ಅತ್ಯಾಚಾರ ಪ್ರಕರಣ: ಅಸಾರಾಂ ಬಾಪು ಮಧ್ಯಂತರ ಜಾಮೀನು ಅರ್ಜಿ ವಜಾ
ಜೋಧಪುರ್, ಫೆಬ್ರವರಿ 21: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ರದ್ದುಗೊಂಡಿದೆ.
ಜೋಧಪುರದಲ್ಲಿ ಸ್ಥಾಪಿಸಲಾಗಿಸಿರುವ ವಿಶೇಷ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕೋರ್ಟ್ ಜಸ್ಟೀಸ್ ಸಂದೀಪ್ ಮೆಹ್ತಾ ಅವರು ಅರ್ಜಿ ತಿರಸ್ಕರಿಸಿದ್ದಾರೆ. ನನ್ನ ಪತ್ನಿ ಲಕ್ಷ್ಮಿ ದೇವಿ ತೀವ್ರವಾಗಿ ಅನಾರೋಗ್ಯ ಪೀಡಿತವಾಗಿದ್ದು, ಆಕೆಯನ್ನು ನೋಡಲು ನೋಡಲು ಅನುಮತಿ ನೀಡುವಂತೆ ಅಸಾರಾಂ ಬಾಪು ಅರ್ಜಿಯಲ್ಲಿ ಕೋರಿದ್ದರು.
2013ರ ಅತ್ಯಾಚಾರ ಪ್ರಕರಣದಲ್ಲಿ ಏಪ್ರಿಲ್ 25,2018ರಂದು ಜೋಧಪುರದ ನ್ಯಾಯಾಲಯ ಅಸರಾಂ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅಪ್ರಾಪ್ತ ಬಾಲಕಿಯ ಮೇಲೆ ಐದು ವರ್ಷಗಳ ಹಿಂದೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಶಿಕ್ಷೆ ನೀಡಲಾಗಿದೆ.

ಅಸಾರಾಂ ಸಹಾಯಕರಾದ ಶರದ್ ಚಂದ್ರ ಮತ್ತು ಸಂಚಿತಾ ಅಲಿಯಾಸ್ ಶಿಲ್ಪಿ ಎಂಬ ಇಬ್ಬರಿಗೆ ಜೋಧಪುರ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ಜೋಧಪುರ ಸಮೀಪದ ಮನಾಯ್ ನಲ್ಲಿರುವ ಆಶ್ರಮಕ್ಕೆ 2013ರ ಆಗಸ್ಟ್ 15ರಂದು ತನ್ನನ್ನು ಕರೆಸಿಕೊಂಡು ತನ್ನ ಮೇಲೆ ಅಂದೇ ರಾತ್ರಿ ಅತ್ಯಾಚಾರ ನಡೆಸಲಾಗಿತ್ತು ಎಂದು 16 ವರ್ಷದ ಬಾಲಕಿ ದೂರು ಸಲ್ಲಿಸಿದ್ದಳು. ಈ ಪ್ರಕರಣದಲ್ಲಿ ಅಸರಾಂ ಶಿಕ್ಷೆಗೆ ಗುರಿಯಾಗಿದ್ದರು.
ಉತ್ತರ ಪ್ರದೇಶದ ಶಹಜಾನ್ಪುರಕ್ಕೆ ಸೇರಿದ ಯುವತಿ ಮಧ್ಯ ಪ್ರದೇಶದ ಛಿಂದ್ವಾರದಲ್ಲಿರುವ ಅಸರಾಂ ಆಶ್ರಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇದರ ಮಧ್ಯದಲ್ಲಿ ಆಕೆಯ ಮೇಲೆ ಅಸರಾಂ ಅತ್ಯಾಚಾರ ನಡೆಸಿದ್ದ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications