ದೇವರ ದುಡ್ಡು: ದೇಣಿಗೆ ಹಣ, ಚಿನ್ನ, ಬೆಳ್ಳಿ ಎಣಿಸುವುದರಲ್ಲಿ ಸಿಬ್ಬಂದಿ ಸುಸ್ತೋಸುಸ್ತು.!
ಜೈಪುರ್, ಫೆಬ್ರವರಿ.11: ಭಾರತೀಯರು ಧಾರ್ಮಿಕ ಕೇಂದ್ರಗಳಿಗೆ ದೇವಸ್ಥಾನಗಳಿಗೆ ದೇಣಿಗೆ ಮತ್ತು ದಕ್ಷಿಣೆ ನೀಡುವ ವಿಚಾರದಲ್ಲಿ ವಿಶಾಲ ಹೃದಯದವರು ಎಂದೇ ಹೇಳಲಾಗುತ್ತದೆ. ಇದನ್ನು ಸಾಬೀತುಪಡಿಸುವಂತಾ ಘಟನೆಯೊಂದು ರಾಜಸ್ಥಾನದಲ್ಲಿ ಇತ್ತೀಚಿಗೆ ವರದಿಯಾಗಿದೆ.
ರಾಜಸ್ಥಾನದ ಚಿತ್ತೋರಘರ್ ಸಮೀಪದ "ಶ್ರೀ ಸನ್ವಾಲಿಯಾ ಸೇಥ್" ದೇವಸ್ಥಾನದಲ್ಲಿ ಸಂಗ್ರಹವಾಗಿದ್ದ ಹಣದ ರಾಶಿಯನ್ನು ಎಣಿಕೆ ಮಾಡುವುದರಲ್ಲೇ ಸಿಬ್ಬಂದಿ ಸುಸ್ತು ಹೊಡೆದಿದ್ದಾರೆ. ಚತುರ್ದಶಿ ಹಿನ್ನೆಲೆಯಲ್ಲಿ ದೇವಸ್ಥಾನದ ಹುಂಡಿಯಲ್ಲಿ ಕೋಟಿ ಕೋಟಿ ರೂಪಾಯಿ ದಕ್ಷಿಣೆ ಜೊತೆಗೆ ಚಿನ್ನ, ಬೆಳ್ಳಿ ಸಹ ಸಂಗ್ರಹವಾಗಿದೆ.
ದೇವಾಲಯದ ಹುಂಡಿ ಎಣಿಕೆ ಕಾರ್ಯದಲ್ಲಿ 12ಕ್ಕೂ ಹೆಚ್ಚು ಸಿಬ್ಬಂದಿಯನ್ನು ಬಳಸಿಕೊಳ್ಳಲಾಗಿತ್ತಾದರೂ, ಎಣಿಕೆ ಕಾರ್ಯ ಬುಧವಾರ ಒಂದೇ ದಿನಕ್ಕೆ ಪೂರ್ಣವಾಗಲಿಲ್ಲ. ಈ ಹಿನ್ನೆಲೆ ಗುರುವಾರ ಸಹ ಹುಂಡಿ ಹಣ ಎಣಿಕೆ ಕಾರ್ಯ ನಡೆಸಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

6 ಕೋಟಿ ನಗದು, 91 ಗ್ರಾಂ ಚಿನ್ನ, 4 ಕೆಜಿ ಬೆಳ್ಳಿ ಸಂಗ್ರಹ:
ರಾಜಸ್ಥಾನದ ಚಿತ್ತೋರಘರ್ ಸಮೀಪದ "ಶ್ರೀ ಸನ್ವಾಲಿಯಾ ಸೇಥ್" ದೇವಸ್ಥಾನದ ಹುಂಡಿಯಲ್ಲಿ ಒಂದು ದಿನದ ಎಣಿಕೆ ಪೂರ್ಣಗೊಂಡಾಗ 6 ಕೋಟಿ 17 ಲಕ್ಷ 12 ಸಾವಿರ ರೂಪಾಯಿ ನಗದು ಹಣದ ಜೊತೆಗೆ 91 ಗ್ರಾಂ ಬಂಗಾರ, 4 ಕೆಜಿ 200 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಗುರುವಾರ ಮತ್ತೆ ಹುಂಡಿ ಹಣದ ಎಣಿಕೆ ಕಾರ್ಯ ಮುಂದುವರಿಸಲಾಗುತ್ತದೆ ಎಂದು ದೇವಸ್ಥಾನ ಆಡಳಿತ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ರತನ್ ಕುಮಾರ್ ಸ್ವಾಮಿ ತಿಳಿಸಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications