿಶಾದಿಂದ ತಲಾ ಮೂವರು, ತೆಲಂಗಾಣ, ಛತ್ತೀಸ್‌ಗಢ, ಪಂಜಾಬ್ ಜಾರ್ಖಂಡ್ ಮತ್ತು ಹರ್ಯಾಣದಿಂದ ತಲಾ ಇಬ್ಬರು ಮತ್ತು ಉತ್ತರಾಖಂಡದಿಂದ ಒಬ್ಬ ಸದಸ್ಯರು ನಿವೃತ್ತರಾಗಿದ್ದಾರೆ.

ರಾಜ್ಯಸಭಾ ಸದಸ್ಯರನ್ನು ಆಯ್ಕೆ ಹೇಗೆ?:
ಸಾರ್ವಜನಿಕರು ನೇರವಾಗಿ ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡುವ ಅವಕಾಶವಿಲ್ಲ. ಆದರೆ, ಪರೋಕ್ಷವಾಗಿ ಆಯ್ಕೆ ಪ್ರಕ್ರಿಯೆ ಭಾಗವಾಗುತ್ತಾರೆ. ಜನರು ಆಯ್ಕೆ ಮಾಡಿದ ಶಾಸಕರು ಮತದಾನದ ಮೂಲಕ ಆಯ್ಕೆ ಮಾಡಬಹುದು. ಇದಲ್ಲದೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ರಾಷ್ಟ್ರಪತಿಗಳು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡುತ್ತಾರೆ.

English summary
BJP suspended its Dholpur MLA Shobha Rani Kushwaha from the primary membership for cross-voting in the Rajya Sabha polls.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X